AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Lakshmi Hegde
|

Updated on: May 16, 2021 | 6:59 PM

Share

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್