AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Lakshmi Hegde
|

Updated on: May 16, 2021 | 6:59 PM

Share

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ