AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ನಲ್ಲಿ ಮಹಿಳೆಗೆ ಥಳಿಸಿ, ಅರೆಬೆತ್ತಲೆ ಮಾಡಿ ಮರಕ್ಕೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಪತ್ತೆ; ನಾಲ್ವರು ಆರೋಪಿಗಳು ವಶಕ್ಕೆ

ಮಹಿಳೆಯು ಒಬ್ಬ ವ್ಯಕ್ತಿ ಜತೆ ಅಕ್ರಮ ಸಂಬಂಧವನ್ನು ಹೊಂದಿದ್ದಳು ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ. ಆ ವ್ಯಕ್ತಿ ಇತರ ಮೂವರು ಕುಟುಂಬ ಸದಸ್ಯರೊಂದಿಗೆ ಬುಧವಾರ ರಾತ್ರಿ ಈ ಕೃತ್ಯವೆಸಗಿದ್ದಾನೆ.

ಜಾರ್ಖಂಡ್‌ನಲ್ಲಿ ಮಹಿಳೆಗೆ ಥಳಿಸಿ, ಅರೆಬೆತ್ತಲೆ ಮಾಡಿ ಮರಕ್ಕೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಪತ್ತೆ; ನಾಲ್ವರು ಆರೋಪಿಗಳು ವಶಕ್ಕೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 28, 2023 | 7:18 PM

Share

ಗಿರಿದಿಹ್ ಜುಲೈ 28: ಜಾರ್ಖಂಡ್‌ನ (Jharkhand) ಗಿರಿದಿಹ್  (Giridih)ಜಿಲ್ಲೆಯಲ್ಲಿ 26 ವರ್ಷದ ಮಹಿಳೆಗೆ ಥಳಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ಮರಕ್ಕೆ ಕಟ್ಟಿಹಾಕಿದ ಪ್ರಕರಣ ವರದಿ ಆಗಿದೆ. ಗುರುವಾರ ಬೆಳಗ್ಗೆ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ರಾಜ್ಯ ರಾಜಧಾನಿ ರಾಂಚಿಯಿಂದ 170 ಕಿಮೀ ದೂರದಲ್ಲಿರುವ ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಮಹಿಳೆಯು ಒಬ್ಬ ವ್ಯಕ್ತಿ ಜತೆ ಅಕ್ರಮ ಸಂಬಂಧವನ್ನು ಹೊಂದಿದ್ದಳು ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ. ಆ ವ್ಯಕ್ತಿ ಇತರ ಮೂವರು ಕುಟುಂಬ ಸದಸ್ಯರೊಂದಿಗೆ ಬುಧವಾರ ರಾತ್ರಿ ಈ ಕೃತ್ಯವೆಸಗಿದ್ದಾನೆ. ನಾಲ್ವರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಬಾಗೋದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ನೌಶಾದ್ ಆಲಂ ಅವರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೊ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ ಸರ್ಕಾರ

ಮನೆಯಿಂದ ಹೊರಗೆ ಬರುವಂತೆ ತನಗೆ ಕರೆ ಬಂದಿತ್ತು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆಕೆ ಹೊರಗೆ ಬರುವಷ್ಟರಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಇಬ್ಬರು ಯುವಕರು ಅಲ್ಲಿದ್ದರು. ಆಕೆಯನ್ನು ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ಥಳಿಸಿ, ಬಟ್ಟೆ ಹರಿದು ಮರಕ್ಕೆ ಕಟ್ಟಿ ಹಾಕಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!