AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ
ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿ ಬಂದಿರುವ ಕೃಷ್ಣಾ ಮಂಡಲ್
TV9 Web
| Edited By: |

Updated on:Jun 01, 2022 | 12:29 PM

Share

ಕೊಲ್ಕತ್ತಾ: ಬಾಂಗ್ಲಾದೇಶದ 22 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯ ಹುಡುಗನನ್ನು ಮದುವೆಯಾಗಲೆಂದು ಸುಮಾರು ಒಂದು ತಾಸು ನದಿ ಈಜಿ ಗಡಿ ದಾಟಿ ಭಾರತಕ್ಕೆ ಬಂದಿದ್ದಾರೆ. ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು. ಬಾಂಗ್ಲಾದೇಶದಿಂದ (Bangladesh) ಬಂದ ಮಹಿಳೆಯನ್ನು ಕೃಷ್ಣಾ ಮಂಡಲ್ ಎಂದು ಗುರುತಿಸಲಾಗಿದೆ. ಈಕೆ ಪಶ್ಚಿಮ ಬಂಗಾಳದ ಅಭಿಷೇಕ್​ ಮಂಡಲ್​ನನ್ನು ಫೇಸ್​ಬುಕ್​ನಲ್ಲಿ ಪರಿಚಯ ಮಾಡಿಕೊಂಡಿದ್ದರು. ಆ ಪರಿಚಯವು ನಂತರದ ದಿನಗಳಲ್ಲಿ ಪ್ರೇಮಕ್ಕೆ ತಿರುಗಿತ್ತು. ಬಾಂಗ್ಲಾದ ಯುವತಿ ಕೃಷ್ಣಾ ಬಳಿ ಪಾಸ್​ಪೋರ್ಟ್​ ಇರಲಿಲ್ಲ. ಹೀಗಾಗಿ ಅವರು ಅಕ್ರಮವಾಗಿಯೇ ಭಾರತದ ಗಡಿ ಪ್ರವೇಶಿಸಲು ಆಕೆ ನಿರ್ಧರಿಸಿದರು.

ತನ್ನ ಪ್ರಿಯಕರನ ಮಡಿಲು ಸೇರುವಲ್ಲಿ ಕೃಷ್ಣಾ ಯಶಸ್ವಿಯಾದಳು. ಮೂರು ದಿನಗಳ ಹಿಂದೆ ಕೊಲ್ಕತ್ತಾದ ಕಾಳಿಘಾಟ್​ ದೇಗುಲದಲ್ಲಿ ಅವರ ಮದುವೆಯೂ ಆಯಿತು. ಆದರೆ ದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ನಂತರ ಪೊಲೀಸರು ಅವರನ್ನು ಬಂಧಿಸಿದರು. ಬಾಂಗ್ಲಾದೇಶದ ಹೈಕಮಿಷನ್​ ಕಚೇರಿಗೆ ಕೃಷ್ಣಾ ಅವರನ್ನು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಬಾಂಗ್ಲಾದೇಶದ ಹದಿಹರೆಯದ ಯುವಕ ಇಮಾನ್ ಹುಸೇನ್ ತನ್ನಿಷ್ಟದ ಚಾಕೊಲೇಟ್ ಖರೀದಿಸಲೆಂದು ನದಿ ದಾಟಿ ಭಾರತಕ್ಕೆ ಬಂದಿದ್ದ. ನಂತರ ಈ ಯುವಕನನ್ನು ಬಂಧಿಸಿ, ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ನ್ಯಾಯಾಲಯವು ಈ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ತಂತಿಬೇಲಿಯಲ್ಲಿ ಇರುವ ಲೋಪವನ್ನು ಗುರುತಿಸಿಕೊಂಡಿರುವ ಬಾಂಗ್ಲಾದೇಶೀಯರು ಈ ಭಾರತಕ್ಕೆ ಹಲವು ಬಾರಿ ಬಂದಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Wed, 1 June 22

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?