AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮೀಸಲಾತಿ ಮಸೂದೆಯಿಂದಾಗಿ ಲಿಪ್​​ಸ್ಟಿಕ್ ಹಚ್ಚಿದ ಮಹಿಳೆಯರು ಮುಂದೆ ಬರುತ್ತಾರೆ: ಆರ್​​​ಜೆಡಿ ನಾಯಕ

ಈ ಹೇಳಿಕೆ ನೀಡಿದ ನಂತರ ಅವರ ತಮ್ಮ ಪಕ್ಷವು "ಮೊದಲಿನಿಂದಲೂ" ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ಅವರು ತಮ್ಮ ಪ್ರೇಕ್ಷಕರಿಗೆ ಅರ್ಥವಾಗುವಂತೆ 'ಗ್ರಾಮ್ಯ ಭಾಷೆಯಲ್ಲಿ' ಮಾತನಾಡುತ್ತಿದ್ದರು. ಆರ್​​ಜೆಡಿ ಪ್ರಸ್ತುತ ರೂಪದಲ್ಲಿ ಮಸೂದೆಯ ಪ್ರಬಲ ಟೀಕಾಕಾರರು ಆಗಿದ್ದು ಒಬಿಸಿ ಮಹಿಳೆಯರನ್ನು ಸೇರಿಸಲು ಕೋಟಾದೊಳಗೆ ಕೋಟಾವನ್ನು ಒತ್ತಾಯಿಸುತ್ತದೆ.

ಮಹಿಳಾ ಮೀಸಲಾತಿ ಮಸೂದೆಯಿಂದಾಗಿ ಲಿಪ್​​ಸ್ಟಿಕ್ ಹಚ್ಚಿದ ಮಹಿಳೆಯರು ಮುಂದೆ ಬರುತ್ತಾರೆ: ಆರ್​​​ಜೆಡಿ ನಾಯಕ
ಅಬ್ದುಲ್ ಬಾರಿ ಸಿದ್ದಿಕಿ
ರಶ್ಮಿ ಕಲ್ಲಕಟ್ಟ
|

Updated on: Sep 30, 2023 | 4:12 PM

Share

ದೆಹಲಿ ಸೆಪ್ಟೆಂಬರ್ 30: ಸಂಸತ್​​ನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯ (women’s reservation bill) ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ (Abdul Bari Siddiqui )ಹೇಳಿಕೆ ವಿವಾದವಾಗಿದೆ. ಈ ತಿಂಗಳ ಆರಂಭದಲ್ಲಿ ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ ಆ ರೀತಿ ಹೇಳಿದ್ದರು.

ಈ ಹೇಳಿಕೆ ನೀಡಿದ ನಂತರ ಅವರ ತಮ್ಮ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ಅವರು ತಮ್ಮ ಪ್ರೇಕ್ಷಕರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡುತ್ತಿದ್ದರು. ಆರ್​​ಜೆಡಿ ಪ್ರಸ್ತುತ ರೂಪದಲ್ಲಿ ಮಸೂದೆಯ ಪ್ರಬಲ ಟೀಕಾಕಾರರು ಆಗಿದ್ದು ಒಬಿಸಿ ಮಹಿಳೆಯರನ್ನು ಸೇರಿಸಲು ಕೋಟಾದೊಳಗೆ ಕೋಟಾವನ್ನು ಒತ್ತಾಯಿಸುತ್ತದೆ. ಆರ್‌ಜೆಡಿ ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು. ಹೊಸ ಕಾನೂನಿನ ಪ್ರಯೋಜನಗಳನ್ನು ತಮ್ಮ ಪ್ರೇಕ್ಷಕರಿಗೆ ಅರ್ಥಮಾಡಿಕೊಳ್ಳಲು ತಾನು “ವಿಶಿಷ್ಟ ಗ್ರಾಮ ಭಾಷೆಯನ್ನು” ಬಳಸಿರುವುದಾಗಿ ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ ಎಂದು ಹೇಳಿದ್ದಾರೆ.

ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು ಇಂಡಿಯಾ ಬ್ಲಾಕ್ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

“ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಮಸೂದೆಯ ಸಂದರ್ಭದಲ್ಲಿ ಇಂತಹ ಟೀಕೆಗಳು ಹೊಸದೇನಲ್ಲ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Womens Reservation Bill: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

2012 ರಲ್ಲಿ ಮೀಸಲಾತಿ ರ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ) ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್