AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಮಹಿಳೆ

ಮಹಿಳೆಯೊಬ್ಬಳು ತನ್ನ ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದಿರುವ ವಿಚಿತ್ರ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು, ಜಲೋರ್​ನ ಸೈಲಾ ಮೂಲದ ಕುಕಿ ದೇವಿ ಎಂಬಾಕೆ ಪಾಲಿಯಲ್ಲಿರುವ ಆಸ್ಪತ್ರೆಗೆ ಓಡಿ ಬಂದಿದ್ದಾರೆ, ಜತೆಗೆ ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಬಂದಿದ್ದರು.

ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಮಹಿಳೆ
Nose
ನಯನಾ ರಾಜೀವ್
|

Updated on:Dec 19, 2024 | 9:30 AM

Share

ಮಹಿಳೆಯೊಬ್ಬಳು ತನ್ನ ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದಿರುವ ವಿಚಿತ್ರ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು, ಜಲೋರ್​ನ ಸೈಲಾ ಮೂಲದ ಕುಕಿ ದೇವಿ ಎಂಬಾಕೆ ಪಾಲಿಯಲ್ಲಿರುವ ಆಸ್ಪತ್ರೆಗೆ ಓಡಿ ಬಂದಿದ್ದಾರೆ, ಜತೆಗೆ ಕತ್ತರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಬಂದಿದ್ದರು.

ಕುಕಿ ದೇವಿ ಕೆಲವು ದಿನಗಳಿಂದ ಸೈಲಾ ಗ್ರಾಮದ ಮೋಕ್ನಿ ಎಂಬಲ್ಲಿ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು, ಆಕೆಯ ಸಂಬಂಧಿಗಳ ನಡುವೆ ಜಮೀನಿನ ವಿಷಯದಲ್ಲಿ ಮನಸ್ತಾಪವಿತ್ತು. ಮಂಗಳವಾರ ಓಂ ಪ್ರಕಾಶ್ ಎಂಬುವವರು ಹಾಗೂ ಇತರರು ಚಾಕುವಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ, ಚಾಕುವಿನಿಂದ ಕುಕಿ ಮೂಗನ್ನು ಕತ್ತರಿಸಿದ್ದಾರೆ. ಆಕೆ ಕೂಡಲೇ ತುಂಡರಿಸಿದ ಮೂಗನ್ನು ಬ್ಯಾಗ್​ನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದಿದ್ದಳು.

ಕುಕಿ ದೇವಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜೋಧ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾರ್ ಆಸ್ಪತ್ರೆಯ ಡಾ.ಜುಗಲ್ ಮಹೇಶ್ವರಿ ಅವರ ಮೂಗು ತೀವ್ರವಾಗಿ ಕತ್ತರಿಸಲ್ಪಟ್ಟಿದೆ ಮತ್ತು ಪ್ಲಾಸ್ಟಿಕ್ ಸರ್ಜರಿ ಮೂಲಕ ಮಾತ್ರ ಅದನ್ನು ಮರು ಜೋಡಿಸಬಹುದು ಎಂದು ಹೇಳಿದರು.

ಮತ್ತಷ್ಟು ಓದಿ: ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ, ಆಗಿದ್ದೇನು?

ಮಾಹಿತಿ ಪ್ರಕಾರ ಸಂತ್ರಸ್ತೆ ಕುಕಿ ದೇವಿ ತನ್ನ ಸಹೋದರ ರಮೇಶ್ ಜತೆ ಜಮೀನು ವಿವಾದ ಬಗೆಹರಿಸಲು ಮೊಕನಿ ಗ್ರಾಮಕ್ಕೆ ತೆರಳಿದ್ದರು. ಘಟನೆ ನಡೆದ ತಕ್ಷಣ ಸೈಲಾ ಪೊಲೀಸರು ಕ್ರಮ ಕೈಗೊಂಡು ಪ್ರಮುಖ ಆರೋಪಿ ಓಂಪ್ರಕಾಶ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಓಂಪ್ರಕಾಶ್ ಅವರ ನಿವೇಶನವನ್ನು ಆಕ್ರಮಿಸಿಕೊಂಡಿದ್ದು, ಈ ಕಾರಣಕ್ಕಾಗಿ ಬಹಳ ದಿನಗಳಿಂದ ಜಗಳ ನಡೆಯುತ್ತಿತ್ತು ಎಂದು ಸಂತ್ರಸ್ತೆಯ ಸಹೋದರ ರಮೇಶ್ ಹೇಳಿದ್ದಾರೆ. ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಲು ಕುಕಿ ದೇವಿ ಓಂಪ್ರಕಾಶ್ ಅವರೊಂದಿಗೆ ಮಾತನಾಡಲು ಹೋಗಿದ್ದರು, ಆದರೆ ಸಂಭಾಷಣೆಯ ಸಮಯದಲ್ಲಿ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Thu, 19 December 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ