AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಸ್ಕ್ ಹಾಕದ ಮಹಿಳೆಯನ್ನು ರಸ್ತೆಯಲ್ಲಿ, ಕೂದಲು ಹಿಡಿದು ಎಳೆದಾಡಿ ಒದ್ದ ಪೊಲೀಸರು..

ಮಹಿಳೆ ಮತ್ತು ಆಕೆಯ ಮಗಳು ಕಿರಾಣಿ ಅಂಗಡಿಗೆ ಹೊರಟಿದ್ದರು. ಮಹಿಳೆ ಮಾಸ್ಕ್ ಧರಿಸದೆ ಇರುವುದನ್ನು ನೋಡಿದ ಪೊಲೀಸರು ಹೀಗೆ ಥಳಿಸಿದ್ದಾರೆ ಎಂದು ವರದಿಯಾಗಿದೆ.

Viral Video: ಮಾಸ್ಕ್ ಹಾಕದ ಮಹಿಳೆಯನ್ನು ರಸ್ತೆಯಲ್ಲಿ, ಕೂದಲು ಹಿಡಿದು ಎಳೆದಾಡಿ ಒದ್ದ ಪೊಲೀಸರು..
ರಸ್ತೆ ಮೇಲೆ ಮಹಿಳೆಗೆ ಥಳಿಸುತ್ತಿರುವ ಪೊಲೀಸರು
Lakshmi Hegde
|

Updated on: May 19, 2021 | 8:30 PM

Share

ಭೋಪಾಲ್​: ಮಧ್ಯರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ಪೊಲೀಸರು ಒದ್ದು, ಎಳೆದಾಡಿ, ಹೊಡೆದ ವಿಡಿಯೋವೊಂದು ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಕೊವಿಡ್​ 19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಈ ಮಹಿಳೆ ಮಾಸ್ಕ್ ಹಾಕದೆ ಸಾರ್ವಜನಿಕ ಸ್ಥಳಕ್ಕೆ ಬಂದಿದ್ದಾರೆಂದು ಪೊಲೀಸರು ಈಕೆಗೆ ಇಷ್ಟು ಹಿಂಸೆ ನೀಡಿದ್ದಾರೆಂದು ವರದಿಯಾಗಿದೆ. ವಿಡಿಯೋ ನೋಡಿದವರೆಲ್ಲ ಪೊಲೀಸರು ಇಷ್ಟು ಕ್ರೌರ್ಯ ತೋರಿಸುವ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ.

ಈ ಮಹಿಳೆ ಮತ್ತು ಆಕೆಯ ಮಗಳು ಕಿರಾಣಿ ಅಂಗಡಿಗೆ ಹೊರಟಿದ್ದರು. ಮಹಿಳೆ ಮಾಸ್ಕ್ ಧರಿಸದೆ ಇರುವುದನ್ನು ನೋಡಿದ ಪೊಲೀಸರು ಹೀಗೆ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿಯೇ ಇದ್ದ ಕೆಲವರು ದೃಶ್ಯವನ್ನು ಸೆರೆಹಿಡಿದಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಕೆ ಎರಡೆರಡು ಬಾರಿ ರಸ್ತೆಯ ಮೇಲೆ ಬಿದ್ದು, ಏಳಲು ತುಂಬ ಕಷ್ಟಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹಾಗೇ ಆಕೆಯ ಕೂದಲನ್ನೂ ಹಿಡಿದು ಎಳೆದು ಪೊಲೀಸ್ ಜೀಪು ಹತ್ತಿಸಲೂ ಪ್ರಯತ್ನಿಸುತ್ತಾರೆ. ಈ ವೇಳೆ ಆಕೆಯ ಮಗಳು ಮಧ್ಯಪ್ರವೇಶಿಸಿ ತಾಯಿಯನ್ನು ಹಿಡಿದು ಎಳೆಯುತ್ತಾಳೆ. ಘಟನೆ ನಡೆದಿದ್ದು ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ಎಂದು ವರದಿಯಾಗಿದೆ. ಹೀಗೆ ನಡುರಸ್ತೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಥಳಿಸುವುದು, ಹೊಡೆಯುವ ವಿಡಿಯೋ ವೈರಲ್ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ಕೆಲವು ರಾಜ್ಯಗಳಲ್ಲಿ ನಡೆದ ಇಂಥದ್ದೇ ಘಟನೆಗಳು ವರದಿಯಾಗಿವೆ. ಅದಕ್ಕೆ ಸಂಬಂಧಪಟ್ಟ ವಿಡಿಯೋಗಳೂ ವೈರಲ್ ಆಗಿ, ಅಸಮಾಧಾನ ಹುಟ್ಟುಹಾಕಿವೆ.

ಇದನ್ನೂ ಓದಿ: Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

Karnataka Covid Update: ಕರ್ನಾಟಕದಲ್ಲಿ ಇಂದು 34,281 ಜನರಿಗೆ ಸೋಂಕು ದೃಢ; ಕೊರೊನಾ ಪ್ರಕರಣಗಳ ಸಂಪೂರ್ಣ ವಿವರ ಇಲ್ಲಿದೆ

Follow Us
Lakshmi Hegde
Lakshmi Hegde
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು