AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ

Viral Video: ಈ ವೈರಲ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ತಮ್ಮ ಅಭಿಪ್ರಾಯವನ್ನು ಕಾಮೆಂಟ್ ರೂಪದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಆಡುತ್ತಾ ಹಾಡುತ್ತಾ ದುಡಿದರೆ ಸುಸ್ತು ನಿವಾರಣೆಯಾಗುತ್ತದೆ ಎಂದು ಕೆಲವರು ತಮಾಷೆಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಉಚಿತ ಬಸ್ಸಿನಲ್ಲಿ ಸುತ್ತುತ್ತಾ ಬೀಡಿ ಸುತ್ತಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 23, 2024 | 2:04 PM

Share

ಹೈದರಾಬಾದ್, ಜನವರಿ 23: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಆದರೆ ಮಹಿಳೆಯರು ಈ ಸೌಲಭ್ಯವನ್ನು ಅತಿಯಾಗಿ ಬಳಸಿಕೊಂಡು ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಉಚಿತ ಪ್ರಯಾಣದ ವೇಳೆ ಹಲವು ಬಾರಿ ಬಸ್ಸುಗಳಲ್ಲಿ ಪರಸ್ಪರ ಥಳಿಸಿಕೊಂಡಿರುವ ನಿದರ್ಶನಗಳೂ ಇವೆ. ಹೀಗೆ ಸುದ್ದಿಯಾಗಿದ್ದ TSRTC ಉಚಿತ ಬಸ್ ಪ್ರಯಾಣ ಇದೀಗ ಮಹಿಳೆಯರಿಬ್ಬರು ಮಾಡಿರುವ ಕೆಲಸದಿಂದ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸುಮ್ಮನೆ ಕುಳಿತುಕೊಳ್ಳುವುದು ಏಕೆಂದು ತಮ್ಮ ಕೈಲಾದ ಕೆಲಸವನ್ನು ಸಾಂಗೋಪಾಂಗವಾಗಿ ಮಾಡಿದ್ದಾರೆ. ಘಟನೆಯ ವಿಡಿಯೋ ತೆಗೆದ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. ಘಟನೆ ಯಾವ ಡಿಪೋದಲ್ಲಿ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಈ ವೀಡಿಯೊವನ್ನು ಪೋಸ್ಟ್ ಮಾಡುವ ಮೊದಲು ‘ಹೇ ರೇವಂತ್ ರೆಡ್ಡಿ, ಹೇ ಉತ್ತಮ್ ಕುಮಾರ್ ರೆಡ್ಡಿ, ಯೇ ಕ್ಯಾ ಹುವಾ! ಮನೆಯಲ್ಲಿ ಕುಳಿತು ಒಬ್ಬರೇ ಬೀಡಿ ಕಟ್ಟಿದರೆ ಬೇಜಾರಾಗುತ್ತದೆ ಎಂದು ಬಸ್ ಗಳಲ್ಲೂ ಹೀಗೆ ಕಾಯಕದಲ್ಲಿ ನಿರತರಾಗಿದ್ದಾರೆ ನೋಡಿ ಆನಂದಿಸಿ ಎಂದಿದ್ದಾರೆ.

ಈ ವಿಡಿಯೋ ಹಾಕಿದವರ ವಿರುದ್ಧ ಕೆಲವರು ಟೀಕೆಯನ್ನೂ ಮಾಡಿದ್ದಾರೆ. ಹಾಯ್ ಬಿಚ್ಚಗಾಡು! ಅವರಿಗೆ ಸೀಟು ಸಿಕ್ಕರೆ ಉಚಿತ ಬಸ್ ಯೋಜನೆ ಯಶಸ್ವಿಯಾಗಿದೆ ಎಂದರ್ಥ. ಅವರು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ಅವರು ಏನನ್ನಾದರೂ ಮಾಡಿಕೊಳ್ಳಲಿ, ನಿನಗೇನು?ಇಷ್ಟು ಚೀಪಾಗಿ ಅವರ ಅನುಮತಿಯಿಲ್ಲದೆ ಆ ಮಹಿಳೆಯರ ವೀಡಿಯೊಗಳನ್ನು ತೆಗೆಯುವುದು ಅಪರಾಧವಲ್ಲವೆ ಎಂದೂ ಪ್ರಶ್ನಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಸದ್ಯಕ್ಕೆ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಉಚಿತ ಬಸ್‌ಗಳಲ್ಲಿ ಸಾಕಷ್ಟು ಅಹಿತಕರ ಘಟನೆಗಳು ಮತ್ತು ಆಘಾತಕಾರಿ ಘಟನೆಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಬೆಳವಣಿಗೆಗಳು ಸೃಷ್ಟಿಯಾಗುತ್ತವೋ ಎಂದು ಜನ ಮಾತನಾಡುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Tue, 23 January 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ