AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ: ದೇಶ ನಿರ್ಮಿಸಿದ ಅಸಂಖ್ಯಾತ ಮಹಿಳೆಯರಿಗೆ ಅರ್ಪಣೆ ಎಂದ ಮೋದಿ

27 ವರ್ಷಗಳ ಬಳಿಕ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ದೇಶಾದ್ಯಂತ ಮಹಿಳೆಯರಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ದೇಶ ನಿರ್ಮಿಸಿದ ಅಸಂಖ್ಯಾತ ಮಹಿಳೆಯರಿಗೆ ಅರ್ಪಣೆ ಎಂದಿದ್ದಾರೆ.

ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ: ದೇಶ ನಿರ್ಮಿಸಿದ ಅಸಂಖ್ಯಾತ ಮಹಿಳೆಯರಿಗೆ ಅರ್ಪಣೆ ಎಂದ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 22, 2023 | 12:05 PM

ನವದೆಹಲಿ, (ಸೆಪ್ಟೆಂಬರ್ 22): ಮಹಿಳಾ ಮೀಸಲಾತಿ ಕನಸು ಕೊನೆಗೂ ನನಸಾಗಿದೆ. 27 ವರ್ಷಗಳ ಕಾಯುವಿಕೆ ಅಂತ್ಯವಾಗಿದೆ. ಲೋಕಸಭೆ ಬಳಿಕ ನಿನ್ನೆ(ಸೆ.21) ರಾಜ್ಯಸಭೆಯಲ್ಲಿಯೂ ಮಹಿಳಾ ಮೀಸಲಾತಿ ಮಸೂದೆ(women reservation bill) ಅಂಗೀಕಾರವಾಗಿದೆ. ಐತಿಹಾಸಿಕ ಮಸೂದೆ ಅಂಗೀಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿರೋ ಮೋದಿ, ಮಾಡಿರುವ ಅವರು, ದೇಶದ ಮಹಿಳೆಯರ ಅದಮ್ಯ ಚೇತನ, ಶಕ್ತಿ, ಧೈರ್ಯವನ್ನು ಸ್ಮರಿಸುತ್ತೇವೆ. ಈ ಐತಿಹಾಸಿಕ ಹೆಜ್ಜೆಯು ಅವರ ಧ್ವನಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೇಳಲು ಸಹಕಾರಿಯಾಗಲಿದೆ ಎಂದು ಬಣ್ಣಿಸಿದ್ದಾರೆ.

ದೇಶ ನಿರ್ಮಿಸಿದ ಅಸಂಖ್ಯಾತ ಮಹಿಳೆಯರಿಗೆ ಅರ್ಪಣೆ

ನಮ್ಮ ರಾಷ್ಟ್ರದ ಪ್ರಜಾಸತಾತ್ಮಕ ಪಯಣದಲ್ಲಿ ನಿರ್ಣಾಯಕ ಕ್ಷಣ. 140 ಕೋಟಿ ಭಾರತೀಯರಿಗೆ ಅಭಿನಂದನೆಗಳು. ನಾರಿ ಶಕ್ತಿ ವಂದನ್ ಅಧಿನಿಯಮ ಮಸೂದೆಗೆ ಮತ ನೀಡಿದ ರಾಜ್ಯ ಸಭಾ ಸದಸ್ಯರಿಗೆ ಧನ್ಯವಾದ. ಭಾರತದಲ್ಲಿ ಮಹಿಳೆ ಸಬಲೀಕರಣ ಮತ್ತು ಪ್ರಾತಿನಿಧ್ಯ ಒದಗಿಸುವ ಕಾಲವನ್ನು ಬರಮಾಡಿಕೊಂಡಿದ್ದೇವೆ. ಇದು ಕೇವಲ ಶಾಸನ ಅಲ್ಲ. ನಮ್ಮ ದೇಶ ನಿರ್ಮಿಸಿರುವ ಅಸಂಖ್ಯಾತ ಮಹಿಳೆಯರಿಗೆ ಅರ್ಪಣೆಯಾಗಿದೆ. ಮಹಿಳೆಯರ ಕೊಡುಗೆಯಿಂದಾಗಿ ಭಾರತ ಸುಧಾರಣೆ ಕಂಡಿದೆ. ನಮ್ಮ ದೇಶದ ಮಹಿಳೆಯರ ಅದಮ್ಯ ಚೇತನ, ಶಕ್ತಿ, ಧೈರ್ಯವನ್ನು ಸ್ಮರಿಸುತ್ತೇವೆ. ಈ ಐತಿಹಾಸಿಕ ಹೆಜ್ಜೆಯು ಅವರ ಧ್ವನಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೇಳಲು ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ: Womens Reservation Bill; ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಸರ್ವಾನುಮತದ ಅನುಮೋದನೆ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೂಡ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಆಗಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಮೋದಿ ಅವರ ಉದಾತ್ತ ಚಿಂತನೆಯಲ್ಲಿ ಮೂಡಿ ಬಂದ ಕಲ್ಪನೆಯಾಗಿದೆ ಎಂದಿದ್ದಾರೆ.

1980 -90 ರ ದಶಕದಿಂದಲೂ ಮಹಿಳಾ ಮೀಸಲಾತಿ ಕೂಗು ಕೇಳಿ ಬಂದಿತ್ತು. ಹಲವು ಸರ್ಕಾರಗಳು ಬಂದು ಹೋದವು,ಅಟಲ್ ಬಿಹಾರಿ ವಾಜಪೇಯಿ ಬಹಳ ಪ್ರಯತ್ನಿಸಿದ್ದರು. ಆದ್ರೆ, ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನ ಆಗಲಿಲ್ಲ. ಮುಂದೆ ಬಂದ UPA ಸರ್ಕಾರ ವೋಟ್ ಬ್ಯಾಂಕ್ ರೀತಿ ನೋಡಿ,ಪ್ರಮಾಣಿಕ‌ ಪ್ರಯತ್ನ ಮಾಡಲಿಲ್ಲ.ಆದ್ರೆ ಮೋದಿ ಅವರ ಧೃಡ ನಿಶ್ಚಯ,ರಾಜಕೀಯ ಇಚ್ಛಾ ಶಕ್ತಿ ಕಾರಣದಿಂದ ಸಂಸತ್ ನಲ್ಲಿ ಮಹಿಳಾ ಮೀಸಲಾತಿ ಅಂಗೀಕಾರ ಆಗಿದೆ. ದೇಶದ ಎಲ್ಲಾ ಮಹಿಳೆಯರ ಪರವಾಗಿ ಮೋದಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಒಟ್ಟಿನಲ್ಲಿ 27 ವರ್ಷಗಳ ಬಳಿಕ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ದೇಶಾದ್ಯಂತ ಮಹಿಳೆಯರಲ್ಲಿ ಸಂಭ್ರಮ ಮನೆ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ