AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ, ಪಂಜಾಬ್ ಸರ್ಕಾರ ಬಿಎಸ್ಎಫ್ ಆದೇಶ ರಾಜಕೀಯ ಮಾಡಿದೆ- ಕ್ಯಾಪ್ಟನ್ ಅಮರೀಂದರ್

Captain Amarinder Singh: ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ ಎಂದಿರುವ ಪಂಜಾಬ್​ ನಿಕಟಪೂರ್ವ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಅವರು ಬಿಎಸ್ಎಫ್ ಗಡಿ ವ್ಯಾಪ್ತಿ ವಿಸ್ತರಣೆಯನ್ನು ಬೆಂಬಲಿಸಿ ಮಾತನಾಡಿದ್ದಾರೆ.

ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ, ಪಂಜಾಬ್ ಸರ್ಕಾರ ಬಿಎಸ್ಎಫ್ ಆದೇಶ ರಾಜಕೀಯ ಮಾಡಿದೆ- ಕ್ಯಾಪ್ಟನ್ ಅಮರೀಂದರ್
ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
TV9 Web
| Updated By: ಸಾಧು ಶ್ರೀನಾಥ್​|

Updated on:Oct 27, 2021 | 11:52 AM

Share

ಚಂಡೀಗಢ: ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ ಎಂದಿರುವ ಪಂಜಾಬ್​ ನಿಕಟಪೂರ್ವ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಅವರು ಬಿಎಸ್ಎಫ್ ಗಡಿ ವ್ಯಾಪ್ತಿ ವಿಸ್ತರಣೆಯನ್ನು ಬೆಂಬಲಿಸಿ ಮಾತನಾಡಿದ್ದಾರೆ. ಪಂಜಾಬ್ ನಲ್ಲಿ ಗಡಿಯಿಂದ 50 ಕಿಮೀ ವ್ಯಾಪ್ತಿಯವರೆಗೆ ಪ್ರಕರಣ ದಾಖಲಿಸುವ ಅಧಿಕಾರ ಬಿಎಸ್ಎಫ್ ಗೆ ನೀಡಲಾಗಿದೆ. ಆದರೆ ಪಂಜಾಬ್ ಸರ್ಕಾರ ಬಿಎಸ್ಎಫ್ ಆದೇಶವನ್ನು ರಾಜಕೀಯ ಮಾಡಿದೆ. ವಾಸ್ತವವಾಗಿ ಬಿಎಸ್ಎಫ್, ಪಂಜಾಬ್ ಪೊಲೀಸರಿಗೆ ಸಹಾಯ ಮಾಡಲಿದೆ. ಗಡಿಯಲ್ಲಿ ಡ್ರೋಣ್ ಮೂಲಕ ಡ್ರಗ್ಸ್ ‌ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ಸದ್ಯದಲ್ಲೇ ಹೊಸ ಪಕ್ಷ ಸ್ಥಾಪನೆ ಘೋಷಣೆ: ಚಂಡೀಗಢದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪ್ರಣಾಳಿಕೆಯ ಶೇ. 98ರಷ್ಟು ಭರವಸೆ ಈಡೇರಿಸಿದ್ದೇನೆ. ಸದ್ಯದಲ್ಲೇ ಹೊಸ ಪಕ್ಷ ಸ್ಥಾಪನೆ ಘೋಷಣೆ ಮಾಡುವೆ. ಹೊಸ ಪಕ್ಷದ ಹೆಸರು ಇನ್ನೂ ತೀರ್ಮಾನ ಆಗಿಲ್ಲ. ಹೊಸ ಪಕ್ಷದ ಹೆಸರು, ಚುನಾವಣಾ ಚಿಹ್ನೆ ಅಂತಿಮಗೊಳಿಸಲಾಗುತ್ತಿದೆ. ನಾನು ಯಾವಾಗಲೂ ಯುದ್ಧದ ರೀತಿ ಹೋರಾಟ ಮಾಡಿದ್ದೇನೆ. ನಾನು ಎಷ್ಟು ಕೆಲಸ ಮಾಡಿದ್ದೇನೆ ಎನ್ನುವುದರ ಸಂಪೂರ್ಣ ಲೆಕ್ಕ ನೀಡುತ್ತೇನೆ. ನಾನು ಹೊಸ ಪಕ್ಷ ಸ್ಥಾಪಿಸುತ್ತಿದ್ದೇನೆ. ನಮ್ಮ ವಕೀಲರು ಚುನಾವಣಾ ಆಯೋಗದ ಜೊತೆಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆಯುವುದು ಖಚಿತ; ಹೊಸ ಪಕ್ಷ ಕಟ್ಟುತ್ತಾರಾ ಕ್ಯಾಪ್ಟನ್?

ಹುಲಿ ಈಜಿ ದಡ ಸೇರುತ್ತಿರುವ ವಿಡಿಯೋ ಹೇಗಿದೆ ಗೊತ್ತಾ? | Tiger |Tv9Kannada|

(wont compromise with the security of the country will support bsf says captain amarinder singh)

Published On - 11:36 am, Wed, 27 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ