AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ

Viral Video: ಈ ವೈರಲ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ತಮ್ಮ ಅಭಿಪ್ರಾಯವನ್ನು ಕಾಮೆಂಟ್ ರೂಪದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಆಡುತ್ತಾ ಹಾಡುತ್ತಾ ದುಡಿದರೆ ಸುಸ್ತು ನಿವಾರಣೆಯಾಗುತ್ತದೆ ಎಂದು ಕೆಲವರು ತಮಾಷೆಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಉಚಿತ ಬಸ್ಸಿನಲ್ಲಿ ಸುತ್ತುತ್ತಾ ಬೀಡಿ ಸುತ್ತಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಸಾಧು ಶ್ರೀನಾಥ್​
|

Updated on:Jan 23, 2024 | 2:04 PM

Share

ಹೈದರಾಬಾದ್, ಜನವರಿ 23: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಆದರೆ ಮಹಿಳೆಯರು ಈ ಸೌಲಭ್ಯವನ್ನು ಅತಿಯಾಗಿ ಬಳಸಿಕೊಂಡು ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಉಚಿತ ಪ್ರಯಾಣದ ವೇಳೆ ಹಲವು ಬಾರಿ ಬಸ್ಸುಗಳಲ್ಲಿ ಪರಸ್ಪರ ಥಳಿಸಿಕೊಂಡಿರುವ ನಿದರ್ಶನಗಳೂ ಇವೆ. ಹೀಗೆ ಸುದ್ದಿಯಾಗಿದ್ದ TSRTC ಉಚಿತ ಬಸ್ ಪ್ರಯಾಣ ಇದೀಗ ಮಹಿಳೆಯರಿಬ್ಬರು ಮಾಡಿರುವ ಕೆಲಸದಿಂದ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸುಮ್ಮನೆ ಕುಳಿತುಕೊಳ್ಳುವುದು ಏಕೆಂದು ತಮ್ಮ ಕೈಲಾದ ಕೆಲಸವನ್ನು ಸಾಂಗೋಪಾಂಗವಾಗಿ ಮಾಡಿದ್ದಾರೆ. ಘಟನೆಯ ವಿಡಿಯೋ ತೆಗೆದ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. ಘಟನೆ ಯಾವ ಡಿಪೋದಲ್ಲಿ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಈ ವೀಡಿಯೊವನ್ನು ಪೋಸ್ಟ್ ಮಾಡುವ ಮೊದಲು ‘ಹೇ ರೇವಂತ್ ರೆಡ್ಡಿ, ಹೇ ಉತ್ತಮ್ ಕುಮಾರ್ ರೆಡ್ಡಿ, ಯೇ ಕ್ಯಾ ಹುವಾ! ಮನೆಯಲ್ಲಿ ಕುಳಿತು ಒಬ್ಬರೇ ಬೀಡಿ ಕಟ್ಟಿದರೆ ಬೇಜಾರಾಗುತ್ತದೆ ಎಂದು ಬಸ್ ಗಳಲ್ಲೂ ಹೀಗೆ ಕಾಯಕದಲ್ಲಿ ನಿರತರಾಗಿದ್ದಾರೆ ನೋಡಿ ಆನಂದಿಸಿ ಎಂದಿದ್ದಾರೆ.

ಈ ವಿಡಿಯೋ ಹಾಕಿದವರ ವಿರುದ್ಧ ಕೆಲವರು ಟೀಕೆಯನ್ನೂ ಮಾಡಿದ್ದಾರೆ. ಹಾಯ್ ಬಿಚ್ಚಗಾಡು! ಅವರಿಗೆ ಸೀಟು ಸಿಕ್ಕರೆ ಉಚಿತ ಬಸ್ ಯೋಜನೆ ಯಶಸ್ವಿಯಾಗಿದೆ ಎಂದರ್ಥ. ಅವರು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ಅವರು ಏನನ್ನಾದರೂ ಮಾಡಿಕೊಳ್ಳಲಿ, ನಿನಗೇನು?ಇಷ್ಟು ಚೀಪಾಗಿ ಅವರ ಅನುಮತಿಯಿಲ್ಲದೆ ಆ ಮಹಿಳೆಯರ ವೀಡಿಯೊಗಳನ್ನು ತೆಗೆಯುವುದು ಅಪರಾಧವಲ್ಲವೆ ಎಂದೂ ಪ್ರಶ್ನಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಸದ್ಯಕ್ಕೆ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಉಚಿತ ಬಸ್‌ಗಳಲ್ಲಿ ಸಾಕಷ್ಟು ಅಹಿತಕರ ಘಟನೆಗಳು ಮತ್ತು ಆಘಾತಕಾರಿ ಘಟನೆಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಬೆಳವಣಿಗೆಗಳು ಸೃಷ್ಟಿಯಾಗುತ್ತವೋ ಎಂದು ಜನ ಮಾತನಾಡುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Tue, 23 January 24

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ