AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ... ಆದರೆ ಯಾರೂ ನಿರ್ಬಂಧ ಹೇರಿಲ್ಲ. ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರು ದೇವಸ್ಥಾನ ಪ್ರವೇಶಿಸುವಂತಿಲ್ಲ.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಆಂಧ್ರದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಸಾಧು ಶ್ರೀನಾಥ್​
|

Updated on: Jul 28, 2023 | 1:30 PM

Share

ಅನಂತಪುರ, ಜುಲೈ 28: ನಾರಪಾಲ ಮಂಡಲದ ಗೂಗುಡು ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಒಂದು ಪ್ರತ್ಯೇಕತೆಯ ವಿಶೇಷವಿದೆ. ಈ ದೇವಾಲಯದೊಳಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಏಕೆಂದರೆ ಈ ದೇವಾಲಯಕ್ಕೆ ಮಹಿಳೆಯರು ಪ್ರವೇಶ ಮಾಡುವುದಿಲ್ಲ ಎಂಬ ಎಂಬ ಆಚಾರ ಮೊದಲಿನಿಂದಲೂ ಇದೆ. ಆದರೆ ಮಹಿಳೆಯರು ದೇವಸ್ಥಾನ ಪ್ರವೇಶಿಸಬಾರದು ಎಂಬ ಲಿಖಿತ ನಿಯಮವೇನೂ ಇಲ್ಲ. 13 ವರ್ಷದೊಳಗಿನ ಹುಡುಗಿಯರು ಒಳಗೆ ಹೋಗಿ ಸ್ವಾಮಿಯ ದರ್ಶನ ಮಾಡುತ್ತಾರೆ. ಆದರೆ 13 ವರ್ಷ ಮೇಲ್ಪಟ್ಟ ಮಹಿಳೆಯರು ತಾವಾಗಿಯೇ ದೇವಸ್ಥಾನ ಪ್ರವೇಶಿಸುವುದಿಲ್ಲ. ಮಹಿಳೆಯರು ಸಾಮಾನ್ಯವಾಗಿ ತಮ್ಮ ಮಾಸಿಕ ಅವಧಿಯಲ್ಲಿ ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂಬುದು ಗಮನಾರ್ಹ.

ಅದೇ ರೀತಿ ಹಿಂದಿನಿಂದಲೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಕಾಲಕ್ರಮೇಣ ಮಹಿಳೆಯರು ದೇವಸ್ಥಾನದ ಒಳಗೆ ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ದರ್ಶನ ಪಡೆಯುವುದನ್ನು ನಿಲ್ಲಿಸಿದರು… ಅಂದಿನಿಂದ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಪ್ರಚಾರವೂ ನಡೆಯುತ್ತಿತ್ತು… ವಾಸ್ತವವಾಗಿ ಅಂತಹ ಲಿಖಿತ ನಿಯಮವೇನೂ ಇಲ್ಲ…

ಅದರಂತೆ ಅನಾದಿ ಕಾಲದ ಸಂಪ್ರದಾಯದಂತೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಮಾಜಿ ಸಚಿವೆ ಶೈಲಜಾ ನಾಥ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಗೂಗೂಡು ಗ್ರಾಮದ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅಪಘಾತದಲ್ಲಿ ಕೈ ಮುರಿದುಕೊಂಡಿದ್ದರು. ಹಾಗಾಗಿ ಅಂದಿನಿಂದ ಮಾಜಿ ಸಚಿವೆ ಶೈಲಜ ನಾಥ್ ಕೂಡ ದೇವಸ್ಥಾನದ ಹೊರಗೇ ಉಳಿದುಕೊಂಡಿದ್ದರು. ಅವರು ಹೊರಗಡೆಯಿಂದ ದೇವರ ದರ್ಶನ ಪಡೆಯುತ್ತಾರೆಯೇ ಹೊರತು, ದೇವಸ್ಥಾನದೊಳಕ್ಕೆ ಪ್ರವೇಶಿಸುವುದಿಲ್ಲ.

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ… ದಲಿತರ ಪ್ರವೇಶಕ್ಕೆ ಸಹ ಯಾರೂ ನಿರ್ಬಂಧ ಹೇರಿಲ್ಲ. ಕೆಲವು ವರ್ಷಗಳಿಂದ ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶಿಸುವಂತಿಲ್ಲ. ಹೊರಗಿನಿಂದ ಸ್ವಾಮಿಯ ದರ್ಶನ ಮಾಡುತ್ತಾರೆ ಅಷ್ಟೆ.

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ