AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಠಾಣೆಯಿಂದ ಠಾಣೆಗೆ ಪ್ರಕರಣ ವರ್ಗಾಯಿಸಲು 1 ತಿಂಗಳು ಬೇಕಾ? ಪೊಲೀಸರ ಉತ್ತರ ಏನು?

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಅನುಮಾನ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಇಬ್ಬರು ಮಹಿಳೆಯರು ಬೇರೆ ಜಿಲ್ಲೆಗೆ ಹೋಗಿ ದೂರು ನೀಡಿದ್ದಾರೆ, ಆದರೆ ಅದನ್ನು ಸಂಬಂಧಿತ ಠಾಣೆಗೆ ವರ್ಗಾವಣೆ ಮಾಡಲು ಪೊಲೀಸರು 1 ತಿಂಗಳು ತೆಗೆದುಕೊಂಡಿದ್ದಾರೆ. ಇಷ್ಟು ತಡವಾಗಿ ಯಾಕೆ? ವರ್ಗಾವಣೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಹಿರಿಯ ಪೊಲೀಸ್​​ ಅಧಿಕಾರಿಗಳು ಉತ್ತರ ನೀಡಿದ್ದಾರೆ.

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಠಾಣೆಯಿಂದ ಠಾಣೆಗೆ ಪ್ರಕರಣ ವರ್ಗಾಯಿಸಲು 1 ತಿಂಗಳು ಬೇಕಾ? ಪೊಲೀಸರ ಉತ್ತರ ಏನು?
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 21, 2023 | 12:52 PM

ಇಂಫಾಲ್: ಮಣಿಪುರದಲ್ಲಿ ಎರಡು ಸಮುದಾಯಗಳ ಸಂಘರ್ಷಣೆಯಿಂದ ಶುರುವಾದ ಹಿಂಸಾಚಾರ, ಇದೀಗ ಮಹಿಳೆಯರನ್ನು ಅವಮಾನಿಸುವರೆಗೆ ಬಂದಿದೆ. ಮೇ 4 ರಂದು ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಿದ್ದಾರೆ, ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ, ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ಕೂಡ ಇದನ್ನು ಖಂಡಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ, ಆದರೆ ಇಲ್ಲೊಂದು ಪ್ರಶ್ನೆ ಮತ್ತು ಅನುಮಾನ ಅನೇಕರಿಗೆ ಎದ್ದಿತ್ತು. ಇಬ್ಬರು ಯುವತಿಯರು ಘಟನೆ ನಡೆದ ಸ್ಥಳವನ್ನು ತೊರೆದು ಬೇರೆ ಜಿಲ್ಲೆಗೆ ಹೋಗಿ ಅಲ್ಲಿನ ಪೊಲೀಸ್​​ ಇಲಾಖೆಯಲ್ಲಿ ದೂರು ನೀಡಿದ್ದಾರೆ. ಆದರೆ ಪೊಲೀಸರು ಸಂಬಂಧಿತ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲು 1 ತಿಂಗಳು ತೆಗೆದುಕೊಂಡಿದ್ದಾರೆ, ಒಂದು ಪ್ರಕರಣವನ್ನು ವರ್ಗಾಯಿಸಲು ಇಷ್ಟು ದಿನ ಬೇಕಿತ್ತಾ, ಯಾಕೆ? ಇಷ್ಟು ಸಮಯ ತೆಗೆದುಕೊಂಡರು ಎಂಬ ಪ್ರಶ್ನೆಗೆ ಹಿರಿಯ ಪೊಲೀಸ್​​ ಅಧಿಕಾರಿ ಸಚ್ಚಿದಾನಂದ ಉತ್ತರಿಸಿದ್ದಾರೆ.

ಗುರುವಾರ ವೈರಲ್​​ ಆಗಿರುವ ವೀಡಿಯೊಕ್ಕೆ ಸಂಬಂಧಿಸಿದಂತೆ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಸರ್ಕಾರವು ಮತ್ತು ಪೊಲೀಸ್​​ ಇಲಾಖೆ ಈ ವೀಡಿಯೊ ವೈರಲ್​​ ಮಾಡದಂತೆ ನಿರ್ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​​ ಇಲಾಖೆ ಟ್ವಿಟರ್​​ನಲ್ಲಿ ಟ್ವೀಟ್​​ ಕೂಡ ಮಾಡಿತ್ತು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನರನ್ನು ಬಂಧಿಸಲಾಗಿದೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ತೌಬಲ್ ಪೊಲೀಸ್ ಸೂಪರಿಂಟೆಂಡೆಂಟ್ ಸಚ್ಚಿದಾನಂದ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಮಾಹಿತಿ ಪ್ರಕಾರ ಸಾಕ್ಷಾಧಾರಗಳ ಕೊರತೆಯಿಂದ ಇಲ್ಲಿಯವರೆಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ವಿಡಿಯೊದಲ್ಲಿದ್ದ ನಾಲ್ವರು ಆರೋಪಿಗಳ ಬಂಧನ

ಬೇರೆ ಜಿಲ್ಲೆಯಲ್ಲಿ ನೀಡಿದ್ದ ದೂರನ್ನು ತೌಬಲ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡುವ ಸಮಯದಲ್ಲಿ ಪೊಲೀಸರು ಠಾಣೆಯಲ್ಲಿ ಇರಲಿಲ್ಲ. ಈ ಪ್ರದೇಶದಲ್ಲಿ ಅನೇಕ ಹಿಂಸಾಚಾರದ ಘಟನೆಗಳು ನಡೆಯುತ್ತಿತ್ತು. ಜತೆಗೆ ಒಂದು ಕಡೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಜನ, ಪೊಲೀಸ್​​ ಠಾಣೆಯ ಮೇಲೆಯು ದಾಳಿ ನಡೆಸಿದ್ದಾರೆ. ಅನೇಕ ಕಡೆ ಮನೆಗಳಿಗೆ ಬೆಂಕಿ ಕೂಡ ಹಾಕಿದ್ದರು. ಇದನ್ನು ನಿಭಾಯಿಸುವಲ್ಲಿ ಪೊಲೀಸರು ನಿರತರಾಗಿದ್ದರು ಎಂದು ಹೇಳಿದ್ದಾರೆ, ಆದರೆ ಈ ಕಾರಣವನ್ನು ಹಿರಿಯ ಪೊಲೀಸರು ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.

ಇನ್ನೂ ಈವರೆಗೂ 6 ಸಾವಿರ ಎಫ್​ಐಆರ್ ದಾಖಲಿಸಲಾಗಿದ್ದು.  70 ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿಂಸಾಚಾರ ಪ್ರಕರಣ ಸಂಬಂಧ ಒಟ್ಟು 657 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿದಿನ ಸರಾಸರಿ 75 ಪ್ರಕರಣಗಳು ದಾಖಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಮಂತ್ರಾಲಯ: ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮಂತ್ರಾಲಯ: ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ