AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Ramdev: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ; ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Baba Ramdev: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ; ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್
ಬಾಬಾ ರಾಮ್‌ದೇವ್
TV9 Web
| Edited By: |

Updated on: Nov 26, 2022 | 12:41 PM

Share

ಮುಂಬೈ: ಯೋಗ ಗುರು ಬಾಬಾ ರಾಮದೇವ್ (Baba Ramdev) ಶುಕ್ರವಾರ ಮಹಿಳೆಯರ ಉಡುಪುಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟ್ರೋಲ್ ಆಗಿದ್ದಾರೆ. ಪತಂಜಲಿ (Patanjali) ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಾಬಾ ರಾಮ್‌ದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು. ಬಾಬಾ ರಾಮದೇವ್ ಅವರ ಈ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದಾರೆ.

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: Patanjali: ಬಾಬಾ ರಾಮದೇವ್​​ ಗೆ ಮತ್ತೊಮ್ಮೆ ಶಾಕ್! ಪತಂಜಲಿಯ ಪಂಚ ಔಷಧಗಳು ನಿಷೇಧ, ಮೆಡಿಕಲ್ ಮಾಫಿಯಾ ಅಂದರು ಬಾಬಾ

ಈ ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಇನ್ನು ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ತಮಾಷೆಯಾಗಿ ಮಾತನಾಡಿದ ಬಾಬಾ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್