AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ

Viral Video: ಈ ವೈರಲ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ತಮ್ಮ ಅಭಿಪ್ರಾಯವನ್ನು ಕಾಮೆಂಟ್ ರೂಪದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಆಡುತ್ತಾ ಹಾಡುತ್ತಾ ದುಡಿದರೆ ಸುಸ್ತು ನಿವಾರಣೆಯಾಗುತ್ತದೆ ಎಂದು ಕೆಲವರು ತಮಾಷೆಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಉಚಿತ ಬಸ್ಸಿನಲ್ಲಿ ಸುತ್ತುತ್ತಾ ಬೀಡಿ ಸುತ್ತಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಸಾಧು ಶ್ರೀನಾಥ್​
|

Updated on:Jan 23, 2024 | 2:04 PM

Share

ಹೈದರಾಬಾದ್, ಜನವರಿ 23: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಆದರೆ ಮಹಿಳೆಯರು ಈ ಸೌಲಭ್ಯವನ್ನು ಅತಿಯಾಗಿ ಬಳಸಿಕೊಂಡು ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಉಚಿತ ಪ್ರಯಾಣದ ವೇಳೆ ಹಲವು ಬಾರಿ ಬಸ್ಸುಗಳಲ್ಲಿ ಪರಸ್ಪರ ಥಳಿಸಿಕೊಂಡಿರುವ ನಿದರ್ಶನಗಳೂ ಇವೆ. ಹೀಗೆ ಸುದ್ದಿಯಾಗಿದ್ದ TSRTC ಉಚಿತ ಬಸ್ ಪ್ರಯಾಣ ಇದೀಗ ಮಹಿಳೆಯರಿಬ್ಬರು ಮಾಡಿರುವ ಕೆಲಸದಿಂದ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸುಮ್ಮನೆ ಕುಳಿತುಕೊಳ್ಳುವುದು ಏಕೆಂದು ತಮ್ಮ ಕೈಲಾದ ಕೆಲಸವನ್ನು ಸಾಂಗೋಪಾಂಗವಾಗಿ ಮಾಡಿದ್ದಾರೆ. ಘಟನೆಯ ವಿಡಿಯೋ ತೆಗೆದ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. ಘಟನೆ ಯಾವ ಡಿಪೋದಲ್ಲಿ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಈ ವೀಡಿಯೊವನ್ನು ಪೋಸ್ಟ್ ಮಾಡುವ ಮೊದಲು ‘ಹೇ ರೇವಂತ್ ರೆಡ್ಡಿ, ಹೇ ಉತ್ತಮ್ ಕುಮಾರ್ ರೆಡ್ಡಿ, ಯೇ ಕ್ಯಾ ಹುವಾ! ಮನೆಯಲ್ಲಿ ಕುಳಿತು ಒಬ್ಬರೇ ಬೀಡಿ ಕಟ್ಟಿದರೆ ಬೇಜಾರಾಗುತ್ತದೆ ಎಂದು ಬಸ್ ಗಳಲ್ಲೂ ಹೀಗೆ ಕಾಯಕದಲ್ಲಿ ನಿರತರಾಗಿದ್ದಾರೆ ನೋಡಿ ಆನಂದಿಸಿ ಎಂದಿದ್ದಾರೆ.

ಈ ವಿಡಿಯೋ ಹಾಕಿದವರ ವಿರುದ್ಧ ಕೆಲವರು ಟೀಕೆಯನ್ನೂ ಮಾಡಿದ್ದಾರೆ. ಹಾಯ್ ಬಿಚ್ಚಗಾಡು! ಅವರಿಗೆ ಸೀಟು ಸಿಕ್ಕರೆ ಉಚಿತ ಬಸ್ ಯೋಜನೆ ಯಶಸ್ವಿಯಾಗಿದೆ ಎಂದರ್ಥ. ಅವರು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ಅವರು ಏನನ್ನಾದರೂ ಮಾಡಿಕೊಳ್ಳಲಿ, ನಿನಗೇನು?ಇಷ್ಟು ಚೀಪಾಗಿ ಅವರ ಅನುಮತಿಯಿಲ್ಲದೆ ಆ ಮಹಿಳೆಯರ ವೀಡಿಯೊಗಳನ್ನು ತೆಗೆಯುವುದು ಅಪರಾಧವಲ್ಲವೆ ಎಂದೂ ಪ್ರಶ್ನಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಸದ್ಯಕ್ಕೆ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಉಚಿತ ಬಸ್‌ಗಳಲ್ಲಿ ಸಾಕಷ್ಟು ಅಹಿತಕರ ಘಟನೆಗಳು ಮತ್ತು ಆಘಾತಕಾರಿ ಘಟನೆಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಬೆಳವಣಿಗೆಗಳು ಸೃಷ್ಟಿಯಾಗುತ್ತವೋ ಎಂದು ಜನ ಮಾತನಾಡುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Tue, 23 January 24

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?