
ಕೋಲ್ಕತ್ತಾ, ಅಕ್ಟೋಬರ್ 13: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ (Durgapur) ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂವೇದನಾರಹಿತ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಇಂದು ಟಿಎಂಸಿ ಸಂಸದ ಸೌಗತ್ ರಾಯ್ ಮಹಿಳೆಯರು ಎಚ್ಚರಿಕೆಯಿಂದಿರಬೇಕು, ರಾತ್ರಿ ವೇಳೆ ಹೊರಗೆ ಓಡಾಡಬಾರದು ಎಂದು ಸೂಚಿಸುವ ಮೂಲಕ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ನಿವಾಸಿ 23 ವರ್ಷದ ಸಂತ್ರಸ್ತೆ ತನ್ನ ಖಾಸಗಿ ವೈದ್ಯಕೀಯ ಕಾಲೇಜು ಬಳಿ ಸ್ನೇಹಿತನೊಂದಿಗೆ ಊಟಕ್ಕೆ ಹೋದ ನಂತರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಳು. ಅಕ್ಟೋಬರ್ 10ರ ರಾತ್ರಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿ ದುರ್ಗಾಪುರದ ಮಹಿಳೆಯ ಮೇಲೆ ಕೈಗಾರಿಕಾ ಪಟ್ಟಣದ ಕಾಲೇಜು ಕ್ಯಾಂಪಸ್ ಬಳಿ ಸಾಮೂಹಿಕ ಅತ್ಯಾಚಾರ ನಡೆದಿತ್ತು.
#WATCH | Kolkata, West Bengal: On the Durgapur alleged gang rape case, TMC MP Saugata Roy says, “Such cases are rare in Bengal. Women’s safety in Bengal is better than in any other place… But women shouldn’t leave their colleges so late at night, as the police can’t patrol… pic.twitter.com/PVFeTBYC5p
— ANI (@ANI) October 13, 2025
ಇದನ್ನೂ ಓದಿ: ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಟಿಎಂಸಿ ನಾಯಕಿ ಸೌಗತ್ ರಾಯ್, “ಇಂತಹ ಪ್ರಕರಣಗಳು ಬಂಗಾಳದಲ್ಲಿ ಅಪರೂಪ. ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಬೇರೆ ಯಾವುದೇ ಸ್ಥಳಕ್ಕಿಂತ ಉತ್ತಮವಾಗಿದೆ. ಆದರೆ ಮಹಿಳೆಯರು ತಮ್ಮ ಕಾಲೇಜುಗಳಿಂದ ತಡರಾತ್ರಿಯಲ್ಲಿ ಹೊರಗೆ ಹೋಗಬಾರದು. ಏಕೆಂದರೆ ಪೊಲೀಸರು ಎಲ್ಲೆಡೆ ಗಸ್ತು ತಿರುಗಲು ಸಾಧ್ಯವಿಲ್ಲ. ಪ್ರತಿಯೊಂದು ರಸ್ತೆಯಲ್ಲೂ ಪೊಲೀಸರು ಇರಲು ಸಾಧ್ಯವಿಲ್ಲ. ಘಟನೆ ನಡೆದ ನಂತರ ಪೊಲೀಸರು ಕ್ರಮ ಕೈಗೊಳ್ಳಬಹುದು. ಆದ್ದರಿಂದ, ಮಹಿಳೆಯರು ಸಹ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ