AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ

ಇಂದೋರ್ ಹಾಗೂ ಋಷಿಕೇಶಕ್ಕೆ ಹೊರಟಿದ್ದ ಎರಡು ರೈಲುಗಳಲ್ಲಿ ಮಹಿಳೆಯರ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿದೆ.ಆರೋಪಿಗಳು ಒಬ್ಬರಲ್ಲ ಒಬ್ಬರಿಗಿಂತ ಹೆಚ್ಚು ಇರಬಹುದು ಎನ್ನುವ ಅನುಮಾನವೂ ಇದೆ. ಪೊಲೀಸರ ಪ್ರಕಾರ, ಅಪರಾಧ ಮಾಡಿದ ನಂತರ ಆರೋಪಿಗಳು ಪ್ಲಾಟ್‌ಫಾರ್ಮ್ ಸಂಖ್ಯೆ 5 ರಿಂದ ರೈಲನ್ನು ಹಿಡಿದು ಅಲ್ಲಿಂದ ಪರಾರಿಯಾಗಿದ್ದಾರೆ.

ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ
ರೈಲು ನಿಲ್ದಾಣ
ನಯನಾ ರಾಜೀವ್
|

Updated on:Jun 13, 2024 | 10:08 AM

Share

ಎರಡು ಪ್ರತ್ಯೇಕ ರೈಲುಗಳಲ್ಲಿ ಮಹಿಳೆಯ ತುಂಡರಿಸಿದ ದೇಹದ ಆರು ಭಾಗಗಳು ಪತ್ತೆಯಾಗಿವೆ. ಎರಡು ರಾಜ್ಯಗಳ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ನಿರತರಾಗಿದ್ದಾರೆ. ಆದರೆ ಇದೀಗ ಮತ್ತೊಂದು ರೈಲು ಕೂಡ ಈ ಕೊಲೆ ರಹಸ್ಯದೊಳಗೆ ಪ್ರವೇಶಿಸಿದೆ. ಆರೋಪಿಗಳು ಒಬ್ಬರಲ್ಲ ಒಬ್ಬರಿಗಿಂತ ಹೆಚ್ಚು ಇರಬಹುದು ಎನ್ನುವ ಅನುಮಾನವೂ ಇದೆ. ಪೊಲೀಸರ ಪ್ರಕಾರ, ಅಪರಾಧ ಮಾಡಿದ ನಂತರ ಆರೋಪಿಗಳು ಪ್ಲಾಟ್‌ಫಾರ್ಮ್ ಸಂಖ್ಯೆ 5 ರಿಂದ ರೈಲನ್ನು ಹಿಡಿದು ಅಲ್ಲಿಂದ ಪರಾರಿಯಾಗಿದ್ದಾರೆ.

ಟ್ರಾಲಿ ಬ್ಯಾಗ್‌ಗೆ ಹ್ಯಾಂಡಲ್ ಇಲ್ಲದ ಕಾರಣ ಆರೋಪಿಗಳ ಸಂಖ್ಯೆ ಹೆಚ್ಚಿದೆ ಎಂದು ನಂಬಲಾಗಿದೆ. ಹ್ಯಾಂಡಲ್ ಇಲ್ಲದೆ ಅದನ್ನು ಒಬ್ಬರಿ ಸುಲಭವಾಗಿ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಮಹಿಳೆಯ ಮಾನವ ದೇಹದ ಭಾಗಗಳನ್ನು ಟ್ರಾಲಿ ಬ್ಯಾಗ್ ಮತ್ತು ಎರಡು ಗೋಣಿಚೀಲಗಳಲ್ಲಿ ಹಾಕಿ ರೈಲುಗಳ ಬೋಗಿಗಳಲ್ಲಿ ಇರಿಸಲಾಗಿತ್ತು.

ಎರಡು ರೈಲಿನಲ್ಲಿ ಶವದ ಭಾಗಗಳನ್ನು ಇರಿಸಿ ನಂತರ ನಂತರ ಐದನೇ ಸಂಖ್ಯೆಯ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಮೂರನೇ ರೈಲಿನಿಂದ ಪರಾರಿಯಾಗಿದ್ದಾರೆ. ಪ್ರಕರಣದ ಆರೋಪಿಗಳ ಗುರುತು ಬಹಿರಂಗಪಡಿಸುವವರಿಗೆ 10,000 ರೂಪಾಯಿ ಬಹುಮಾನ ನೀಡುವುದಾಗಿ ರೈಲ್ವೆ ಪೊಲೀಸರು ಘೋಷಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಶನಿವಾರ ರಾತ್ರಿ, ಮೊವ್‌ನಿಂದ ನಾಗ್ಡಾ ಮೂಲಕ ಇಂದೋರ್‌ಗೆ ಹಿಂದಿರುಗುತ್ತಿದ್ದ ರೈಲಿನಲ್ಲಿ ಟ್ರಾಲಿ ಬ್ಯಾಗ್ ಮತ್ತು ಗೋಣಿಚೀಲದಲ್ಲಿ ತುಂಡಾದ ಮಹಿಳೆ ಶವ ಪತ್ತೆಯಾಗಿತ್ತು.

ಇಲ್ಲಿನ ರಿಷಿಕೇಶ ಎಕ್ಸ್‌ಪ್ರೆಸ್‌ನಲ್ಲಿ ಆರೋಪಿಗಳು ಗೋಣಿಚೀಲ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಎರಡು ದಿನಗಳಿಂದ ಇಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಶೋಧಿಸಲಾಗುತ್ತಿದೆ. ಕೆಲವು ಕಡೆ ಸಿಸಿಟಿವಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:08 am, Thu, 13 June 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್