AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ
ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿ ಬಂದಿರುವ ಕೃಷ್ಣಾ ಮಂಡಲ್
TV9 Web
| Edited By: |

Updated on:Jun 01, 2022 | 12:29 PM

Share

ಕೊಲ್ಕತ್ತಾ: ಬಾಂಗ್ಲಾದೇಶದ 22 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯ ಹುಡುಗನನ್ನು ಮದುವೆಯಾಗಲೆಂದು ಸುಮಾರು ಒಂದು ತಾಸು ನದಿ ಈಜಿ ಗಡಿ ದಾಟಿ ಭಾರತಕ್ಕೆ ಬಂದಿದ್ದಾರೆ. ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು. ಬಾಂಗ್ಲಾದೇಶದಿಂದ (Bangladesh) ಬಂದ ಮಹಿಳೆಯನ್ನು ಕೃಷ್ಣಾ ಮಂಡಲ್ ಎಂದು ಗುರುತಿಸಲಾಗಿದೆ. ಈಕೆ ಪಶ್ಚಿಮ ಬಂಗಾಳದ ಅಭಿಷೇಕ್​ ಮಂಡಲ್​ನನ್ನು ಫೇಸ್​ಬುಕ್​ನಲ್ಲಿ ಪರಿಚಯ ಮಾಡಿಕೊಂಡಿದ್ದರು. ಆ ಪರಿಚಯವು ನಂತರದ ದಿನಗಳಲ್ಲಿ ಪ್ರೇಮಕ್ಕೆ ತಿರುಗಿತ್ತು. ಬಾಂಗ್ಲಾದ ಯುವತಿ ಕೃಷ್ಣಾ ಬಳಿ ಪಾಸ್​ಪೋರ್ಟ್​ ಇರಲಿಲ್ಲ. ಹೀಗಾಗಿ ಅವರು ಅಕ್ರಮವಾಗಿಯೇ ಭಾರತದ ಗಡಿ ಪ್ರವೇಶಿಸಲು ಆಕೆ ನಿರ್ಧರಿಸಿದರು.

ತನ್ನ ಪ್ರಿಯಕರನ ಮಡಿಲು ಸೇರುವಲ್ಲಿ ಕೃಷ್ಣಾ ಯಶಸ್ವಿಯಾದಳು. ಮೂರು ದಿನಗಳ ಹಿಂದೆ ಕೊಲ್ಕತ್ತಾದ ಕಾಳಿಘಾಟ್​ ದೇಗುಲದಲ್ಲಿ ಅವರ ಮದುವೆಯೂ ಆಯಿತು. ಆದರೆ ದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ನಂತರ ಪೊಲೀಸರು ಅವರನ್ನು ಬಂಧಿಸಿದರು. ಬಾಂಗ್ಲಾದೇಶದ ಹೈಕಮಿಷನ್​ ಕಚೇರಿಗೆ ಕೃಷ್ಣಾ ಅವರನ್ನು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಬಾಂಗ್ಲಾದೇಶದ ಹದಿಹರೆಯದ ಯುವಕ ಇಮಾನ್ ಹುಸೇನ್ ತನ್ನಿಷ್ಟದ ಚಾಕೊಲೇಟ್ ಖರೀದಿಸಲೆಂದು ನದಿ ದಾಟಿ ಭಾರತಕ್ಕೆ ಬಂದಿದ್ದ. ನಂತರ ಈ ಯುವಕನನ್ನು ಬಂಧಿಸಿ, ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ನ್ಯಾಯಾಲಯವು ಈ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ತಂತಿಬೇಲಿಯಲ್ಲಿ ಇರುವ ಲೋಪವನ್ನು ಗುರುತಿಸಿಕೊಂಡಿರುವ ಬಾಂಗ್ಲಾದೇಶೀಯರು ಈ ಭಾರತಕ್ಕೆ ಹಲವು ಬಾರಿ ಬಂದಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Wed, 1 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್