AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ 196 ಶಿಶುಗಳಿಗೆ ಜನ್ಮ ನೀಡಿದ ಮಹಿಳಾ ಕೈದಿಗಳು, ಸುಪ್ರೀಂಗೆ ಅಮಿಕಸ್ ಕ್ಯೂರಿ ಸಲ್ಲಿಸಿರುವ ವರದಿಯಲ್ಲೇನಿದೆ?

ಪಶ್ಚಿಮ ಬಂಗಾಳದ ವಿವಿಧ ಜೈಲುಗಳಲ್ಲಿ ಮಹಿಳಾ ಕೈದಿಗಳು ಶಿಶುಗಳಿಗೆ ಜನ್ಮ ನೀಡಿರುವ ವಿಚಾರ ಕುರಿತಂತೆ ಅಮಿಕ್ ಕ್ಯೂರಿ ಸುಪ್ರೀಂಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಬಹುತೇಕ ಮಹಿಳಾ ಕೈದಿಗಳು ಜೈಲಿಗೆ ಬರುವ ಮುನ್ನವೇ ಗರ್ಭಿಣಿಯರಾಗಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಮಹಿಳಾ ಕೈದಿಗಳು ಪೆರೋಲ್‌ನಲ್ಲಿ ಹೊರಗೆ ಹೋಗಿದ್ದಾರೆ ಮತ್ತು ನಿರೀಕ್ಷಿಸಿ ಹಿಂತಿರುಗಿದ್ದಾರೆ ಆಗಲೂ ಗರ್ಭಧರಿಸಿರುವ ಸಾಧ್ಯತೆ ಇದೆ ಎಂದು ಅಗರ್ವಾಲ್ ಉಲ್ಲೇಖಿಸಿದ್ದಾರೆ.

ಜೈಲಿನಲ್ಲಿ 196 ಶಿಶುಗಳಿಗೆ ಜನ್ಮ ನೀಡಿದ ಮಹಿಳಾ ಕೈದಿಗಳು, ಸುಪ್ರೀಂಗೆ ಅಮಿಕಸ್ ಕ್ಯೂರಿ ಸಲ್ಲಿಸಿರುವ ವರದಿಯಲ್ಲೇನಿದೆ?
ಮಹಿಳಾ ಕೈದಿಗಳುImage Credit source: India Today
ನಯನಾ ರಾಜೀವ್
|

Updated on:Feb 15, 2024 | 2:12 PM

Share

ಪಶ್ಚಿಮ ಬಂಗಾಳದ ವಿವಿಧ ಜೈಲುಗಳಲ್ಲಿ ಮಹಿಳಾ ಕೈದಿ(Women Prisoners)ಗಳು ಇತ್ತೀಚೆಗೆ 196 ಶಿಶುಗಳಿಗೆ ಜನ್ಮ ನೀಡಿರುವ ವಿಚಾರ ಹೆಚ್ಚು ಸದ್ದು ಮಾಡಿತ್ತು. ಹಾಗಾದರೆ ಜೈಲಿನಲ್ಲಿ ಭದ್ರತೆ ಇಲ್ಲವೇ, ಅದು ಹೇಗೆ ಮಹಿಳಾ ಕೈದಿಗಳು ಪುರುಷ ಕೈದಿಗಳ ಜತೆಗೆ ಸೇರಿತ್ತಾರೆ ಎಂದು ಸುಪ್ರೀಂಕೋರ್ಟ್​ ಕಳವಳ ವ್ಯಕ್ತಪಡಿಸಿ ಬಳಿಕ ವಕೀಲ ಗೌರವ್ ಅಗರ್ವಾಲ್ ಎಂಬುವವರನ್ನು ಅಮಿಕ್ಲ ಕ್ಯೂರಿಯಾಗಿ ನೇಮಿಸಿ ಶೀಘ್ರ ವರದಿ ಸಲ್ಲಿಸುವಂತೆ ಕೇಳಿತ್ತು.

ಇದೀಗ ಅಗರ್ವಾಲ್ ನೀಡಿರುವ ವರದಿಯಿಂದ ಸ್ವಲ್ಪ ನಿರಾಳವಾದಂತಾಗಿದೆ, ಅದರಲ್ಲಿ ಬಹುತೇಕ ಮಹಿಳಾ ಕೈದಿಗಳು ಜೈಲಿಗೆ ಬರುವ ಮುನ್ನವೇ ಗರ್ಭಿಣಿಯರಾಗಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಮಹಿಳಾ ಕೈದಿಗಳು ಪೆರೋಲ್‌ನಲ್ಲಿ ಹೊರಗೆ ಹೋಗಿದ್ದಾರೆ ಮತ್ತು ನಿರೀಕ್ಷಿಸಿ ಹಿಂತಿರುಗಿದ್ದಾರೆ ಆಗಲೂ ಗರ್ಭಧರಿಸಿರುವ ಸಾಧ್ಯತೆ ಇದೆ ಎಂದು ಅಗರ್ವಾಲ್ ಉಲ್ಲೇಖಿಸಿದ್ದಾರೆ.

ಮಹಿಳಾ ಕೈದಿಗಳ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಸಾಕಷ್ಟು ಮಹಿಳಾ ಸಿಬ್ಬಂದಿ ಲಭ್ಯತೆ ಮತ್ತು ದಾಖಲಾತಿ ಸಮಯದಲ್ಲಿ ಹಾಗೂ ನಂತರ ನಿಯಮಿತ ಆರೋಗ್ಯ ತಪಾಸಣೆ ಮಾಡಬೇಕು ಎಂದು ಕೋರ್ಟ್​ ಹೇಳಿದೆ. ಮಹಿಳಾ ಜೈಲುಗಳಲ್ಲಿ ಮಹಿಳಾ ಅಧಿಕಾರಿಗಳು ಮಾತ್ರ ಇದ್ದಾರೆ ಮತ್ತು ಪರಿಧಿಯಲ್ಲಿ ಮತ್ತು ಗೇಟ್‌ಗಳಲ್ಲಿ ಮಾತ್ರ ಕೆಲವು ಪುರುಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳ: ಜೈಲಿನಲ್ಲಿ ಗರ್ಭಿಣಿಯರಾಗುತ್ತಿರುವ ಮಹಿಳಾ ಕೈದಿಗಳು, 196 ಶಿಶುಗಳ ಜನನ

ಆದಾಗ್ಯೂ, ಯಾವುದೇ ಪುರುಷರಿಗೆ ಈ ಮಹಿಳಾ ಜೈಲುಗಳ ಒಳಗೆ ಹೋಗಲು ಅನುಮತಿಯಿಲ್ಲ, ಉದಾಹರಣೆಗೆ ಪುರುಷ ವೈದ್ಯರು ಅಥವಾ ಪುರುಷ ಅಧಿಕಾರಿಗಳು ಮಹಿಳಾ ಸಿಬ್ಬಂದಿಯೊಂದಿಗೆ ಭೇಟಿ ನೀಡಬಹುದಾಗಿದೆ ಎಂದು ಹೇಳಲಾಗಿದೆ.

ಮಕ್ಕಳಿರುವ ಜೈಲುಗಳಲ್ಲಿ, ಜೈಲಿನಲ್ಲಿರುವ ತಮ್ಮ ತಾಯಂದಿರ ಬಳಿ ಇರುವ ಮಕ್ಕಳಿಗೆ ಶಿಶುವಿಹಾರಗಳು, ಶಾಲಾ ಶಿಕ್ಷಣ ಮತ್ತು ಇತರ ಸೌಲಭ್ಯಗಳ ಲಭ್ಯತೆಯನ್ನು ಪರಿಶೀಲಿಸಲು ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಮಹಿಳಾ ಸದಸ್ಯೆ ಇರುವುದು ಉತ್ತಮ. ಫೆಬ್ರವರಿ 16 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ವಿಚಾರಣೆಗಾಗಿ ಕೈಗೆತ್ತಿಕೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Thu, 15 February 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ