AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಮಹಿಳಾ ಮೀಸಲಾತಿ ಮಸೂದೆಯನ್ನು ಕ್ರಾಂತಿಕಾರಿ ಮಸೂದೆ ಎಂದು ಬಣ್ಣಿಸಿದ ಸಚಿವ ಕಿಶನ್ ರೆಡ್ಡಿ

Women's Reservation Bill: ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ಕೇಂದ್ರ ಸಚಿವ ಜಿ ಕಿಶನ್​ ರೆಡ್ಡಿ(G Kishan Reddy) ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಐತಿಹಾಸಿಕ ಬೆಳವಣಿಗೆಯಾಗಿದ್ದು, ಇಂದು ಅಂಗೀಕಾರಗೊಂಡಿರುವ ಕ್ರಾಂತಿಕಾರಿ ಮಸೂದೆಯಾಗಿದೆ ಎಂದು ಸಚಿವ ಜಿ ಕಿಶನ್ ರೆಡ್ಡಿ ಬಣ್ಣಿಸಿದ್ದಾರೆ.

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಮಹಿಳಾ ಮೀಸಲಾತಿ ಮಸೂದೆಯನ್ನು ಕ್ರಾಂತಿಕಾರಿ ಮಸೂದೆ ಎಂದು ಬಣ್ಣಿಸಿದ ಸಚಿವ ಕಿಶನ್ ರೆಡ್ಡಿ
ಕಿಶನ್ ರೆಡ್ಡಿ
Follow us
ನಯನಾ ರಾಜೀವ್
|

Updated on: Sep 21, 2023 | 12:43 PM

ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ಕೇಂದ್ರ ಸಚಿವ ಜಿ ಕಿಶನ್​ ರೆಡ್ಡಿ(G Kishan Reddy) ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಐತಿಹಾಸಿಕ ಬೆಳವಣಿಗೆಯಾಗಿದ್ದು, ಇಂದು ಅಂಗೀಕಾರಗೊಂಡಿರುವ ಕ್ರಾಂತಿಕಾರಿ ಮಸೂದೆಯಾಗಿದೆ ಎಂದು ಸಚಿವ ಜಿ ಕಿಶನ್ ರೆಡ್ಡಿ ಬಣ್ಣಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ, ವಿವಿಧ ಸ್ಥಳಗಳಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ ಮತ್ತು ಸಂಸತ್ತಿನಲ್ಲಿ ಹಲವು ಬಾರಿ ಮಂಡಿಸಲಾಗಿದೆ. ರಾಜ್ಯಸಭೆಯೂ ಇದನ್ನು ಒಮ್ಮೆ ಅಂಗೀಕರಿಸಿತು, ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ರಾಜಕೀಯದ ಕಾರಣದಿಂದಾಗಿ ಮಸೂದೆಯನ್ನು ಅಂಗೀಕರಿಸಲಿಲ್ಲ ಎಂದರು. ಇಂದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳೆಯರಿಗೆ ಉಡುಗೊರೆ ನೀಡಲಾಗಿದೆ. ಅದಕ್ಕಾಗಿ ನಾನು ದೇಶದ ಮಹಿಳೆಯರಿಗೆ ಶುಭ ಹಾರೈಸುತ್ತೇನೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಎಲ್ಲವೂ ಸಾಧ್ಯ. ಇಂದು ರಾಜ್ಯಸಭೆಯಲ್ಲೂ ಈ ಮಸೂದೆ ಅಂಗೀಕಾರವಾಗಲಿದೆ, ನನಗೆ ಸಂಪೂರ್ಣ ಭರವಸೆ ಇದೆ ಎಂದು ಹೇಳಿದರು. 8 ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ, ಈ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ (ಸೆಪ್ಟೆಂಬರ್ 20) ಅಂಗೀಕರಿಸಲಾಯಿತು. ಈ ಮಸೂದೆಯು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸುತ್ತದೆ. ಬುಧವಾರ ಮಸೂದೆಯ ಪರವಾಗಿ 454 ಮತಗಳು ಮತ್ತು ವಿರುದ್ಧ 2 ಮತಗಳು ಚಲಾವಣೆಯಾದವು. ಎಐಎಂಐಎಂ ಸಂಸದರಾದ ಅಸಾದುದ್ದೀನ್ ಓವೈಸಿ-ಇಮ್ತಿಯಾಜ್ ಜಲೀಲ್ ಈ ಮಸೂದೆಯನ್ನು ವಿರೋಧಿಸಿದ್ದರು.

ಮತ್ತಷ್ಟು ಓದಿ: Women’s Reservation Bill: ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲದ ಅಗತ್ಯವಿತ್ತು. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಂಕ್ತಿವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದೆ. ಈ ಮಸೂದೆಯ ಮೂಲಕ ಸಂವಿಧಾನದ 330 ಹಾಗೂ 332ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದ್ದು, ಈ ಮೂಲಕ ಲೋಕಸಭೆಯ 543 ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನಸಭೆಗಳಲ್ಲಿ 4,109 ಸ್ಥಾನಗಳ ಪೈಕಿ 1370 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್