AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು

ಸಮಾಜ ಎಷ್ಟೇ ಬದಲಾಗಿದ್ದರೂ ಜಾತಿ ಪದ್ಧತಿ ಮಾತ್ರ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ತೆಲಂಗಾಣದ ಜಾತ್ರೆಯೊಂದರಲ್ಲಿ ಜಾತಿಯ ಕಾರಣದಿಂದ ಮಹಿಳೆಯರ ಕೂದಲನ್ನು ಎಳೆದು, ಕೋಲಿನಿಂದ ಹೊಡೆದು ಹಿಂಸೆ ನೀಡಲಾಗಿದೆ. ಈ ಸಂಘರ್ಷದಲ್ಲಿ 2 ತಿಂಗಳ ಮಗು ಮೃತಪಟ್ಟಿದೆ. ಈ ಘಟನೆ ನಡೆದ ಬಳಿಕ ಆ ಕುಟುಂಬಕ್ಕೆ ಗ್ರಾಮದೊಳಗೆ ಬಾರದಂತೆ ಬೆದರಿಕೆ ಹಾಕಿ ಬಹಿಷ್ಕಾರ ಹಾಕಲಾಗಿದೆ. 

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು
Representative Image
ಸುಷ್ಮಾ ಚಕ್ರೆ
|

Updated on: Feb 23, 2026 | 7:55 PM

Share

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು.

ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು. ತಮ್ಮನ್ನು “ಕೆಳಜಾತಿ” ಎಂದು ಕರೆದು ಹೀಯಾಳಿಸಿದ್ದಾರೆ. ದೇವಾಲಯಕ್ಕೆ ಪ್ರವೇಶ ಉಚಿತವಾದ್ದರಿಂದ ಹಣ ನೀಡಲು ನಾವು ನಿರಾಕರಿಸಿದಾಗ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ

ಗಲಾಟೆಯ ವೇಳೆ ಆ ಮಹಿಳೆಯರಲ್ಲಿ ಒಬ್ಬರು ತನ್ನ 2 ತಿಂಗಳ ಮಗುವನ್ನು ಗಲಾಟೆ ಮಾಡುವವರ ಪಾದಗಳ ಮೇಲೆ ಇಟ್ಟು, ತನ್ನ ಗಂಡನನ್ನು ಹೊಡೆಯದಂತೆ ಬೇಡಿಕೊಂಡಾಗ ಆತ ಎರಡು ತಿಂಗಳ ಮಗುವನ್ನು ತುಳಿದಿದ್ದಾನೆ. ತಕ್ಷಣ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಿ ಮೂರು ದಿನಗಳ ನಂತರ ಆ ಮಗು ಮೃತಪಟ್ಟಿತು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆರೋಪಿಗಳು ಮಹಿಳೆಯರ ಕೂದಲನ್ನು ಎಳೆದು ಹೊರಗೆ ತಳ್ಳಿದರು. ತೆಂಗಿನಕಾಯಿ ಒಡೆಯಲು ಬಳಸಿದ್ದ ಕಬ್ಬಿಣದ ರಾಡ್ ಬಳಸಿ ನಾಲ್ವರು ಜನರು ಹಲ್ಲೆ ನಡೆಸಿದರು. ಈ ವೇಳೆ ಆ ಕುಟುಂಬದವರು ಹಾಕಿದ್ದ ಚಿನ್ನದ ಕಿವಿಯೋಲೆಗಳು, ಬೆಳ್ಳಿ ಬಳೆಗಳು ಮತ್ತು ಫೋನ್ ಸೇರಿದಂತೆ ಅವರ ವಸ್ತುಗಳನ್ನು ಕಸಿದುಕೊಳ್ಳಲಾಗಿದೆ ಎನ್ನಲಾಗಿದೆ. ಮೃತ ಶಿಶುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅದರ ಆಧಾರದ ಮೇಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!