AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ಪ್ರದೇಶದಲ್ಲಿ ಜನರ ಆರೋಗ್ಯ ತಪಾಸಣೆಗೆ 10 ಕಿಮೀ ನಡೆದು ಬಂದ ಆರೋಗ್ಯ ಕಾರ್ಯಕರ್ತರು

ಈ ಆರೋಗ್ಯ ಕಾರ್ಯಕರ್ತೆಯರ ಕರ್ತವ್ಯ ಪ್ರಜ್ಞೆಗೆ ದೇಶಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ.

ಬುಡಕಟ್ಟು ಪ್ರದೇಶದಲ್ಲಿ ಜನರ ಆರೋಗ್ಯ ತಪಾಸಣೆಗೆ 10 ಕಿಮೀ ನಡೆದು ಬಂದ ಆರೋಗ್ಯ ಕಾರ್ಯಕರ್ತರು
ಛತ್ತೀಸಗಡದ ಬುಡಕಟ್ಟು ಪ್ರದೇಶದಲ್ಲಿ ಆರೋಗ್ಯ ಶಿಬಿರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 23, 2022 | 1:29 PM

ಬಲರಾಮ್​ಪುರ (ಛತ್ತೀಸಗಡ): ಬುಡಕಟ್ಟು ಜನರ ಆರೋಗ್ಯ ತಪಾಸಣೆ ಮಾಡಲೆಂದು ಇಬ್ಬರು ಆರೋಗ್ಯ ಕಾರ್ಯಕರ್ತೆಯರು ಗುಡ್ಡಗಾಡು ಪ್ರದೇಶದಲ್ಲಿ 10 ಕಿಮೀ ನಡೆದಿದ್ದಾರೆ. ಕಷ್ಟಪಟ್ಟು ಬೆಟ್ಟ ಹತ್ತಿ ಬಲರಾಮ್​ಪುರ ಜಿಲ್ಲೆಯಲ್ಲಿ ಬುಡಕಟ್ಟು ಜನರೇ ಹೆಚ್ಚಾಗಿರುವ ಝಲ್​ವಾಸಾ ಗ್ರಾಮಕ್ಕೆ ಭೇಟಿ ನೀಡಲು ಹರಸಾಹಸ ಪಟ್ಟಿರುವ ಛತ್ತೀಸಗಡದ (Chhattisgarh) ಈ ಆರೋಗ್ಯ ಕಾರ್ಯಕರ್ತೆಯರ ಕರ್ತವ್ಯ ಪ್ರಜ್ಞೆಗೆ ದೇಶಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ. ಬುಡಕಟ್ಟು ಜನರೇ ಹೆಚ್ಚಾಗಿರುವ ಬಲರಾಮ್​ಪುರದಲ್ಲಿ ಗುಡ್ಡಗಾಡು ಪ್ರದೇಶದಲ್ಲಿರುವ ಹಳ್ಳಿಗಳಲ್ಲಿ ಜಿಲ್ಲಾಡಳಿತವು ಆರೋಗ್ಯ ಶಿಬಿರಗಳನ್ನು ಆಯೋಜಿಸಿತ್ತು. ಈ ಗ್ರಾಮಗಳು ದಟ್ಟ ಅರಣ್ಯದಿಂದ ಸುತ್ತುವರಿದಿದೆ.

ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಈ ಶಿಬಿರಗಳನ್ನು ಆಯೋಜಿಸಿವೆ. ಸಬಾಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಝಾಲ್​ವಾಸಾ ಗ್ರಾಮಕ್ಕೆ ತಲುಪಲು ಹಲವು ಬೆಟ್ಟಗಳನ್ನು ಹತ್ತಿ ಇಳಿಯಬೇಕಾಗುತ್ತದೆ. ನಡೆದಾಡಲು ಕಷ್ಟವಾಗಿರುವ ಕಾಡಿನಲ್ಲಿ 10 ಕಿಮೀ ನಡೆಯಬೇಕಿದೆ. ಈ ಗ್ರಾಮದಲ್ಲಿ 28 ಕುಟುಂಬಗಳಿವೆ. ಈ ಪೈಕಿ 20 ವಿಶೇಷ ಹಿಂದುಳಿದ ಬುಡಕಟ್ಟುಗಳು. ಆರೋಗ್ಯ ಶಿಬಿರ ಆಯೋಜಿಸಿದ್ದ ತಂಡದಲ್ಲಿ ಆರೋಗ್ಯ ಕಾರ್ಯಕರ್ತೆಯರಾದ ಹಲ್ಮಿ ಟಿರ್​ಕೆ ಮತ್ತು ಸುಚಿತಾ ಸಿಂಗ್ ಸಹ ಇದ್ದಾರೆ.

‘ಸಬಾಗ್ ಆರೋಗ್ಯ ಕೇಂದ್ರದಲ್ಲಿ ನಾನು ಎಎನ್​ಎಂ ಆಗಿ ಕೆಲಸ ಮಾಡುತ್ತಿದ್ದೇನೆ. ಬೆಟ್ಟ ಮತ್ತು ಅರಣ್ಯ ಪ್ರದೇಶಗಳನ್ನು ಹಾದು ನಾವು ಇಲ್ಲಿಗೆ ತಲುಪಿದೆವು. ಸುಮಾರು 10 ಕಿಮೀ ನಡೆದು ಬಂದು, ಇಲ್ಲಿ ಅರೋಗ್ಯ ಶಿಬಿರ ನಡೆಸಿ, ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದೆವು’ ಎಂದು ಹಲ್ಮಿ ಟ್ರಿಕೆ ಹೇಳಿದರು.

ಆರೋಗ್ಯ ಕಾರ್ಯಕರ್ತೆಯರ ಸಾಧನೆಯನ್ನು ಬಲರಾಮ್​ಪುರ ಜಿಲ್ಲಾಧಿಕಾರಿ ಕುಂದನ್ ಕಪೂರ್ ಸಹ ಶ್ಲಾಘಿಸಿದ್ದಾರೆ. ಅಷ್ಟು ದೂರದ ಹಳ್ಳಿಗೆ ನಡೆದು ಹೋಗುವುದು ಸುಲಭವಲ್ಲ. ಅಲ್ಲಿಗೆ ನಮ್ಮ ತಂಡಗಳು ನಿನ್ನೆ ಹೋಗಿದ್ದವು. ತಂಡದೊಂದಿಗೆ ಎಎನ್​ಎಂ ಹಲ್ಮಿ ಮತ್ತು ಸುಚಿತಾ ಸಿಂಗ್ ಸಹ ಇದ್ದರು. ಜನರ ಆರೋಗ್ಯ ತಪಾಸಣೆಗಾಗಿ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಇಂಥ ಇನ್ನಷ್ಟು ಶಿಬಿರಗಳನ್ನು ನಾವು ಆಯೋಜಿಸುತ್ತಿದ್ದೇವೆ ಎಂದು ಅವರು ಎಎನ್​ಐ ಸುದ್ದಿಸಂಸ್ಥೆಗೆ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಸಹ ಇಂಥ ತಂಡಗಳ ಭಾಗವಾಗಿರುತ್ತಾರೆ. ರಕ್ತದ ಒತ್ತಡ, ಸಕ್ಕರೆ ಪ್ರಮಾಣ ಮತ್ತು ಒಟ್ಟಾರೆ ಆರೋಗ್ಯದ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ಈ ವೇಳೆ ಸಾಕಷ್ಟು ಜನರು ಆರೋಗ್ಯವಾಗಿಯೇ ಇದ್ದರು ಎಂದು ಜಿಲ್ಲಾಧಿಕಾರಿ ಹೇಳಿದರು.

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ