AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ ಟ್ರೇನರ್​​ ಕಿರುಕುಳಕ್ಕೆ ಬೇಸತ್ತ ವಿವಾಹಿತ ಮಹಿಳೆ; ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹೋಗಿ, ನೀರು ನೋಡಿ ಪ್ರಜ್ಞೆ ತಪ್ಪಿದರು

ಬಳಿಕ ಮಹಿಳೆ ಜಿಮ್​ ತರಬೇತುದಾರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಅಹ್ಮದಾಬಾದ್​​ನ ಸರ್ಖೇಜ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಈತನ ಹೆಸರು ನುಸ್ರು ಖಾನ್​ ತೇಜ್​ ಖಾನ್ ಪಠಾಣ್​ .

ಜಿಮ್​ ಟ್ರೇನರ್​​ ಕಿರುಕುಳಕ್ಕೆ ಬೇಸತ್ತ ವಿವಾಹಿತ ಮಹಿಳೆ; ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹೋಗಿ, ನೀರು ನೋಡಿ ಪ್ರಜ್ಞೆ ತಪ್ಪಿದರು
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Mar 22, 2022 | 9:40 AM

Share

31 ವರ್ಷದ ವಿವಾಹಿತ ಮಹಿಳೆಯೊಬ್ಬರು ಜಿಮ್​ ಟ್ರೇನರ್​​ನಿಂದ ದೈಹಿಕ ದೌರ್ಜನ್ಯಕ್ಕೆ ಒಳಗಾಗಿ  ಆತ್ಮಹತ್ಯೆ ಪ್ರಯತ್ನ ಮಾಡಿದ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಈ ಜಿಮ್​ ತರಬೇತುದಾರ ಯುವತಿಗೆ ದೈಹಿಕವಾಗಿ ಹಿಂಸೆ ನೀಡಿದ್ದ. ಅಷ್ಟೇ ಅಲ್ಲ, ನಿರಂತರವಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಇದರಿಂದ ಹೆದರಿದ ಯುವತಿ ಸಬರಮತಿ ನದಿಗೆ ಹಾರಲು ಹೋಗಿದ್ದಾರೆ. ಆದರೆ ನದಿ ನೀರು ನೋಡುತ್ತಿದ್ದಂತೆ ಹೆದರಿ ಮೂರ್ಚೆ ಹೋಗಿದ್ದರು. ಅದನ್ನು ನೋಡಿದ ಆಟೋ  ಚಾಲಕ ಮತ್ತು ಅಲ್ಲಿಯೇ ಅಕ್ಕಪಕ್ಕದಲ್ಲಿದ್ದವರು ಅವಳನ್ನು ಕಾಪಾಡಿ, ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

ಬಳಿಕ ಮಹಿಳೆ ಜಿಮ್​ ತರಬೇತುದಾರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಅಹ್ಮದಾಬಾದ್​​ನ ಸರ್ಖೇಜ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಈತನ ಹೆಸರು ನುಸ್ರು ಖಾನ್​ ತೇಜ್​ ಖಾನ್ ಪಠಾಣ್​ (36). ಆರು ತಿಂಗಳ ಹಿಂದಿನಿಂದ ಯುವತಿಗೆ ಈತನ ಪರಿಚಯವಿದೆ. ಪಠಾಣ್​ ಕೇವಲ ಜಿಮ್​ ಟ್ರೆನರ್​ ಮಾತ್ರವಲ್ಲ, ಕಟ್ಟಡ ನಿರ್ಮಾಣ ಉದ್ಯಮದಲ್ಲಿ ತನ್ನ ಸಹೋದರನಿಗೆ ಸಹಾಯ ಮಾಡುತ್ತಿದ್ದ.  ಯುವತಿ ಮತ್ತು ಜಿಮ್​ ಟ್ರೇನರ್​​  ಪರಸ್ಪರ ಸಾಮಾಜಿಕ ಜಾಲತಾಣದ ಮೂಲಕ ಪರಿಚಿತರು. ಮೊದಮೊದಲು ಹೀಗೆ ಸೋಷಿಯಲ್​ ಮೀಡಿಯಾ ಇನ್​ಬಾಕ್ಸ್​​ನಲ್ಲೇ ಮೆಸೇಜ್ ಮಾಡಿಕೊಳ್ಳುತ್ತಿದ್ದ ಇವರು ನಂತರ ಫೋನ್​ ನಂಬರ್​ ಕೂಡ ಪಡೆದಿದ್ದರು. ಕೊನೆಗೆ ದಾತಾರ್ ದರ್ಗಾ ಎಂಬಲ್ಲಿ ಭೇಟಿಯಾಗಲು ನಿರ್ಧರಿಸಿದ್ದರು.

ಇವರಿಬ್ಬರೂ ಭೇಟಿಯಾದ ಬಳಿಕ ರಿಲೇಶನ್​​ಶಿಪ್​​ನಲ್ಲಿದ್ದರು. ಆದರೆ ಇತ್ತೀಚೆಗೆ ಪಠಾಣ್​ ಹಣಕ್ಕಾಗಿ ಯುವತಿಯನ್ನು ಪೀಡಿಸುತ್ತಿದ್ದ. ಸದಾ ನಿಂದಿಸುತ್ತಿದ್ದ. ಹಣ ಕೊಡದೆ ಇದ್ದರೆ ನಮ್ಮಿಬ್ಬರ ಸಂಬಂಧವನ್ನು ನಿನ್ನ ಮನೆಯವರಿಗೆ ತಿಳಿಸುತ್ತೇನೆ ಎಂದು ಹೇಳುತ್ತಿದ್ದ. ಈಗಾಗಲೇ ಮದುವೆಯಾಗಿದ್ದ ಮಹಿಳೆ ಆತನ ಮಾತು ಕೇಳಿ ದಿಗಿಲುಗೊಂಡಿದ್ದರು. ಕೊನೆಗೊಂದು ದಿನ ಹೇಳದೆ ಕೇಳದೆ ಮನೆಗೂ ಹೋಗಿ ಆಕೆಗೆ ಬೆದರಿಕೆ ಹಾಕಿದ್ದ. ಹೀಗೆ ಪಠಾಣ್​ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು, ಮನೆಯವರಿಗೆ ಹೆದರಿ ಓಡಿ ಹೋದ ಯುವತಿ ಸಬರಮತಿ ನದಿಗೆ ಹಾರಿ ಸಾಯುವ ನಿರ್ಧಾರ ಮಾಡಿದರು.

ಆಟೋದಲ್ಲಿ ಸಬರಮತಿ ನದಿಯವರೆಗೆ ಹೋಗಿ, ಅಲ್ಲಿ ದಡದ ಮೇಲೆ ಅಂಚಿನಲ್ಲಿ ನಿಂತಿದ್ದರು. ಆದರೆ ಕರೆದುಕೊಂಡು ಹೋದ ಆಟೋದವನಿಗೆ ಏನೋ ಅನುಮಾನ ಬಂದು ಅಲ್ಲಿಯೇ ಬದಿಗೆ ನಿಂತಿದ್ದ. ಆಕೆ ನದಿಯ ನೀರು ನೋಡಿ ಹೆದರಿಕೆಯಿಂದ ಎಚ್ಚರತಪ್ಪಿ ಬಿದ್ದಿದ್ದಾಳೆ. ಅಕ್ಕಪಕ್ಕದವರ ಸಹಾಯದಿಂದ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಆಟೋ ಚಾಲಕ ನಂತರ ಮನೆಯವರಿಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಆಕೆಯ ಪತಿ, ಕುಟುಂಬದವರು ನಂತರ ಕರೆದುಕೊಂಡು ಹೋಗಿದ್ದಾರೆ.  ಈ ಬಗ್ಗೆ ಸ್ಥಳೀಯ ಎಸಿಪಿ ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಡರ್ ಪಾಸ್​ನಲ್ಲಿ ನೀರು ಇರಲಿಲ್ಲ ಅಂದಿದ್ದರೆ ನನ್ನ ಮಗಳು ವಾಪಸ್ ಬರುತ್ತಿದ್ದಳು; ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಮೃತಪಟ್ಟ ಬಾಲಕಿ ತಾಯಿ ಕಣ್ಣೀರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ