AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ

ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಬಣ್ಣಿಸಿದರು.

ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 22, 2023 | 12:21 PM

ನವದೆಹಲಿ ಸೆ.22: ನಾರಿ ಶಕ್ತಿ ವಂದನ್ (ಮಹಿಳಾ ಮೀಸಲಾತಿ) (Women’s Reservation Bill) ಮಸೂದೆ ಸಂಸತ್​ನಲ್ಲಿ ಅಂಗಿಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೂರದರ್ಶಿ ನಾಯಕತ್ವದಲ್ಲಿ, ಉದಾತ್ತ ಚಿಂತನೆಮಹಿಳಾ ಮೀಸಲಾತಿಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಶಾಸನಸಭೆಗಳಲ್ಲೇ ಮಹಿಳಾ ಮೀಸಲಾತಿ ‌ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ. ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು.

1980-90 ರ ದಶಕದಿಂದ ಮಹಿಳಾ ಮೀಸಲಾತಿ ಕೂಗಿತ್ತು. ಹಲವು ಸರ್ಕಾರಗಳು ಪ್ರಯತ್ನಪಟ್ಟವು ಆದರೆ ಸಾಧ್ಯವಾಗಲಿಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಹಳ ಪ್ರಯತ್ನ ಪಟ್ಟರು, ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನಕ್ಕೆ ಜಯ ಸಿಗಲಿಲ್ಲ. ಮುಂದೆ ಯುಪಿಎ ಸರ್ಕಾರ ಇದನ್ನು ವೋಟ್ ಬ್ಯಾಂಕ್ ರೀತಿ ನೋಡಿ, ಪ್ರಮಾಣಿಕ‌ ಪ್ರಯತ್ನ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದರು.

ಆದರೆ ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಮಹಿಳೆಯರ ಪರವಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ದೇಶ ಮಹಿಳೆಯರಿಗೆ ಅಭಿನಂದನೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಒಲ್ಲಿ ಕ್ಲಿಕ್​ ಮಾಡಿ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’