AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Lakshmi Hegde
|

Updated on: May 16, 2021 | 6:59 PM

Share

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?