AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mehul Choksi: ಮೆಹುಲ್ ಚೋಕ್ಸಿ ಜೊತೆ ಡೊಮಿನಿಕಾಗೆ ಪ್ರಯಾಣಿಸಿದ್ದ ಮಹಿಳೆ ಆತನ ಪ್ರೇಯಸಿ ಅಲ್ಲ

ಮೆಹುಲ್ ಚೋಕ್ಸಿ ಕೆಲವು ದಿನಗಳ ಹಿಂದೆ ಆಂಟಿಗುವಾ ಮತ್ತು ಬರ್ಬುಡಾದಿಂದ ಕಣ್ಮರೆಯಾಗಿದ್ದರು. ಬಳಿಕ, ಚೋಕ್ಸಿಯನ್ನು ಪತ್ತೆಹಚ್ಚಿ ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು.

Mehul Choksi: ಮೆಹುಲ್ ಚೋಕ್ಸಿ ಜೊತೆ ಡೊಮಿನಿಕಾಗೆ ಪ್ರಯಾಣಿಸಿದ್ದ ಮಹಿಳೆ ಆತನ ಪ್ರೇಯಸಿ ಅಲ್ಲ
ಮೆಹುಲ್ ಚೋಕ್ಸಿ
TV9 Web
| Edited By: |

Updated on:Aug 14, 2021 | 1:03 PM

Share

ದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್​ ಒಂದರ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ವಿಮಾನದಿಂದ ಇಳಿಯುವ ವೇಳೆಗೆ ಅವರ ಜೊತೆಗೆ ಒಬ್ಬಾಕೆ ಹುಡುಗಿ ಇದ್ದಳು ಆದರೆ ಆಕೆ ಮೆಹುಲ್ ಚೋಕ್ಸಿಯ ಪ್ರಿಯತಮೆ ಆಗಿರಲಿಲ್ಲ ಎಂದು ಉದ್ಯಮಿಯ ಆಪ್ತ ಮೂಲಗಳು ಮಾಹಿತಿ ನೀಡಿವೆ. ಬದಲಾಗಿ ಅವಳು, ಚೋಕ್ಸಿ ಬಂಧನಕ್ಕೆ ಸಹಕರಿಸಿದ ಗುಂಪಿನ ಸದಸ್ಯೆ ಎಂದು ಹೇಳಲಾಗಿದೆ.

ಮೆಹುಲ್ ಚೋಕ್ಸಿ ಕೆಲವು ದಿನಗಳ ಹಿಂದೆ ಆಂಟಿಗುವಾ ಮತ್ತು ಬರ್ಬುಡಾದಿಂದ ಕಣ್ಮರೆಯಾಗಿದ್ದರು. ಬಳಿಕ, ಚೋಕ್ಸಿಯನ್ನು ಪತ್ತೆಹಚ್ಚಿ ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು. ಡೊಮಿನಿಕಾದಲ್ಲಿ ಪ್ರಿಯತಮೆಯೊಂದಿಗೆ ಸಿಕ್ಕಿಬಿದ್ದ ಮೆಹುಲ್ ಚೋಕ್ಸಿಯನ್ನು ಅಲ್ಲಿನ ಪೊಲೀಸರು ಸರಿಯಾಗಿ ವಿಚಾರಿಸಿಕೊಂಡಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಇದೀಗ ಅದು ಆತನ ಪ್ರಿಯತಮೆ ಅಲ್ಲ ಎಂದು ತಿಳಿದುಬಂದಿದೆ.

ಅದಕ್ಕೂ ಮುನ್ನ ಚೋಕ್ಸಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಆತನಿಗೆ ಸೋಂಕು ಇಲ್ಲ ಎಂಬುದು ಪತ್ತೆಯಾಗಿದೆ. ಇದೀಗ ಡೊಮಿನಿಕಾದಲ್ಲಿ ವೈದ್ಯರು ಆತನಿಗೆ ಆರೈಕೆ ಮಾಡುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್​ ಒಂದರ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾ ಪೊಲೀಸರ ವಶದಲ್ಲಿದ್ದಾರೆ.

ಡೊಮಿನಿಕಾದಿಂದ ಆಂಟಿಗುವಾಕ್ಕೆ ಚೋಕ್ಸಿಯನ್ನು ಕಳಿಸಲು ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಪ್ರಧಾನಿ ಗಸ್ಟನ್ ಬ್ರೌನ್ ಈಗಾಗಲೇ ಹೇಳಿದ್ದಾರೆ. ಇದೀಗ ಚೋಕ್ಸಿಯನ್ನು ಭಾರತಕ್ಕೆ ಕಳಿಸುವ ಸಿದ್ಧತೆ ನಡೆದಿದೆ, ಅವರನ್ನು ಕರೆದೊಯ್ಯಲು ಖಾಸಗಿ ವಿಮಾನವೊಂದು ಡೊಮಿನಿಕಾದ ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದೆ ಎಂದು ಗಸ್ಟನ್​ ಬ್ರೌನ್​ ಹೇಳಿದ್ದಾರೆ.

ವಜ್ರದ ವ್ಯಾಪಾರಿ ಮೆಹುಲ್ ಚೋಸ್ಕಿ ಮತ್ತು ಅವನ ಸಂಬಂಧಿ ನೀರವ್​ ಮೋದಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್​​ಗೆ (Punjab National Bank -PNB) 13,500 ಕೋಟಿ ರೂಪಾಯಿ ವಂಚನೆ ಎಸಗಿ ಪರಾರಿಯಾಗಿದ್ದಾರೆ. ಇಬ್ಬರು ವಿರುದ್ಧವೂ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿದ್ದು, ಇಬ್ಬರೂ ಭಾರತಕ್ಕೆ ವಾಪಸಾಗಬೇಕಾಗಿದ್ದಾರೆ.

ಇದನ್ನೂ ಓದಿ: ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

Published On - 6:24 pm, Mon, 31 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ