AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಲಿಯಿಂದ ಒಂದೇ ಒಂದು ಏಟು ಕೊಟ್ಟು ಹುಲಿಯನ್ನು ಹತ್ಯೆ ಮಾಡಿ, ಶೌರ್ಯ ಪ್ರಶಸ್ತಿ ಪಡೆದಿದ್ದ ಮಹಿಳೆ ಸಾವು

ಮಿಜೋರಾಂನ ಸ್ಟೇಟ್ ಮ್ಯೂಸಿಯಂಗೆ ಬರುವವರು ಅಲ್ಲಿರುವ ಬೃಹತ್ ಹುಲಿಯ ಮಮ್ಮಿಯನ್ನು ನೋಡಿರುತ್ತಾರೆ ಇದರ ಹಿಂದೆ ದೊಡ್ಡ ಕಥೆಯೇ ಇದೆ. ಕೊಡಲಿಯಿಂದ ಹುಲಿಗೆ ಒಂದೇ ಒಂದು ಏಟು ಕೊಟ್ಟು ಹತ್ಯೆ ಮಾಡಿ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದ ಲಾಲಜಾಡಿಂಗಿ ಎಂಬ ಮಹಿಳೆ ಕ್ಯಾನ್ಸರ್​ನಿಂದ ಕೊನೆಯುಸಿರೆಳೆದಿದ್ದಾರೆ.

ಕೊಡಲಿಯಿಂದ ಒಂದೇ ಒಂದು ಏಟು ಕೊಟ್ಟು ಹುಲಿಯನ್ನು ಹತ್ಯೆ ಮಾಡಿ, ಶೌರ್ಯ ಪ್ರಶಸ್ತಿ ಪಡೆದಿದ್ದ ಮಹಿಳೆ ಸಾವು
ಲಾಲ್ಜಾಡಿಂಗಿImage Credit source: ABP Live
ನಯನಾ ರಾಜೀವ್
|

Updated on: Jul 20, 2024 | 3:27 PM

Share

ಮಿಜೋರಾಂನ ಸ್ಟೇಟ್ ಮ್ಯೂಸಿಯಂಗೆ ಬರುವವರು ಅಲ್ಲಿರುವ ಬೃಹತ್ ಹುಲಿಯ ಮಮ್ಮಿಯನ್ನು ನೋಡಿರುತ್ತಾರೆ ಇದರ ಹಿಂದೆ ದೊಡ್ಡ ಕಥೆಯೇ ಇದೆ. ಕೊಡಲಿಯಿಂದ ಹುಲಿಗೆ ಒಂದೇ ಒಂದು ಏಟು ಕೊಟ್ಟು ಹತ್ಯೆ ಮಾಡಿ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದ ಲಾಲ್ಜಾಡಿಂಗಿ ಎಂಬ ಮಹಿಳೆ ಕ್ಯಾನ್ಸರ್​ನಿಂದ ಕೊನೆಯುಸಿರೆಳೆದಿದ್ದಾರೆ. ಅವರು ಅಂದು ಹತ್ಯೆ ಮಾಡಿದ್ದ ಹುಲಿಯ ಮಮ್ಮಿಯನ್ನೇ ನಾವು ಮ್ಯೂಸಿಯಂನಲ್ಲಿ ಕಾಣಬಹುದಾಗಿದೆ.

ಈಗ ಲಾಲ್ಜಾಡಿಂಗಿ ಅವರಿಗೆ 72 ವರ್ಷ ವಯಸ್ಸು, ಕ್ಯಾನ್ಸರ್​ನಿಂದ ಅವರು ಸಾವನ್ನಪ್ಪಿದ್ದಾರೆ. ಮ್ಯೂಸಿಯಂನಲ್ಲಿರುವ ಹುಲಿ ಯಾವಾಗಲೂ ಪ್ರವಾಸಿಗರನ್ನು ಅದರಲ್ಲೂ ಮಕ್ಕಳನ್ನು ಗಮನಸೆಳೆಯುತ್ತದೆ. ಆದರೆ ಆ ಹುಲಿ ಮ್ಯೂಸಿಯಂಗೆ ಬರುವಂತೆ ಮಾಡಿದ್ದ ಮಹಿಳೆಯನ್ನು ಜನರು ಅಷ್ಟಾಗಿ ನೆನಪಿಟ್ಟುಕೊಂಡಿಲ್ಲ.

ಲಾಲ್ಜಾಡಿಂಗಿ ಅವರು ಪತಿ, ನಾಲ್ವರು ಮಕ್ಕಳು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರು 26 ವರ್ಷದವರಿದ್ದಾಗ ದೂರದ ಕಾಡಿಗೆ ಹೋಗಿದ್ದರು, ಆಗ ಹುಲಿಯೊಂದಿಗೆ ಮುಖಾಮುಖಿಯಾಗಿದ್ದಾರೆ. ‘‘ಮರವನ್ನು ಕತ್ತರಿಸುತ್ತಿದ್ದಾಗ ಏನೋ ಶಬ್ದ ಕೇಳಿಸಿತ್ತು, ಮೊದಲು ಕಾಡುಹಂದಿ ಇರಬಹುದು ಎಂದುಕೊಂಡೆ, ಸ್ನೇಹಿತರನ್ನು ಕರೆದೆ ಆದರೆ ಯಾರಿಗೂ ಕೇಳಿಸಲಿಲ್ಲ, ಪೊದೆಯಿಂದ ಒಮ್ಮೆಲೆ ಹುಲಿ ಕಾಣಿಸಿಕೊಂಡಾಗ ಭಯವಾಯಿತು.

ಮತ್ತಷ್ಟು ಓದಿ: ನಿತ್ಯವೂ ಆಫೀಸ್​ಗಾಗಿ 320 ಕಿ.ಮೀ ಪ್ರಯಾಣಿಸುವ ವ್ಯಕ್ತಿ, ಹತ್ತಿರವೆಲ್ಲೂ ಮನೆ ಇರಲಿಲ್ಲವೇ?

ಯೋಚಿಸಲು ಸಮಯ ಇರಲಿಲ್ಲ, ತಕ್ಷಣ ಅದರ ಹಣೆಗೆ ಕೊಡಲಿಯಿಂದ ಹೊಡೆದೆ ಒಂದೇ ಹೊಡೆತಕ್ಕೆ ಹುಲಿ ಸತ್ತಿದ್ದು ನನ್ನ ಅದೃಷ್ಟ, ಒಂದೊಮ್ಮೆ ಬೇರೆ ಭಾಗಕ್ಕೆ ಪೆಟ್ಟಾಗಿದ್ದರೆ ಹುಲಿ ನನಗೆ ಎರಡನೇ ಅವಕಾಶ ನೀಡುತ್ತಿರಲಿಲ್ಲ ಎಂದಿದ್ದಾರೆ.

ಲಾಲ್ಜಾಡಿಂಗಿ 1980ರಲ್ಲಿ ಶೌರ್ಯ ಪ್ರಶಸ್ತಿಯನ್ನು ಭಾರತ ಸರ್ಕಾರವು ನೀಡಿತ್ತು. ಅಂದಿನ ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದರು. ಕೊಡಲಿಯಿಂದ ಹುಲಿಯನ್ನು ಕೊಂದ ಏಕೈಕ ಮಹಿಳೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್