AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಸ್ಕ್ ಹಾಕದ ಮಹಿಳೆಯನ್ನು ರಸ್ತೆಯಲ್ಲಿ, ಕೂದಲು ಹಿಡಿದು ಎಳೆದಾಡಿ ಒದ್ದ ಪೊಲೀಸರು..

ಮಹಿಳೆ ಮತ್ತು ಆಕೆಯ ಮಗಳು ಕಿರಾಣಿ ಅಂಗಡಿಗೆ ಹೊರಟಿದ್ದರು. ಮಹಿಳೆ ಮಾಸ್ಕ್ ಧರಿಸದೆ ಇರುವುದನ್ನು ನೋಡಿದ ಪೊಲೀಸರು ಹೀಗೆ ಥಳಿಸಿದ್ದಾರೆ ಎಂದು ವರದಿಯಾಗಿದೆ.

Viral Video: ಮಾಸ್ಕ್ ಹಾಕದ ಮಹಿಳೆಯನ್ನು ರಸ್ತೆಯಲ್ಲಿ, ಕೂದಲು ಹಿಡಿದು ಎಳೆದಾಡಿ ಒದ್ದ ಪೊಲೀಸರು..
ರಸ್ತೆ ಮೇಲೆ ಮಹಿಳೆಗೆ ಥಳಿಸುತ್ತಿರುವ ಪೊಲೀಸರು
Lakshmi Hegde
|

Updated on: May 19, 2021 | 8:30 PM

Share

ಭೋಪಾಲ್​: ಮಧ್ಯರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ಪೊಲೀಸರು ಒದ್ದು, ಎಳೆದಾಡಿ, ಹೊಡೆದ ವಿಡಿಯೋವೊಂದು ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಕೊವಿಡ್​ 19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಈ ಮಹಿಳೆ ಮಾಸ್ಕ್ ಹಾಕದೆ ಸಾರ್ವಜನಿಕ ಸ್ಥಳಕ್ಕೆ ಬಂದಿದ್ದಾರೆಂದು ಪೊಲೀಸರು ಈಕೆಗೆ ಇಷ್ಟು ಹಿಂಸೆ ನೀಡಿದ್ದಾರೆಂದು ವರದಿಯಾಗಿದೆ. ವಿಡಿಯೋ ನೋಡಿದವರೆಲ್ಲ ಪೊಲೀಸರು ಇಷ್ಟು ಕ್ರೌರ್ಯ ತೋರಿಸುವ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ.

ಈ ಮಹಿಳೆ ಮತ್ತು ಆಕೆಯ ಮಗಳು ಕಿರಾಣಿ ಅಂಗಡಿಗೆ ಹೊರಟಿದ್ದರು. ಮಹಿಳೆ ಮಾಸ್ಕ್ ಧರಿಸದೆ ಇರುವುದನ್ನು ನೋಡಿದ ಪೊಲೀಸರು ಹೀಗೆ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿಯೇ ಇದ್ದ ಕೆಲವರು ದೃಶ್ಯವನ್ನು ಸೆರೆಹಿಡಿದಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಕೆ ಎರಡೆರಡು ಬಾರಿ ರಸ್ತೆಯ ಮೇಲೆ ಬಿದ್ದು, ಏಳಲು ತುಂಬ ಕಷ್ಟಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹಾಗೇ ಆಕೆಯ ಕೂದಲನ್ನೂ ಹಿಡಿದು ಎಳೆದು ಪೊಲೀಸ್ ಜೀಪು ಹತ್ತಿಸಲೂ ಪ್ರಯತ್ನಿಸುತ್ತಾರೆ. ಈ ವೇಳೆ ಆಕೆಯ ಮಗಳು ಮಧ್ಯಪ್ರವೇಶಿಸಿ ತಾಯಿಯನ್ನು ಹಿಡಿದು ಎಳೆಯುತ್ತಾಳೆ. ಘಟನೆ ನಡೆದಿದ್ದು ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ಎಂದು ವರದಿಯಾಗಿದೆ. ಹೀಗೆ ನಡುರಸ್ತೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಥಳಿಸುವುದು, ಹೊಡೆಯುವ ವಿಡಿಯೋ ವೈರಲ್ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ಕೆಲವು ರಾಜ್ಯಗಳಲ್ಲಿ ನಡೆದ ಇಂಥದ್ದೇ ಘಟನೆಗಳು ವರದಿಯಾಗಿವೆ. ಅದಕ್ಕೆ ಸಂಬಂಧಪಟ್ಟ ವಿಡಿಯೋಗಳೂ ವೈರಲ್ ಆಗಿ, ಅಸಮಾಧಾನ ಹುಟ್ಟುಹಾಕಿವೆ.

ಇದನ್ನೂ ಓದಿ: Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

Karnataka Covid Update: ಕರ್ನಾಟಕದಲ್ಲಿ ಇಂದು 34,281 ಜನರಿಗೆ ಸೋಂಕು ದೃಢ; ಕೊರೊನಾ ಪ್ರಕರಣಗಳ ಸಂಪೂರ್ಣ ವಿವರ ಇಲ್ಲಿದೆ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ