AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ... ಆದರೆ ಯಾರೂ ನಿರ್ಬಂಧ ಹೇರಿಲ್ಲ. ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರು ದೇವಸ್ಥಾನ ಪ್ರವೇಶಿಸುವಂತಿಲ್ಲ.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಆಂಧ್ರದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಸಾಧು ಶ್ರೀನಾಥ್​
|

Updated on: Jul 28, 2023 | 1:30 PM

Share

ಅನಂತಪುರ, ಜುಲೈ 28: ನಾರಪಾಲ ಮಂಡಲದ ಗೂಗುಡು ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಒಂದು ಪ್ರತ್ಯೇಕತೆಯ ವಿಶೇಷವಿದೆ. ಈ ದೇವಾಲಯದೊಳಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಏಕೆಂದರೆ ಈ ದೇವಾಲಯಕ್ಕೆ ಮಹಿಳೆಯರು ಪ್ರವೇಶ ಮಾಡುವುದಿಲ್ಲ ಎಂಬ ಎಂಬ ಆಚಾರ ಮೊದಲಿನಿಂದಲೂ ಇದೆ. ಆದರೆ ಮಹಿಳೆಯರು ದೇವಸ್ಥಾನ ಪ್ರವೇಶಿಸಬಾರದು ಎಂಬ ಲಿಖಿತ ನಿಯಮವೇನೂ ಇಲ್ಲ. 13 ವರ್ಷದೊಳಗಿನ ಹುಡುಗಿಯರು ಒಳಗೆ ಹೋಗಿ ಸ್ವಾಮಿಯ ದರ್ಶನ ಮಾಡುತ್ತಾರೆ. ಆದರೆ 13 ವರ್ಷ ಮೇಲ್ಪಟ್ಟ ಮಹಿಳೆಯರು ತಾವಾಗಿಯೇ ದೇವಸ್ಥಾನ ಪ್ರವೇಶಿಸುವುದಿಲ್ಲ. ಮಹಿಳೆಯರು ಸಾಮಾನ್ಯವಾಗಿ ತಮ್ಮ ಮಾಸಿಕ ಅವಧಿಯಲ್ಲಿ ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂಬುದು ಗಮನಾರ್ಹ.

ಅದೇ ರೀತಿ ಹಿಂದಿನಿಂದಲೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಕಾಲಕ್ರಮೇಣ ಮಹಿಳೆಯರು ದೇವಸ್ಥಾನದ ಒಳಗೆ ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ದರ್ಶನ ಪಡೆಯುವುದನ್ನು ನಿಲ್ಲಿಸಿದರು… ಅಂದಿನಿಂದ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಪ್ರಚಾರವೂ ನಡೆಯುತ್ತಿತ್ತು… ವಾಸ್ತವವಾಗಿ ಅಂತಹ ಲಿಖಿತ ನಿಯಮವೇನೂ ಇಲ್ಲ…

ಅದರಂತೆ ಅನಾದಿ ಕಾಲದ ಸಂಪ್ರದಾಯದಂತೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಮಾಜಿ ಸಚಿವೆ ಶೈಲಜಾ ನಾಥ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಗೂಗೂಡು ಗ್ರಾಮದ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅಪಘಾತದಲ್ಲಿ ಕೈ ಮುರಿದುಕೊಂಡಿದ್ದರು. ಹಾಗಾಗಿ ಅಂದಿನಿಂದ ಮಾಜಿ ಸಚಿವೆ ಶೈಲಜ ನಾಥ್ ಕೂಡ ದೇವಸ್ಥಾನದ ಹೊರಗೇ ಉಳಿದುಕೊಂಡಿದ್ದರು. ಅವರು ಹೊರಗಡೆಯಿಂದ ದೇವರ ದರ್ಶನ ಪಡೆಯುತ್ತಾರೆಯೇ ಹೊರತು, ದೇವಸ್ಥಾನದೊಳಕ್ಕೆ ಪ್ರವೇಶಿಸುವುದಿಲ್ಲ.

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ… ದಲಿತರ ಪ್ರವೇಶಕ್ಕೆ ಸಹ ಯಾರೂ ನಿರ್ಬಂಧ ಹೇರಿಲ್ಲ. ಕೆಲವು ವರ್ಷಗಳಿಂದ ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶಿಸುವಂತಿಲ್ಲ. ಹೊರಗಿನಿಂದ ಸ್ವಾಮಿಯ ದರ್ಶನ ಮಾಡುತ್ತಾರೆ ಅಷ್ಟೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!