AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ಇದ್ದರೆ ಜಗಳ ಜಾಸ್ತಿ, ಪ್ರಾಂಶುಪಾಲರಿಗೆ ತಲೆನೋವು: ರಾಜಸ್ಥಾನದ ಶಿಕ್ಷಣ ಸಚಿವ

Govind Singh Dotasra ಜೈಪುರದಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಜಗಳಗಳು ಹೆಚ್ಚು. ಈ ತಲೆನೋವಿಗೆ ಪ್ರಾಂಶುಪಾಲರು ಅಥವಾ ಶಿಕ್ಷಕರು ಸಾರಿಡಾನ್ (ತಲೆನೋವು ನಿವಾರಕ ಔಷಧಿ) ತಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ಇದ್ದರೆ ಜಗಳ ಜಾಸ್ತಿ, ಪ್ರಾಂಶುಪಾಲರಿಗೆ ತಲೆನೋವು: ರಾಜಸ್ಥಾನದ ಶಿಕ್ಷಣ ಸಚಿವ
ಗೋವಿಂದ್ ಸಿಂಗ್ ಡೋಟಾಸರಾ
TV9 Web
| Edited By: |

Updated on: Oct 13, 2021 | 1:49 PM

Share

ಜೈಪುರ: ಮಹಿಳೆಯರು ಹೆಚ್ಚು ಜಗಳ ಮಾಡುತ್ತಾರೆ. ಮಹಿಳಾ ಸಿಬ್ಬಂದಿ ತಮ್ಮೊಳಗೆ ಇದಕ್ಕೆ ಪರಿಹಾರ ಕಂಡುಕೊಂಡರೆ “ಅವರು ಯಾವಾಗಲೂ ಪುರುಷರಿಗಿಂತ ಮುಂದಿರುತ್ತಾರೆ” ಎಂದು ರಾಜಸ್ಥಾನ (Rajasthan) ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಡೋಟಾಸರಾ (Govind Singh Dotasra) ಹೇಳಿದ್ದಾರೆ. ಜೈಪುರದಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಜಗಳಗಳು ಹೆಚ್ಚು. ಈ ತಲೆನೋವಿಗೆ ಪ್ರಾಂಶುಪಾಲರು ಅಥವಾ ಶಿಕ್ಷಕರು ಸಾರಿಡಾನ್ (ತಲೆನೋವು ನಿವಾರಕ ಔಷಧಿ) ತಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. “ನನ್ನ ವಿಭಾಗದ ಮುಖ್ಯಸ್ಥನಾಗಿ ಹೇಳುತ್ತಿದ್ದೇನೆ.  ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ವಾರೇ ನ್ಯಾರೇ ಎಂದು ಜಗಳಗಳಾಗುತ್ತವೆ . ಕೆಲವೊಮ್ಮೆ ರಜೆಗಾಗಿ ಜಗಳಗಳು ನಡೆಯುತ್ತವೆ, ಇತರ ದಿನಗಳಲ್ಲಿ ಬೇರೆ ವಿಷಯಗಳಿಗೆ ಜಗಳವಾಗುತ್ತದೆ. ಪ್ರಾಂಶುಪಾಲರು ಅಥವಾ ಇತರ ಶಿಕ್ಷಕರು ಸಾರಿಡಾನ್ ಅನ್ನು ಆಶ್ರಯಿಸಬೇಕಾಗುತ್ತದೆ “ಎಂದು ಸಚಿವರು ಹೇಳಿದ್ದಾರೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಡೋಟಾಸರಾ, ರಾಜಸ್ಥಾನ ಸರ್ಕಾರವು ಯಾವಾಗಲೂ ಮಹಿಳೆಯರ ಸುರಕ್ಷತೆ ಮತ್ತು ಸೌಕರ್ಯವನ್ನು ಖಾತ್ರಿಪಡಿಸುತ್ತದೆ ಮತ್ತು ಉದ್ಯೋಗಗಳಲ್ಲಿ ಆದ್ಯತೆಯ ಹುದ್ದೆಗಳನ್ನು ನೀಡುತ್ತದೆ ಎಂದು ಹೇಳಿದರು.

ಆದಾಗ್ಯೂ , ಮಹಿಳಾ ಸಿಬ್ಬಂದಿ ಯಾವಾಗಲೂ ತಮ್ಮಲ್ಲಿ ಸಮಸ್ಯೆಗಳನ್ನು ಹೊಂದಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ .”ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿದರೆ, ನೀವು ಯಾವಾಗಲೂ ಪುರುಷರಿಗಿಂತ ಮುಂದಿರುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಹಿಳೆಯರನ್ನುದ್ದೇಶಿಸಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: PM Gatishakti ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇದನ್ನೂ ಓದಿ: ಭಾರತದ ಆಧುನಿಕ ಮಹಿಳೆಯರಿಗೆ ಮದುವೆ, ಮಕ್ಕಳೇ ಬೇಡವಾಗಿದೆ; ಪಾಶ್ಚಿಮಾತ್ಯ ಸಂಸ್ಕೃತಿ ಬಗ್ಗೆ ಸಚಿವ ಸುಧಾಕರ್ ಬೇಸರ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ