Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಕುಡಿಯುವ ನೀರಿಗೆ ಹಾಹಾಕಾರ; ಪ್ರಾಣ ಪಣಕ್ಕಿಟ್ಟು ಬಾವಿಯ ತಳದಿಂದ ನೀರು ತಂದ ಮಹಾರಾಷ್ಟ್ರದ ಮಹಿಳೆ

ಈ ಚಿತ್ರವು ಮಹಾರಾಷ್ಟ್ರದ ತ್ರಯಂಬಕೇಶ್ವರ ಬಳಿಯ ಮೆಟ್‌ಘರ್ ಗ್ರಾಮದ್ದು. ಕುಡಿಯಲು ನೀರಿಲ್ಲ, ಮಹಿಳೆಯರು ಜೀವವನ್ನೇ ಪಣಕ್ಕಿಟ್ಟು ನೀರು ತುಂಬಿಸಿಕೊಳ್ಳುತ್ತಿದ್ದಾರೆ. ಇದೆಲ್ಲವೂ 2022 ರಲ್ಲಿ ಸಂಭವಿಸುತ್ತದೆ ಎಂದು ವಿಡಿಯೊ ಶೀರ್ಷಿಕೆಯಲ್ಲಿ ಹೇಳಲಾಗಿದೆ

Watch ಕುಡಿಯುವ ನೀರಿಗೆ ಹಾಹಾಕಾರ; ಪ್ರಾಣ ಪಣಕ್ಕಿಟ್ಟು ಬಾವಿಯ ತಳದಿಂದ ನೀರು ತಂದ ಮಹಾರಾಷ್ಟ್ರದ ಮಹಿಳೆ
ಬಾವಿಗಿಳಿಯುತ್ತಿರುವ ಮಹಾರಾಷ್ಟ್ರದ ಮಹಿಳೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 06, 2022 | 7:20 PM

ನಾಸಿಕ್: ಬೇಸಿಗೆಯಲ್ಲಿ ಭಾರತದ ಅನೇಕ ಭಾಗಗಳು ಬರ ಮತ್ತು ಸೆಖೆಯಿಂದ ತತ್ತರಿಸಿದಾಗ, ಗ್ರಾಮೀಣ ಪ್ರದೇಶದ ಅನೇಕ ಮಹಿಳೆಯರು ತಮ್ಮ ಕುಟುಂಬಗಳಿಗೆ ನೀರು ತರಲು ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ(Maharashtra) ನೀರಿನ ಸೆಲೆ ಬತ್ತಿ ಹೋಗುತ್ತಿರುವಾಗ ಕುಡಿಯುವ ಶುದ್ಧ ನೀರಿಗಾಗಿ  ಮಹಿಳೆಯೊಬ್ಬರು ಆಳವಾದ ಬಾವಿಗೆ ಇಳಿದು ತಳದಿಂದ ನೀರು ತರುತ್ತಿರುವುದು ವಿಡಿಯೊದಲ್ಲಿದೆ. ಟ್ವಿಟರ್​​ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ, ಮಹಿಳೆಯೊಬ್ಬರು ಬಾವಿಗೆ ಇಳಿಯುವುದನ್ನು ಕಾಣಬಹುದು. ಚಿಕ್ಕ ಮತ್ತು ಅದೃಶ್ಯವಾದ ಮೆಟ್ಟಿಲುಗಳಲ್ಲಿ ಕಾಲಿಟ್ಟು ಮಹಿಳೆಯೊಬ್ಬರು ನೀರು ತರಲು ಬಾವಿಗಿಳಿಯುತ್ತರುವ  ಈ ದೃಶ್ಯ ನಾಸಿಕ್ ಜಿಲ್ಲೆಯ ಹಳ್ಳಿಯೊಂದರದ್ದು. “ಈ ಚಿತ್ರವು ಮಹಾರಾಷ್ಟ್ರದ ತ್ರಯಂಬಕೇಶ್ವರ (Trimbakeshwar)ಬಳಿಯ ಮೆಟ್‌ಘರ್ ಗ್ರಾಮದ್ದು. ಕುಡಿಯಲು ನೀರಿಲ್ಲ, ಮಹಿಳೆಯರು ಜೀವವನ್ನೇ ಪಣಕ್ಕಿಟ್ಟು ನೀರು ತುಂಬಿಸಿಕೊಳ್ಳುತ್ತಿದ್ದಾರೆ. ಇದೆಲ್ಲವೂ 2022 ರಲ್ಲಿ ಸಂಭವಿಸುತ್ತದೆ ಎಂದು ವಿಡಿಯೊ ಶೀರ್ಷಿಕೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಬಿಸಿಗಾಳಿ ತೀವ್ರವಾಗಿ ಕಾಡುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ ಏಪ್ರಿಲ್ 10 ರವರೆಗೆ ವಿದರ್ಭದಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ತಾಪ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಪುಣೆಯ ಐಎಂಡಿ ಹವಾಮಾನ ಸಂಶೋಧನೆ ಮತ್ತು ಸೇವೆಗಳ ಮುಖ್ಯಸ್ಥ ಕೆಎಸ್ ಹೊಸಲಿಕರ್ ಅವರು ಏಪ್ರಿಲ್ 6 ರಂದು ಮಾಡಿದ ಟ್ವೀಟ್ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭದ ಕೆಲವು ಭಾಗಗಳಲ್ಲಿ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ  ಎಂದು ಹೇಳಿದರು.

ಬಯಲು ಪ್ರದೇಶಗಳಲ್ಲಿ ಕನಿಷ್ಠ 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಮತ್ತು ಗುಡ್ಡಗಾಡು ಪ್ರದೇಶಗಳಿಗೆ ಕನಿಷ್ಠ 30 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಆದಾಗ ಅದನ್ನು ಗರಿಷ್ಠ ತಾಪಮಾನ ಎಂದು ಐಎಂಡಿ ವರ್ಗೀಕರಿಸುತ್ತದೆ. ಸಾಮಾನ್ಯದಿಂದ ಗರಿಷ್ಠ ತಾಪಮಾನ ವ್ಯತ್ಯಾಸವು 4.5 ಡಿಗ್ರಿ ಸೆಲ್ಸಿಯಸ್ ನಿಂದ 6.4 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಬೇಕು. ದಾಖಲಾದ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 6.4 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದಾಗ ತೀವ್ರವಾದ ಶಾಖದ ಅಲೆ ಎನ್ನಲಾಗುತ್ತದೆ.

ಏಪ್ರಿಲ್ 5 ರಂದು ಸ್ಕೈಮೆಟ್‌ನ ಹವಾಮಾನ ವರದಿಯು ವಿದರ್ಭದ ಅಕೋಲಾವು 40 ಡಿಗ್ರಿ ಸೆಲ್ಸಿಯಸ್ ಗಿಂತ ಗರಿಷ್ಠ ತಾಪಮಾನವನ್ನು ಕಂಡಿದೆ ಎಂದು ಹೇಳುತ್ತದೆ, ಪಾದರಸದ ಮಟ್ಟವು 44 ಡಿಗ್ರಿ ಸೆಲ್ಸಿಯಸ್ ಅನ್ನು ಸಹ ಮುಟ್ಟುತ್ತದೆ. “ಅಕೋಲಾ ವಿದರ್ಭದಲ್ಲಿ ಇಲ್ಲಿಯವರೆಗೆ 44 ಡಿಗ್ರಿಗಳನ್ನು ಹೊಂದಿರುವ ಏಕೈಕ ಪ್ರದೇಶವಾಗಿದೆ ಎಂದು ಸ್ಕೈಮೆಟ್ ವರದಿ ಹೇಳಿದೆ.

ಇದನ್ನೂ ಓದಿ: ಅಲಿಗಢ, ಬದೌನ್ ಮತ್ತು ಸುಲ್ತಾನ್‌ಪುರ ಸೇರಿದಂತೆ ಉತ್ತರ ಪ್ರದೇಶದ 12 ಜಿಲ್ಲೆಗಳ ಹೆಸರು ಬದಲಾಯಿಸಲಿದೆ ಯೋಗಿ ಸರ್ಕಾರ

ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್