AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೀತಾಮರ್ಹಿಯ ಯಾದವ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬರಲು ಬಯಸುವವರು ಬರಬಹುದು, ಚಹಾ ಮತ್ತು ತಿಂಡಿಗಳನ್ನು ಸೇವಿಸಿ ನಂತರ ಹೋಗಬಹುದು, ಆದರೆ ಯಾವುದೇ ಸಹಾಯವನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ.

ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
ದೇವೇಶ್​ ಚಂದ್ರ ಠಾಕೂರ್​
ನಯನಾ ರಾಜೀವ್
|

Updated on: Jun 18, 2024 | 10:59 AM

Share

ನನಗೆ ಮತ ಹಾಕದ ಮುಸ್ಲಿಮರು, ಯಾದವರ ಪರವಾಗಿ ನಾನು ಕೆಲಸ ಮಾಡುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮತ್ತು ಯಾದವ ಸಮುದಾಯದ ಜನರು ತಮಗೆ ಮತ ನೀಡದ ಕಾರಣ ಅವರ ಯಾವುದೇ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬಿಹಾರದ ಸೀತಾಮರ್ಹಿ ಲೋಕಸಭಾ ಕ್ಷೇತ್ರದಲ್ಲಿ ಠಾಕೂರ್ ಅವರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಭ್ಯರ್ಥಿ ಅರ್ಜುನ್ ರೈ ವಿರುದ್ಧ 51,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಜೆಡಿಯು ಸಂಸದ ಸೀತಾಮರ್ಹಿಯ ಯಾದವ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರಲು ಬಯಸುವವರು ಬರಬಹುದು, ಚಹಾ ಮತ್ತು ತಿಂಡಿಗಳನ್ನು ಸೇವಿಸಿ ನಂತರ ಹೋಗಬಹುದು, ಆದರೆ ಯಾವುದೇ ಸಹಾಯವನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ನನ್ನ ಬಳಿಗೆ ಯಾವುದೋ ಕೆಲಸದ ನಿಮಿತ್ತ ಬಂದಿದ್ದರು, ಅವರು ಮೊದಲ ಬಾರಿಗೆ ಬಂದಿದ್ದರು ಹಾಗಾಗಿ ನಾನು ಸ್ಪಷ್ಟವಾಗಿ ಅರ್ಥವಾಗುವಂತೆ ಹೇಳಿದ್ದೆ ಎಂದರು.

ಮತ್ತಷ್ಟು ಓದಿ: ಮುಂಗಾರು ಅಧಿವೇಶನ ಬಳಿಕ 19 ಮಂದಿ ಎನ್​ಸಿಪಿ ಶಾಸಕರು ನಿಲುವು ಬದಲಿಸಲಿದ್ದಾರೆ: ರೋಹಿತ್ ಪವಾರ್

ಠಾಕೂರ್ ಅವರ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಅವರು ಈಗ ಸಂಸತ್ತಿನಲ್ಲಿ ಸೀತಾಮರ್ಹಿಯನ್ನು ಪ್ರತಿನಿಧಿಸುತ್ತಿದ್ದಾರೆ ಎಂಬುದನ್ನು ಅವರು ಮರೆಯಬಾರದು ಎಂದು ಆರ್‌ಜೆಡಿ ತಿರುಗೇಟು ನೀಡಿದೆ. ಯಾವುದೇ ನಾಯಕ, ಸಂಸದರಾಗಲಿ, ಶಾಸಕರಾಗಲಿ ಅಥವಾ ಪ್ರಧಾನಿಯಾಗಲಿ ಯಾವುದೇ ಜಾತಿ ಅಥವಾ ಸಮುದಾಯಕ್ಕೆ ಸೇರಿದವರಲ್ಲ, ಚುನಾವಣೆಯಲ್ಲಿ ಗೆದ್ದಾಗ ಅವರು ಒಂದು ಪ್ರದೇಶದ ಪ್ರತಿನಿಧಿಯಾಗುತ್ತಾರೆ.

ದೇವೇಶ್ ಚಂದ್ರ ಠಾಕೂರ್ ಅವರು ಈಗ ಸೀತಾಮರ್ಹಿಯ ಚುನಾಯಿತ ಸಂಸದರಾಗಿದ್ದಾರೆ. ಅವರಿಗೆ ಆ ಪ್ರದೇಶದಲ್ಲಿ ಪ್ರತಿಯೊಬ್ಬರು ಸಮಾನರಾಗಿರಬೇಕು ಮತ್ತು ಅವರು ಜಾತಿ ಮತ್ತು ಸಮುದಾಯವನ್ನು ವರ್ಗೀಕರಿಸದೆ ಎಲ್ಲರಿಗೂ ಕೆಲಸ ಮಾಡಬೇಕು ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೋರುತ್ತಿದೆ ಕದಂಬರು ನಿರ್ಮಿಸಿದ ಬನವಾಸಿಯ ಮಧುಕೇಶ್ವರ ದೇವಸ್ಥಾನ
ಸೋರುತ್ತಿದೆ ಕದಂಬರು ನಿರ್ಮಿಸಿದ ಬನವಾಸಿಯ ಮಧುಕೇಶ್ವರ ದೇವಸ್ಥಾನ
ಚೆನ್ನೈನಲ್ಲಿ ಕನ್ನಡ ಪರ ಮಾತು: ನಿರ್ದೇಶಕ ಪ್ರೇಮ್ ಹೇಳಿದ್ದೇನು?
ಚೆನ್ನೈನಲ್ಲಿ ಕನ್ನಡ ಪರ ಮಾತು: ನಿರ್ದೇಶಕ ಪ್ರೇಮ್ ಹೇಳಿದ್ದೇನು?
ಬೆನ್ ಡಕೆಟ್ ವಿಕೆಟ್ ಉರುಳಿಸಿದ ಸಿರಾಜ್​ಗೆ ಬೀಳುತ್ತಾ ದಂಡ?
ಬೆನ್ ಡಕೆಟ್ ವಿಕೆಟ್ ಉರುಳಿಸಿದ ಸಿರಾಜ್​ಗೆ ಬೀಳುತ್ತಾ ದಂಡ?
ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್
ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್
ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ