AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮಹಿಳೆಯರು ಬ್ಯಾಗ್​ನಲ್ಲಿ ಲಿಪ್​ಸ್ಟಿಕ್​ ಜತೆಗೆ ಚಾಕು, ಮೆಣಸಿನ ಪುಡಿ ಇಟ್ಟುಕೊಂಡಿರಬೇಕು

ಮಹಿಳೆಯರು ತಮ್ಮ ಬ್ಯಾಗ್​ನಲ್ಲಿ ಲಿಪ್​ಸ್ಟಿಕ್​ ಜತೆಗೆ ಆತ್ಮರಕ್ಷಣೆಗೆಂದು ಚಾಕು ಹಾಗೂ ಮೆನಿಸಿನ ಪುಡಿ ಇಟ್ಟುಕೊಂಡಿರಬೇಕು ಎಂದು ಮಹಾರಾಷ್ಟ್ರ ಸಚಿವ ಗುಲಾಬ್​ರಾವ್ ಪಾಟೀಲ್​ ಹೇಳಿದ್ದಾರೆ. ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸಲಹೆ ನೀಡಿದರು. ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳಾದ ಎಂಎಸ್‌ಆರ್‌ಟಿಸಿ ಬಸ್ ದರವನ್ನು ಅರ್ಧದಷ್ಟು ಕಡಿತಗೊಳಿಸುವುದು, ಲಡ್ಕಿ ಬಹಿನ್ ಯೋಜನೆ ಮತ್ತು ಬಾಲಕಿಯರಿಗೆ ಉಚಿತ ಶಿಕ್ಷಣವನ್ನು ಬಗ್ಗೆ ಮಾತನಾಡಿದರು.

ಮಹಾರಾಷ್ಟ್ರ: ಮಹಿಳೆಯರು ಬ್ಯಾಗ್​ನಲ್ಲಿ ಲಿಪ್​ಸ್ಟಿಕ್​ ಜತೆಗೆ ಚಾಕು, ಮೆಣಸಿನ ಪುಡಿ ಇಟ್ಟುಕೊಂಡಿರಬೇಕು
ಗುಲಾಬ್​ರಾವ್ Image Credit source: India Today
ನಯನಾ ರಾಜೀವ್
|

Updated on: Mar 09, 2025 | 11:42 AM

Share

ಮಹಾರಾಷ್ಟ್ರ, ಮಾರ್ಚ್​ 09: ಮಹಿಳೆಯರು ತಮ್ಮ ಬ್ಯಾಗ್​ನಲ್ಲಿ ಲಿಪ್​ಸ್ಟಿಕ್​ ಜತೆಗೆ ಆತ್ಮರಕ್ಷಣೆಗೆಂದು ಚಾಕು ಹಾಗೂ ಮೆನಿಸಿನ ಪುಡಿ ಇಟ್ಟುಕೊಂಡಿರಬೇಕು ಎಂದು ಮಹಾರಾಷ್ಟ್ರ ಸಚಿವ ಗುಲಾಬ್​ರಾವ್ ಪಾಟೀಲ್​ ಹೇಳಿದ್ದಾರೆ. ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸಲಹೆ ನೀಡಿದರು.

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳಾದ ಎಂಎಸ್‌ಆರ್‌ಟಿಸಿ ಬಸ್ ದರವನ್ನು ಅರ್ಧದಷ್ಟು ಕಡಿತಗೊಳಿಸುವುದು, ಲಡ್ಕಿ ಬಹಿನ್ ಯೋಜನೆ ಮತ್ತು ಬಾಲಕಿಯರಿಗೆ ಉಚಿತ ಶಿಕ್ಷಣವನ್ನು ಬಗ್ಗೆ ಮಾತನಾಡಿದರು. ನಾವು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದರೂ ಸಹ, ಇಂದು ಕೆಟ್ಟ ಘಟನೆಗಳು ನಡೆಯುತ್ತಿವೆ ಎಂದರು.

ಬಾಳಾಠಾಕ್ರೆ ಅಂದು ಮಹಿಳೆಯರು ಲಿಪ್ಸ್ಟಿಕ್ ಜೊತೆಗೆ ಮೆಣಸಿನ ಪುಡಿ ಮತ್ತು ರಾಮಪುರಿ ಚಾಕುವನ್ನು ಒಯ್ಯಬೇಕು ಎಂದು ಹೇಳಿದ್ದಕ್ಕಾಗಿ ಪತ್ರಕರ್ತರು ಅವರನ್ನು ತೀವ್ರವಾಗಿ ಟೀಕಿಸಿದ್ದರು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಯುವತಿ ಜತೆಗಿದ್ದ ಸ್ನೇಹಿತನಿಂದಲೇ ಅತ್ಯಾಚಾರ ಮಾಡಿಸಿ, ವಿಡಿಯೋ ಮಾಡಿ ಇಬ್ಬರು ಪರಾರಿ

ಆದರೆ ಇಂದಿನ ಪರಿಸ್ಥಿತಿಯೂ ಹಾಗೆಯೇ ಇದೆ. ಇಂದಿನ ಯುವತಿಯರು ತಮ್ಮ ಆತ್ಮರಕ್ಷಣೆಗಾಗಿ ಇದನ್ನು ಮಾಡಲೇ ಬೇಕಿದೆ ಎಂದು ಪಾಟೀಲ್ ಹೇಳಿದರು.

ಫೆಬ್ರವರಿ 25 ರಂದು ಪುಣೆಯ ಎಂಎಸ್‌ಆರ್‌ಟಿಸಿ ಡಿಪೋದಲ್ಲಿ 26 ವರ್ಷದ ಯುವತಿ ಮೇಲಿನ ಅತ್ಯಾಚಾರ ಸೇರಿದಂತೆ ಮಹಿಳೆಯರ ವಿರುದ್ಧದ ಇತ್ತೀಚಿನ ಅಪರಾಧ ಪ್ರಕರಣಗಳನ್ನು ಅವರು ಉಲ್ಲೇಖಿಸಿದರು. ಸ್ವರ್ಗೇಟ್​ ಬಳಿ ಬಸ್​ಗಾಗಿ ಕಾಯುತ್ತಿದ್ದ ಯುವತಿಗೆ ಬಸ್ ಬೇರೆಡೆ ಬರುತ್ತದೆ ಎಂದು ಹೇಳಿ ಕರೆದೊಯ್ದು ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?