AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಷ್ಟೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಗೆ ಎಸೆದ ತಾಯಿ!

ತಾಯಿ ತನಗೆಷ್ಟೇ ಕಷ್ಟವಾದರೂ ಮಕ್ಕಳಿಗೆ ನೋವಾಗದಂತೆ ನೋಡಿಕೊಳ್ಳುತ್ತಾಳೆ. ಅಮ್ಮ ಮಕ್ಕಳಿಗಾಗಿ ಯಾವ ತ್ಯಾಗ ಬೇಕಾದರೂ ಮಾಡುತ್ತಾಳೆ. ಅದೇ ಕಾರಣಕ್ಕೆ ತಾಯಿಗೆ ದೇವರ ಸ್ಥಾನ ನೀಡಲಾಗಿದೆ. ಆದರೆ, ತಮಿಳುನಾಡಿನ ತಿರುಚೆಂಡೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯ ಕಸದ ತೊಟ್ಟಿಗೆ ಯುವತಿಯೊಬ್ಬಳು ಮಗುವನ್ನು ಎಸೆದ ಆಘಾತಕಾರಿ ಘಟನೆ ನಡೆದಿದೆ. ತೂತುಕುಡಿ ಜಿಲ್ಲೆಯ ತಿರುಚೆಂಡೂರಿನಲ್ಲಿ ಯುವತಿಯೊಬ್ಬಳು ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿ ಆ ಮಗುವನ್ನು ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದಿದ್ದಾಳೆ. ಈ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

ಆಗಷ್ಟೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಗೆ ಎಸೆದ ತಾಯಿ!
Newborn Baby
ಸುಷ್ಮಾ ಚಕ್ರೆ
|

Updated on: Jan 05, 2026 | 8:42 PM

Share

ಚೆನ್ನೈ, ಜನವರಿ 5: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಯುವತಿಯೊಬ್ಬಳು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ (Delivery) ಕೆಲವೇ ಗಂಟೆಗಳಲ್ಲಿ ಯುವತಿಯೊಬ್ಬಳು ತನ್ನ ಮಗುವನ್ನು ಕಸದ ತೊಟ್ಟಿಗೆ ಎಸೆದಿದ್ದಾಳೆ. ಕಸದ ತೊಟ್ಟಿಯಲ್ಲಿ ಮಗು ಸಿಕ್ಕ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಗು ಜನಿಸಿದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವನ್ನು ಎಸೆಯಲಾಗಿದೆ.

ಆ ಯುವತಿಗೆ ಯುವಕನೊಬ್ಬನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಆತನೊಂದಿಗಿನ ನಿಕಟ ಸಂಬಂಧದಿಂದಾಗಿ ಆಕೆ ಗರ್ಭಿಣಿಯಾದಳು ಎಂದು ತಿಳಿದುಬಂದಿದೆ. ಆ ಯುವತಿ ಮತ್ತು ಆಕೆ ಮದುವೆಯಾಗಬೇಕಿದ್ದ ಯುವಕ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಮದುವೆಗೂ ಮೊದಲೇ ತಾವು ಅಪ್ಪ-ಅಮ್ಮ ಆದ ವಿಷಯ ಗೊತ್ತಾದರೆ ಮನೆಯವರು ಸುಮ್ಮನಿರುವುದಿಲ್ಲ ಎಂಬ ಕಾರಣಕ್ಕೆ ಅವರಿಬ್ಬರೂ ಸೇರಿಯೇ ಯಾರಿಗೂ ತಿಳಿಯದಂತೆ ಆ ಮಗುವನ್ನು ಕಸದ ತೊಟ್ಟಿಗೆ ಎಸೆದಿದ್ದಾರೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿ ಮಾಡಿದ ಅಪ್ಪನಿಗೆ ಗಲ್ಲು ಶಿಕ್ಷೆ!

ಈ ವಿಷಯಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ಮಂಡಳಿ ನೀಡಿದ ಮಾಹಿತಿಯ ಪ್ರಕಾರ, ಈ ಘಟನೆ ನಡೆದ ಸ್ಥಳಕ್ಕೆ ತೆರಳಿ ಕಸದ ತೊಟ್ಟಿಯಲ್ಲಿ ಬಿದ್ದಿದ್ದ ಮಗುವನ್ನು ಕಾಪಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ತಿರುಚೆಂಡೂರು ತಾಲ್ಲೂಕು ಪೊಲೀಸರು ಯುವತಿ ಮತ್ತು ಆಕೆ ಮದುವೆಯಾಗಲಿರುವ ಯುವಕನನ್ನು ಬಂಧಿಸಿ ತೀವ್ರ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ