AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Ramdev: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ; ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Baba Ramdev: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ; ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್
ಬಾಬಾ ರಾಮ್‌ದೇವ್
TV9 Web
| Edited By: |

Updated on: Nov 26, 2022 | 12:41 PM

Share

ಮುಂಬೈ: ಯೋಗ ಗುರು ಬಾಬಾ ರಾಮದೇವ್ (Baba Ramdev) ಶುಕ್ರವಾರ ಮಹಿಳೆಯರ ಉಡುಪುಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟ್ರೋಲ್ ಆಗಿದ್ದಾರೆ. ಪತಂಜಲಿ (Patanjali) ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಾಬಾ ರಾಮ್‌ದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು. ಬಾಬಾ ರಾಮದೇವ್ ಅವರ ಈ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದಾರೆ.

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: Patanjali: ಬಾಬಾ ರಾಮದೇವ್​​ ಗೆ ಮತ್ತೊಮ್ಮೆ ಶಾಕ್! ಪತಂಜಲಿಯ ಪಂಚ ಔಷಧಗಳು ನಿಷೇಧ, ಮೆಡಿಕಲ್ ಮಾಫಿಯಾ ಅಂದರು ಬಾಬಾ

ಈ ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಇನ್ನು ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ತಮಾಷೆಯಾಗಿ ಮಾತನಾಡಿದ ಬಾಬಾ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ