Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಜೈಲಿನಲ್ಲಿ ಗರ್ಭಿಣಿಯರಾಗುತ್ತಿರುವ ಮಹಿಳಾ ಕೈದಿಗಳು, 196 ಶಿಶುಗಳ ಜನನ

ರಾಜ್ಯದ ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ ಮಹಿಳಾ ಕೈದಿಗಳು ಗರ್ಭಿಣಿಯಾಗುತ್ತಿದ್ದಾರೆ ಮತ್ತು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್​ ನೇಮಿಸಿರುವ ಅಮಿಕಸ್ ಕ್ಯೂರಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಜೈಲುಗಳಲ್ಲಿ ಮಹಿಳಾ ಕೈದಿಗಳು ಗರ್ಭಿಣಿಯಾಗುತ್ತಿದ್ದಾರೆ ಎಂದು ವರದಿಯಾಗಿದೆ. ಜೈಲಿನಲ್ಲಿ ಕನಿಷ್ಠ 196 ಶಿಶುಗಳು ಜನಿಸಿರುವುದಾಗಿ ಅಮಿಕಸ್ ಕ್ಯೂರಿ ಕಲ್ಕತ್ತಾ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಜೈಲು ಸುಧಾರಣೆಗೆ ಸಂಬಂಧಿಸಿದ ಪ್ರಕರಣವನ್ನು ಪರಿಗಣಿಸುವಾಗ ಅಮಿಕಸ್ ಕ್ಯೂರಿ ಈ ಮಾಹಿತಿ ನೀಡಿದ್ದಾರೆ. ಪುರುಷ ಕೈದಿಗಳನ್ನು ಮಹಿಳಾ ಕೈದಿಗಳಿಂದ ದೂರ ಇಡುವಂತೆ ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ: ಜೈಲಿನಲ್ಲಿ ಗರ್ಭಿಣಿಯರಾಗುತ್ತಿರುವ ಮಹಿಳಾ ಕೈದಿಗಳು, 196 ಶಿಶುಗಳ ಜನನ
ಗರ್ಭಿಣಿ
Follow us
ನಯನಾ ರಾಜೀವ್
|

Updated on:Feb 09, 2024 | 8:31 AM

ಪಶ್ಚಿಮ ಬಂಗಾಳ(West Bengal)ದ ವಿವಿಧ ಜೈಲು(Jail)ಗಳ ಬಗ್ಗೆ ಕೋಲ್ಕತ್ತಾ ಹೈಕೋರ್ಟ್​ ತೀವ್ರ ಕಳವಳ ವ್ಯಕ್ತಪಡಿಸಿದೆ. ಕಸ್ಟಡಿಯಲ್ಲಿದ್ದಾಗ ಮಹಿಳಾ ಕೈದಿಗಳು ಗರ್ಭಿಣಿಯಾಗುವ ಆತಂಕಕಾರಿ ವಿಷಯ ಹೊರಬಂದಿದ್ದು, ರಾಜ್ಯಾದ್ಯಂತ ವಿವಿಧ ಸುಧಾರಣಾ ಕೇಂದ್ರಗಳಲ್ಲಿ ಅಂದಾಜು 196 ಶಿಶುಗಳು ಜನಿಸಿರುವುದಾಗಿ ವರದಿಯಾಗಿದೆ. ಜೈಲುಗಳಲ್ಲಿನ ಜನದಟ್ಟಣೆಯ ಕುರಿತು 2018 ರಲ್ಲಿ ಸ್ವಯಂ ಪ್ರೇರಿತವಾಗಿ ಹೈಕೋರ್ಟ್‌ನಿಂದ ಭಂಜಾ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಲಾಯಿತು.

ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡ ವಕೀಲ ತಪಸ್ ಕುಮಾರ್ ಭಂಜಾ ಅವರು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಸುಪ್ರತಿಮ್ ಭಟ್ಟಾಚಾರ್ಯ ಅವರನ್ನೊಳಗೊಂಡ ಪೀಠಕ್ಕೆ ಈ ವಿಷಯ ತಿಳಿಸಿದರು.

ಅಮಿಕಸ್ ನೀಡಿದ ಮತ್ತೊಂದು ಸಲಹೆಯೆಂದರೆ, ಎಲ್ಲಾ ಜಿಲ್ಲಾ ನ್ಯಾಯಾಧೀಶರು (ಅವರು ಸಂದರ್ಶಕರ ಮಂಡಳಿಯ ಅಧ್ಯಕ್ಷರಾಗಿರುವುದರಿಂದ) ಸುಧಾರಣಾ ಮನೆಗಳಲ್ಲಿ ತಂಗಿದ್ದ ಸಮಯದಲ್ಲಿ ಎಷ್ಟು ಮಹಿಳಾ ಕೈದಿಗಳು ಗರ್ಭಿಣಿಯಾಗಿದ್ದಾರೆ ಎಂಬುದನ್ನು ಕಂಡುಹಿಡಿಯಲು ತಮ್ಮ ವ್ಯಾಪ್ತಿಯಲ್ಲಿರುವ ಸುಧಾರಣಾ ಮನೆಗಳಿಗೆ ಭೇಟಿ ನೀಡಬೇಕು.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರದಲ್ಲಿ ಹಿಮಪಾತ, ದಿಕ್ಕೇ ತೋಚದ ಸ್ಥಿತಿಯಲ್ಲಿದ್ದಾಗ ಗರ್ಭಿಣಿ ನೆರವಿಗೆ ದೇವರಂತೆ ಧಾವಿಸಿದ ಸೈನಿಕರು

ಭಂಜಾ ಅವರು ಜೈಲುಗಳಲ್ಲಿ ಮಹಿಳೆಯರು ಗರ್ಭಿಣಿಯಾಗುವುದು ಸೇರಿದಂತೆ ಸಮಸ್ಯೆಗಳನ್ನು ಒಳಗೊಂಡ ಟಿಪ್ಪಣಿ ಮತ್ತು ಸಲಹೆಗಳನ್ನು ವಿಭಾಗೀಯ ಪೀಠದ ಮುಂದೆ ಸಲ್ಲಿಸಿದರು. ಈಗ ಆ 196 ಮಕ್ಕಳ ತಂದೆ ಯಾರೆಂಬುದು ಬಿಡಿಸಲಾಗದ ಒಗಟಾಗಿದೆ. ಮಹಿಳಾ ಕೈದಿಗಳಿರುವ ಆವರಣಕ್ಕೆ ಪುರುಷ ಕೈದಿಗಳು ಪ್ರವೇಶಿಸುವುದನ್ನು ನಿರ್ಬಂಧಿಸಬೇಕು ಎಂದು ಅಮಿಕಸ್ ಸಲಹೆ ನೀಡಿದೆ.

ಎಲ್ಲಾ ಮಹಿಳಾ ಖೈದಿಗಳನ್ನು ಸುಧಾರಣಾ ಮನೆಗಳಿಗೆ ಕಳುಹಿಸುವ ಮೊದಲು, ಅವರ ಲೈಂಗಿಕ ಶೋಷಣೆಯನ್ನು ತಡೆಗಟ್ಟಲು ಗರ್ಭಧಾರಣೆಯ ಪರೀಕ್ಷೆಯನ್ನು ನಡೆಸಲು ಎಲ್ಲಾ ಜಿಲ್ಲೆಗಳ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:30 am, Fri, 9 February 24

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು