AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು.

ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ
ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿ ಬಂದಿರುವ ಕೃಷ್ಣಾ ಮಂಡಲ್
TV9 Web
| Edited By: |

Updated on:Jun 01, 2022 | 12:29 PM

Share

ಕೊಲ್ಕತ್ತಾ: ಬಾಂಗ್ಲಾದೇಶದ 22 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯ ಹುಡುಗನನ್ನು ಮದುವೆಯಾಗಲೆಂದು ಸುಮಾರು ಒಂದು ತಾಸು ನದಿ ಈಜಿ ಗಡಿ ದಾಟಿ ಭಾರತಕ್ಕೆ ಬಂದಿದ್ದಾರೆ. ಈಕೆ ನದಿ ದಾಟಿದ ಹಾದಿಯಲ್ಲಿ ರಾಯಲ್ ಬೆಂಗಾಲ್ ಟೈಗರ್​ಗಳಿಗೆ ಹೆಸರುವಾಸಿಯಾದ ಸುಂದರಬನದ ಕಾಡುಗಳಿದ್ದವು. ಬಾಂಗ್ಲಾದೇಶದಿಂದ (Bangladesh) ಬಂದ ಮಹಿಳೆಯನ್ನು ಕೃಷ್ಣಾ ಮಂಡಲ್ ಎಂದು ಗುರುತಿಸಲಾಗಿದೆ. ಈಕೆ ಪಶ್ಚಿಮ ಬಂಗಾಳದ ಅಭಿಷೇಕ್​ ಮಂಡಲ್​ನನ್ನು ಫೇಸ್​ಬುಕ್​ನಲ್ಲಿ ಪರಿಚಯ ಮಾಡಿಕೊಂಡಿದ್ದರು. ಆ ಪರಿಚಯವು ನಂತರದ ದಿನಗಳಲ್ಲಿ ಪ್ರೇಮಕ್ಕೆ ತಿರುಗಿತ್ತು. ಬಾಂಗ್ಲಾದ ಯುವತಿ ಕೃಷ್ಣಾ ಬಳಿ ಪಾಸ್​ಪೋರ್ಟ್​ ಇರಲಿಲ್ಲ. ಹೀಗಾಗಿ ಅವರು ಅಕ್ರಮವಾಗಿಯೇ ಭಾರತದ ಗಡಿ ಪ್ರವೇಶಿಸಲು ಆಕೆ ನಿರ್ಧರಿಸಿದರು.

ತನ್ನ ಪ್ರಿಯಕರನ ಮಡಿಲು ಸೇರುವಲ್ಲಿ ಕೃಷ್ಣಾ ಯಶಸ್ವಿಯಾದಳು. ಮೂರು ದಿನಗಳ ಹಿಂದೆ ಕೊಲ್ಕತ್ತಾದ ಕಾಳಿಘಾಟ್​ ದೇಗುಲದಲ್ಲಿ ಅವರ ಮದುವೆಯೂ ಆಯಿತು. ಆದರೆ ದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ನಂತರ ಪೊಲೀಸರು ಅವರನ್ನು ಬಂಧಿಸಿದರು. ಬಾಂಗ್ಲಾದೇಶದ ಹೈಕಮಿಷನ್​ ಕಚೇರಿಗೆ ಕೃಷ್ಣಾ ಅವರನ್ನು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಬಾಂಗ್ಲಾದೇಶದ ಹದಿಹರೆಯದ ಯುವಕ ಇಮಾನ್ ಹುಸೇನ್ ತನ್ನಿಷ್ಟದ ಚಾಕೊಲೇಟ್ ಖರೀದಿಸಲೆಂದು ನದಿ ದಾಟಿ ಭಾರತಕ್ಕೆ ಬಂದಿದ್ದ. ನಂತರ ಈ ಯುವಕನನ್ನು ಬಂಧಿಸಿ, ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ನ್ಯಾಯಾಲಯವು ಈ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ತಂತಿಬೇಲಿಯಲ್ಲಿ ಇರುವ ಲೋಪವನ್ನು ಗುರುತಿಸಿಕೊಂಡಿರುವ ಬಾಂಗ್ಲಾದೇಶೀಯರು ಈ ಭಾರತಕ್ಕೆ ಹಲವು ಬಾರಿ ಬಂದಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Wed, 1 June 22

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ