AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೀತಾಮರ್ಹಿಯ ಯಾದವ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬರಲು ಬಯಸುವವರು ಬರಬಹುದು, ಚಹಾ ಮತ್ತು ತಿಂಡಿಗಳನ್ನು ಸೇವಿಸಿ ನಂತರ ಹೋಗಬಹುದು, ಆದರೆ ಯಾವುದೇ ಸಹಾಯವನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ.

ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
ದೇವೇಶ್​ ಚಂದ್ರ ಠಾಕೂರ್​
ನಯನಾ ರಾಜೀವ್
|

Updated on: Jun 18, 2024 | 10:59 AM

Share

ನನಗೆ ಮತ ಹಾಕದ ಮುಸ್ಲಿಮರು, ಯಾದವರ ಪರವಾಗಿ ನಾನು ಕೆಲಸ ಮಾಡುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮತ್ತು ಯಾದವ ಸಮುದಾಯದ ಜನರು ತಮಗೆ ಮತ ನೀಡದ ಕಾರಣ ಅವರ ಯಾವುದೇ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬಿಹಾರದ ಸೀತಾಮರ್ಹಿ ಲೋಕಸಭಾ ಕ್ಷೇತ್ರದಲ್ಲಿ ಠಾಕೂರ್ ಅವರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಭ್ಯರ್ಥಿ ಅರ್ಜುನ್ ರೈ ವಿರುದ್ಧ 51,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಜೆಡಿಯು ಸಂಸದ ಸೀತಾಮರ್ಹಿಯ ಯಾದವ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬರಲು ಬಯಸುವವರು ಬರಬಹುದು, ಚಹಾ ಮತ್ತು ತಿಂಡಿಗಳನ್ನು ಸೇವಿಸಿ ನಂತರ ಹೋಗಬಹುದು, ಆದರೆ ಯಾವುದೇ ಸಹಾಯವನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ನನ್ನ ಬಳಿಗೆ ಯಾವುದೋ ಕೆಲಸದ ನಿಮಿತ್ತ ಬಂದಿದ್ದರು, ಅವರು ಮೊದಲ ಬಾರಿಗೆ ಬಂದಿದ್ದರು ಹಾಗಾಗಿ ನಾನು ಸ್ಪಷ್ಟವಾಗಿ ಅರ್ಥವಾಗುವಂತೆ ಹೇಳಿದ್ದೆ ಎಂದರು.

ಮತ್ತಷ್ಟು ಓದಿ: ಮುಂಗಾರು ಅಧಿವೇಶನ ಬಳಿಕ 19 ಮಂದಿ ಎನ್​ಸಿಪಿ ಶಾಸಕರು ನಿಲುವು ಬದಲಿಸಲಿದ್ದಾರೆ: ರೋಹಿತ್ ಪವಾರ್

ಠಾಕೂರ್ ಅವರ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಅವರು ಈಗ ಸಂಸತ್ತಿನಲ್ಲಿ ಸೀತಾಮರ್ಹಿಯನ್ನು ಪ್ರತಿನಿಧಿಸುತ್ತಿದ್ದಾರೆ ಎಂಬುದನ್ನು ಅವರು ಮರೆಯಬಾರದು ಎಂದು ಆರ್‌ಜೆಡಿ ತಿರುಗೇಟು ನೀಡಿದೆ. ಯಾವುದೇ ನಾಯಕ, ಸಂಸದರಾಗಲಿ, ಶಾಸಕರಾಗಲಿ ಅಥವಾ ಪ್ರಧಾನಿಯಾಗಲಿ ಯಾವುದೇ ಜಾತಿ ಅಥವಾ ಸಮುದಾಯಕ್ಕೆ ಸೇರಿದವರಲ್ಲ, ಚುನಾವಣೆಯಲ್ಲಿ ಗೆದ್ದಾಗ ಅವರು ಒಂದು ಪ್ರದೇಶದ ಪ್ರತಿನಿಧಿಯಾಗುತ್ತಾರೆ.

ದೇವೇಶ್ ಚಂದ್ರ ಠಾಕೂರ್ ಅವರು ಈಗ ಸೀತಾಮರ್ಹಿಯ ಚುನಾಯಿತ ಸಂಸದರಾಗಿದ್ದಾರೆ. ಅವರಿಗೆ ಆ ಪ್ರದೇಶದಲ್ಲಿ ಪ್ರತಿಯೊಬ್ಬರು ಸಮಾನರಾಗಿರಬೇಕು ಮತ್ತು ಅವರು ಜಾತಿ ಮತ್ತು ಸಮುದಾಯವನ್ನು ವರ್ಗೀಕರಿಸದೆ ಎಲ್ಲರಿಗೂ ಕೆಲಸ ಮಾಡಬೇಕು ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ