AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ ಟ್ರೇನರ್​​ ಕಿರುಕುಳಕ್ಕೆ ಬೇಸತ್ತ ವಿವಾಹಿತ ಮಹಿಳೆ; ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹೋಗಿ, ನೀರು ನೋಡಿ ಪ್ರಜ್ಞೆ ತಪ್ಪಿದರು

ಬಳಿಕ ಮಹಿಳೆ ಜಿಮ್​ ತರಬೇತುದಾರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಅಹ್ಮದಾಬಾದ್​​ನ ಸರ್ಖೇಜ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಈತನ ಹೆಸರು ನುಸ್ರು ಖಾನ್​ ತೇಜ್​ ಖಾನ್ ಪಠಾಣ್​ .

ಜಿಮ್​ ಟ್ರೇನರ್​​ ಕಿರುಕುಳಕ್ಕೆ ಬೇಸತ್ತ ವಿವಾಹಿತ ಮಹಿಳೆ; ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹೋಗಿ, ನೀರು ನೋಡಿ ಪ್ರಜ್ಞೆ ತಪ್ಪಿದರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 22, 2022 | 9:40 AM

Share

31 ವರ್ಷದ ವಿವಾಹಿತ ಮಹಿಳೆಯೊಬ್ಬರು ಜಿಮ್​ ಟ್ರೇನರ್​​ನಿಂದ ದೈಹಿಕ ದೌರ್ಜನ್ಯಕ್ಕೆ ಒಳಗಾಗಿ  ಆತ್ಮಹತ್ಯೆ ಪ್ರಯತ್ನ ಮಾಡಿದ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಈ ಜಿಮ್​ ತರಬೇತುದಾರ ಯುವತಿಗೆ ದೈಹಿಕವಾಗಿ ಹಿಂಸೆ ನೀಡಿದ್ದ. ಅಷ್ಟೇ ಅಲ್ಲ, ನಿರಂತರವಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಇದರಿಂದ ಹೆದರಿದ ಯುವತಿ ಸಬರಮತಿ ನದಿಗೆ ಹಾರಲು ಹೋಗಿದ್ದಾರೆ. ಆದರೆ ನದಿ ನೀರು ನೋಡುತ್ತಿದ್ದಂತೆ ಹೆದರಿ ಮೂರ್ಚೆ ಹೋಗಿದ್ದರು. ಅದನ್ನು ನೋಡಿದ ಆಟೋ  ಚಾಲಕ ಮತ್ತು ಅಲ್ಲಿಯೇ ಅಕ್ಕಪಕ್ಕದಲ್ಲಿದ್ದವರು ಅವಳನ್ನು ಕಾಪಾಡಿ, ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

ಬಳಿಕ ಮಹಿಳೆ ಜಿಮ್​ ತರಬೇತುದಾರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಅಹ್ಮದಾಬಾದ್​​ನ ಸರ್ಖೇಜ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಈತನ ಹೆಸರು ನುಸ್ರು ಖಾನ್​ ತೇಜ್​ ಖಾನ್ ಪಠಾಣ್​ (36). ಆರು ತಿಂಗಳ ಹಿಂದಿನಿಂದ ಯುವತಿಗೆ ಈತನ ಪರಿಚಯವಿದೆ. ಪಠಾಣ್​ ಕೇವಲ ಜಿಮ್​ ಟ್ರೆನರ್​ ಮಾತ್ರವಲ್ಲ, ಕಟ್ಟಡ ನಿರ್ಮಾಣ ಉದ್ಯಮದಲ್ಲಿ ತನ್ನ ಸಹೋದರನಿಗೆ ಸಹಾಯ ಮಾಡುತ್ತಿದ್ದ.  ಯುವತಿ ಮತ್ತು ಜಿಮ್​ ಟ್ರೇನರ್​​  ಪರಸ್ಪರ ಸಾಮಾಜಿಕ ಜಾಲತಾಣದ ಮೂಲಕ ಪರಿಚಿತರು. ಮೊದಮೊದಲು ಹೀಗೆ ಸೋಷಿಯಲ್​ ಮೀಡಿಯಾ ಇನ್​ಬಾಕ್ಸ್​​ನಲ್ಲೇ ಮೆಸೇಜ್ ಮಾಡಿಕೊಳ್ಳುತ್ತಿದ್ದ ಇವರು ನಂತರ ಫೋನ್​ ನಂಬರ್​ ಕೂಡ ಪಡೆದಿದ್ದರು. ಕೊನೆಗೆ ದಾತಾರ್ ದರ್ಗಾ ಎಂಬಲ್ಲಿ ಭೇಟಿಯಾಗಲು ನಿರ್ಧರಿಸಿದ್ದರು.

ಇವರಿಬ್ಬರೂ ಭೇಟಿಯಾದ ಬಳಿಕ ರಿಲೇಶನ್​​ಶಿಪ್​​ನಲ್ಲಿದ್ದರು. ಆದರೆ ಇತ್ತೀಚೆಗೆ ಪಠಾಣ್​ ಹಣಕ್ಕಾಗಿ ಯುವತಿಯನ್ನು ಪೀಡಿಸುತ್ತಿದ್ದ. ಸದಾ ನಿಂದಿಸುತ್ತಿದ್ದ. ಹಣ ಕೊಡದೆ ಇದ್ದರೆ ನಮ್ಮಿಬ್ಬರ ಸಂಬಂಧವನ್ನು ನಿನ್ನ ಮನೆಯವರಿಗೆ ತಿಳಿಸುತ್ತೇನೆ ಎಂದು ಹೇಳುತ್ತಿದ್ದ. ಈಗಾಗಲೇ ಮದುವೆಯಾಗಿದ್ದ ಮಹಿಳೆ ಆತನ ಮಾತು ಕೇಳಿ ದಿಗಿಲುಗೊಂಡಿದ್ದರು. ಕೊನೆಗೊಂದು ದಿನ ಹೇಳದೆ ಕೇಳದೆ ಮನೆಗೂ ಹೋಗಿ ಆಕೆಗೆ ಬೆದರಿಕೆ ಹಾಕಿದ್ದ. ಹೀಗೆ ಪಠಾಣ್​ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು, ಮನೆಯವರಿಗೆ ಹೆದರಿ ಓಡಿ ಹೋದ ಯುವತಿ ಸಬರಮತಿ ನದಿಗೆ ಹಾರಿ ಸಾಯುವ ನಿರ್ಧಾರ ಮಾಡಿದರು.

ಆಟೋದಲ್ಲಿ ಸಬರಮತಿ ನದಿಯವರೆಗೆ ಹೋಗಿ, ಅಲ್ಲಿ ದಡದ ಮೇಲೆ ಅಂಚಿನಲ್ಲಿ ನಿಂತಿದ್ದರು. ಆದರೆ ಕರೆದುಕೊಂಡು ಹೋದ ಆಟೋದವನಿಗೆ ಏನೋ ಅನುಮಾನ ಬಂದು ಅಲ್ಲಿಯೇ ಬದಿಗೆ ನಿಂತಿದ್ದ. ಆಕೆ ನದಿಯ ನೀರು ನೋಡಿ ಹೆದರಿಕೆಯಿಂದ ಎಚ್ಚರತಪ್ಪಿ ಬಿದ್ದಿದ್ದಾಳೆ. ಅಕ್ಕಪಕ್ಕದವರ ಸಹಾಯದಿಂದ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಆಟೋ ಚಾಲಕ ನಂತರ ಮನೆಯವರಿಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಆಕೆಯ ಪತಿ, ಕುಟುಂಬದವರು ನಂತರ ಕರೆದುಕೊಂಡು ಹೋಗಿದ್ದಾರೆ.  ಈ ಬಗ್ಗೆ ಸ್ಥಳೀಯ ಎಸಿಪಿ ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಡರ್ ಪಾಸ್​ನಲ್ಲಿ ನೀರು ಇರಲಿಲ್ಲ ಅಂದಿದ್ದರೆ ನನ್ನ ಮಗಳು ವಾಪಸ್ ಬರುತ್ತಿದ್ದಳು; ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಮೃತಪಟ್ಟ ಬಾಲಕಿ ತಾಯಿ ಕಣ್ಣೀರು

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ