AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಅಳಿಯನ ಜತೆ ಓಡಿ ಹೇಗಿದ್ದೇಕೆ? ಕಾರಣ ಕೊಟ್ಟ ಮಹಿಳೆ

ಉತ್ತರ ಪ್ರದೇಶದ ಅಲಿಗಢದಲ್ಲಿ ತನ್ನ ಮಗಳ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದ ಮಹಿಳೆಯನ್ನು ನೇಪಾಳ ಗಡಿಯ ಬಳಿ ತನ್ನ ಪ್ರಿಯಕರನೊಂದಿಗೆ ಬಂಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದಾಗ, ಸಪ್ನಾ ಮನೆಯಿಂದ ಪರಾರಿಯಾಗಲು ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಸಪ್ನಾ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಭಾವಿ ಅಳಿಯನ ಜತೆ ಓಡಿ ಹೇಗಿದ್ದೇಕೆ? ಕಾರಣ ಕೊಟ್ಟ ಮಹಿಳೆ
ಮಹಿಳೆ
Follow us
ನಯನಾ ರಾಜೀವ್
|

Updated on:Apr 18, 2025 | 10:27 AM

ಅಲಿಗಢ, ಏಪ್ರಿಲ್ 18: ಮಗಳು ಮದುವೆ(Marriage)ಯಾಗಬೇಕಿದ್ದ ಯುವಕನ ಜತೆಗೆ ಪರಾರಿಯಾಗಿದ್ದ ಮಹಿಳೆಯನ್ನು ಪ್ರಿಯಕರನೊಂದಿಗೆ ನೇಪಾಳ ಗಡಿ ಬಳಿ  ಬಂಧಿಸಲಾಗಿದೆ. ಪೊಲೀಸರ ವಿಚಾರಣೆ ಸಮಯದಲ್ಲಿ ತಾನು ಓಡಿ ಹೋಗಿದ್ದೇಕೆ ಎನ್ನುವ ವಿಚಾರವನ್ನು ಬಹಿರಂಗಗೊಳಿಸಿದ್ದಾರೆ. ವರ್ಷಗಳಿಂದ ನಾನು ಸಹಿಸಿಕೊಂಡು ಬಂದಿರುವ ಕೌಟುಂಬಿಕ ದೌರ್ಜನ್ಯ, ನಿರ್ಲಕ್ಷ್ಯವು ನಾನು ಈ ಹೆಜ್ಜೆ ಇಡುವಂತೆ ಮಾಡಿತ್ತು. ಪೊಲೀಸ್ ಠಾಣೆಯ ಒಳಗೆ ಆಕೆಯ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮಹಿಳೆಯ ಪತಿ ಮದ್ಯವ್ಯಸನಿಯಾಗಿದ್ದು, ಆಗಾಗ ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ಅವನಿಗೆ ಕೆಲಸವಿರಲಿಲ್ಲ, ಒಮ್ಮೆ ನಾನು ಮನೆಯಿಂದ 1,500 ರೂ. ತೆಗೆದುಕೊಂಡು ಹೋಗಿದ್ದೆ, ಬೆಳಗ್ಗೆಯಿಂದ ರಾತ್ರಿವರೆಗೆ ನನ್ನನ್ನು ಥಳಿಸಿದ್ದ ಎಂದು ಅಳಲು ತೋಡಿಕೊಂಡಿದ್ದಾರೆ.

ಮಗಳ ಮದುವೆ 10 ದಿನ ಬಾಕಿ ಇರುವಾಗಲೇ ಅವರು ಭಾವಿ ಅಳಿಯನ ಜತೆ ಓಡಿ ಹೋಗಿದ್ದರು. ರಾಹುಲ್​ನನ್ನು ನಾನು ಪ್ರೀತಿ ಮಾಡುತ್ತಿದ್ದೇನೆ. ತನ್ನ ಗಂಡನ ಬಳಿಗೆ ಮರಳುವ ಉದ್ದೇಶವಿಲ್ಲ ಮತ್ತು ರಾಹುಲ್ ಜೊತೆ ವಾಸಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಮಗಳ ಮದುವೆಗೂ ಮುನ್ನ ಭಾವಿ ಅಳಿಯನ ಜತೆ ಪರಾರಿಯಾದ ಅತ್ತೆ
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಗಂಡ ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ, ನಾನು ಯಾವುದೇ ಚಿನ್ನ ಅಥವಾ ನಗದನ್ನು ತೆಗೆದುಕೊಂಡು ಬಂದಿಲ್ಲ. ನೋವಿನಿಂದ ತುಂಬಿದ ಜೀವನವನ್ನು ಬಿಟ್ಟು ಹೋಗಲು ನಾನು ಬಯಸಿದ್ದೆ. ನಾನು ರಾಹುಲ್ ಜೊತೆ ಇರಲು ಬಯಸುತ್ತೇನೆ. ನನ್ನನ್ನು ಎಂದಿಗೂ ಕಾಳಜಿ ವಹಿಸದ ವ್ಯಕ್ತಿಯ ಬಳಿಗೆ ನಾನು ಹಿಂತಿರುಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ಅತ್ತೆ ಜತೆ ಭಾವಿ ಅಳಿಯ ಪರಾರಿ: ಆಸ್ತಿಯಲ್ಲಿ ಬಿಡಿಗಾಸೂ ನಿನಗಿಲ್ಲ ಎಂದ ರಾಹುಲ್ ತಂದೆ

ಆ ಮಹಿಳೆಯೇ ಮಗಳಿಗೆ ಆತನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದಳು, ಹುಡುಗನನ್ನು ಆಕೆಯೇ ಹುಡುಕಿದ್ದಳು. ಮದುವೆಯ ಸಿದ್ಧತೆಗಳ ನೆಪದಲ್ಲಿ ವರನು ಆಗಾಗ ಅವರ ಮನೆಗೆ ಭೇಟಿ ನೀಡುತ್ತಿದ್ದ. ಕುಟುಂಬಕ್ಕೆ ತಿಳಿಯದಂತೆ, ಅಳಿಯ ಮತ್ತು ಅತ್ತೆಯ ನಡುವೆ ಸಂಬಂಧ ಬೆಳೆಯುತ್ತಿತ್ತು. ವರ ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದ, ಅದನ್ನುಯಾರೂ ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.

ತಾನು ಪ್ರವಾಸಕ್ಕೆ ಹೋಗುತ್ತಿರುವುದರಿಂದ ಯಾರೂ ತನ್ನನ್ನು ಸಂಪರ್ಕಿಸಲು ಪ್ರಯತ್ನಿಸಬೇಡಿ ಎಂದು ರಾಹುಲ್ ತನ್ನ ತಂದೆಗೆ ಹೇಳಿ ಮನೆಯಿಂದ ಹೊರಟಿದ್ದ. ಅವರ ತಂದೆ ವಧುವಿನ ಕುಟುಂಬವನ್ನು ಸಂಪರ್ಕಿಸಿದ್ದರು ಆದರೆ ರಾಹುಲ್ ಅಲ್ಲಿ ಇಲ್ಲ ಮತ್ತು ವಧುವಿನ ತಾಯಿಯೂ ಇಲ್ಲ ಎಂಬುದು ಅರ್ಥಮಾಡಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Fri, 18 April 25

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ