AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ

ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಬಣ್ಣಿಸಿದರು.

ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
TV9 Web
| Edited By: |

Updated on: Sep 22, 2023 | 12:21 PM

Share

ನವದೆಹಲಿ ಸೆ.22: ನಾರಿ ಶಕ್ತಿ ವಂದನ್ (ಮಹಿಳಾ ಮೀಸಲಾತಿ) (Women’s Reservation Bill) ಮಸೂದೆ ಸಂಸತ್​ನಲ್ಲಿ ಅಂಗಿಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೂರದರ್ಶಿ ನಾಯಕತ್ವದಲ್ಲಿ, ಉದಾತ್ತ ಚಿಂತನೆಮಹಿಳಾ ಮೀಸಲಾತಿಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಶಾಸನಸಭೆಗಳಲ್ಲೇ ಮಹಿಳಾ ಮೀಸಲಾತಿ ‌ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ. ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು.

1980-90 ರ ದಶಕದಿಂದ ಮಹಿಳಾ ಮೀಸಲಾತಿ ಕೂಗಿತ್ತು. ಹಲವು ಸರ್ಕಾರಗಳು ಪ್ರಯತ್ನಪಟ್ಟವು ಆದರೆ ಸಾಧ್ಯವಾಗಲಿಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಹಳ ಪ್ರಯತ್ನ ಪಟ್ಟರು, ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನಕ್ಕೆ ಜಯ ಸಿಗಲಿಲ್ಲ. ಮುಂದೆ ಯುಪಿಎ ಸರ್ಕಾರ ಇದನ್ನು ವೋಟ್ ಬ್ಯಾಂಕ್ ರೀತಿ ನೋಡಿ, ಪ್ರಮಾಣಿಕ‌ ಪ್ರಯತ್ನ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದರು.

ಆದರೆ ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಮಹಿಳೆಯರ ಪರವಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ದೇಶ ಮಹಿಳೆಯರಿಗೆ ಅಭಿನಂದನೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಒಲ್ಲಿ ಕ್ಲಿಕ್​ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್