AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!

ಆಭರಣಗಳ ವ್ಯಾಪಾರಿಯ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ಮಹಿಳೆಯೊಬ್ಬರು ದರೋಡೆಗೆ ಯತ್ನಿಸಿದ್ದರು. ಇದರಿಂದ ಹೆದರದ ಆ ಸಿಬ್ಬಂದಿ ಆ ಮಹಿಳೆಯ ಕೈ ಹಿಡಿದು 17 ಬಾರಿ ಕೆನ್ನೆಗೆ ಹೊಡೆದಿದ್ದಾರೆ. ಮಹಿಳೆಯೊಬ್ಬರು ಜ್ಯುವೆಲರಿ ಶಾಪ್ ಮಾಲೀಕರ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ದರೋಡೆ ಮಾಡಲು ಯತ್ನಿಸಿದ್ದಾರೆ. ಆದರೆ ಅವರು ದಾಳಿಯಿಂದ ತಪ್ಪಿಸಿಕೊಂಡು ಆ ಮಹಿಳೆಗೆ 17 ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!
Jewelery Shop Robbery
ಸುಷ್ಮಾ ಚಕ್ರೆ
|

Updated on: Nov 07, 2025 | 10:38 PM

Share

ಅಹಮದಾಬಾದ್, ನವೆಂಬರ್ 7: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜ್ಯುವೆಲರಿ ಶಾಪ್​ಗೆ ನುಗ್ಗಿ ದರೋಡೆ (Robbery) ಮಾಡಲು ಯತ್ನಿಸಿದ ಮಹಿಳೆಯೊಬ್ಬರು ಮಾಲೀಕರ ಕಣ್ಣಿಗೆ ಮೆಣಸಿನ ಪುಡಿ ಎರಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ತಕ್ಷಣ ಅವರನ್ನು ಕೆಳಕ್ಕೆ ತಳ್ಳಿ 17 ಬಾರಿ ಆಕೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಆ ಮಹಿಳೆ ಆಘಾತಕ್ಕೊಳಗಾದರು.

ಈ ಜ್ಯುವೆಲರಿ ಶಾಪ್ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿದೆ. ತನ್ನ ಮುಖವನ್ನು ದುಪಟ್ಟಾದಿಂದ ಮರೆಮಾಡಿಕೊಂಡಿದ್ದ ಮಹಿಳೆ ಅಂಗಡಿಯೊಳಗೆ ಪ್ರವೇಶಿಸಿ ಮಾಲೀಕರ ಮುಂದೆ ಕುಳಿತು, ಗ್ರಾಹಕರಂತೆ ನಟಿಸಿದರು. ಈ ವೇಳೆ ಅವರು ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿದರು. ಈ ವೇಳೆ ಆಕೆ ಇದ್ದಕ್ಕಿದ್ದಂತೆ ಮಾಲೀಕರ ಮುಖದ ಮೇಲೆ ಮೆಣಸಿನ ಪುಡಿ ಎಸೆದಿದ್ದಾರೆ.

ಇದನ್ನೂ ಓದಿ: ಮಗಳ ಪ್ರಾಣ ಕಾಪಾಡಿದ ಅಪ್ಪ: ತಂದೆ-ಮಗಳ ಹೃದಯಸ್ಪರ್ಶಿ ವಿಡಿಯೋ ವೈರಲ್

ಈ ದಾಳಿಯಿಂದ ತಕ್ಷಣ ಚೇತರಿಸಿಕೊಂಡ ಮಾಲೀಕರು ಆ ಮಹಿಳೆಯ ಕೈಗಳನ್ನು ಹಿಡಿದುಕೊಂಡು ಅವರಿಗೆ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಆ ಮಹಿಳೆಯನ್ನು ಅಂಗಡಿಯಿಂದ ಎಳೆದು ಹೊರಗೆ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ