AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Lakshmi Hegde
|

Updated on: May 16, 2021 | 6:59 PM

Share

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ