AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ-ತೆಲಂಗಾಣ ಕೃಷ್ಣಾ ನದಿ ನೀರು ಹಂಚಿಕೆ ವಿವಾದ; ನಾನಂತೂ ವಿಚಾರಣೆ ಮಾಡುವುದೇ ಇಲ್ಲ ಎಂದ ಸುಪ್ರೀಂಕೋರ್ಟ್​ ಸಿಜೆಐ

ಕೃಷ್ಣಾ ಮತ್ತು ಗೋದಾವರಿ ನದಿಗಳು ಆಂಧ್ರ ಹಾಗೂ ತೆಲಂಗಾಣ ಮೂಲಕ ಹರಿಯುತ್ತವೆ. ಆಂಧ್ರಪ್ರದೇಶ ವಿಭಜನೆ ಆದಾಗಿನಿಂದಲೂ ಈ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಪದೇಪದೆ ಘರ್ಷಣೆ ಆಗುತ್ತಲೇ ಇದೆ.

ಆಂಧ್ರಪ್ರದೇಶ-ತೆಲಂಗಾಣ ಕೃಷ್ಣಾ ನದಿ ನೀರು ಹಂಚಿಕೆ ವಿವಾದ; ನಾನಂತೂ ವಿಚಾರಣೆ ಮಾಡುವುದೇ ಇಲ್ಲ ಎಂದ ಸುಪ್ರೀಂಕೋರ್ಟ್​ ಸಿಜೆಐ
ನ್ಯಾಯಮೂರ್ತಿ ರಮಣ
TV9 Web
| Edited By: |

Updated on: Aug 02, 2021 | 3:41 PM

Share

ಕೃಷ್ಣಾ ನದಿ ನೀರು ಹಂಚಿಕೆ (Krishna River Dispute Case) ಸಂಬಂಧಪಟ್ಟು ಆಂಧ್ರಪ್ರದೇಶ (Andhra Pradesh) ಮತ್ತು ತೆಲಂಗಾಣ(Telangana ದ ನಡುವೆ ಎದ್ದಿರುವ ವಿವಾದದ ವಿಚಾರಣೆಯನ್ನು ನಾನು ಮಾಡುವುದಿಲ್ಲವೆಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ (NV Ramana) ಇಂದು ಹೇಳಿದ್ದಾರೆ. ನಾನು ಎರಡೂ ರಾಜ್ಯಗಳಿಗೆ ಸೇರಿದ್ದೇನೆ. ಹಾಗಾಗಿ ಕಾನೂನು ಬದ್ಧವಾಗಿ ನಾನು ಈ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಮಧ್ಯಸ್ಥಿಕೆ ಮೂಲಕ ಎರಡೂ ರಾಜ್ಯಗಳು ಪ್ರಸ್ತುತ ವಿಚಾರವನ್ನು ಬಗೆಹರಿಸಿಕೊಳ್ಳಲು ಸಾಧ್ಯವಾದರೆ, ಅದನ್ನೇ ಮಾಡಿ. ನಾವು ಅದಕ್ಕೆ ಸಹಕಾರ ನೀಡುತ್ತೇವೆ. ಹಾಗೊಮ್ಮೆ ವಿಚಾರಣೆ ನಡೆಸಲೇಬೇಕು ಎಂದರೆ ಪ್ರಕರಣವನ್ನು ಸುಪ್ರೀಂಕೋರ್ಟ್​ನ ಮತ್ತೊಂದು ಪೀಠಕ್ಕೆ ನಾನು ವರ್ಗಾಯಿಸುತ್ತೇನೆ ಎಂದಿದ್ದಾರೆ.

ಆಂಧ್ರಪ್ರದೇಶದಿಂದ ತೆಲಂಗಾಣ ಬೇರ್ಪಟ್ಟ ಬಳಿಕ 2015ರಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಎರಡೂ ರಾಜ್ಯಗಳ ಮಧ್ಯೆ ಒಪ್ಪಂದ ಏರ್ಪಟ್ಟಿದೆ. ಆದರೆ ಈ ಒಪ್ಪಂದದ ನಿಯಮಗಳನ್ನು ತೆಲಂಗಾಣ ಉಲ್ಲಂಘಿಸಿದೆ. ಅದರ ವಿದ್ಯುತ್​ ಉತ್ಪಾದನಾ ಅವಶ್ಯಕತೆಗಳಿಗಾಗಿ, ಕೃಷ್ಣಾ ನದಿ ನೀರನ್ನು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ, ಮನಸಿಗೆ ಬಂದಂತೆ ಬಳಕೆ ಮಾಡಿಕೊಳ್ಳುತ್ತಿದೆ. ಇದರಿಂದ ನಮ್ಮ ನೀರಾವರಿ ಯೋಜನೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ ಎಂದು ಆಂಧ್ರಪ್ರದೇಶ ಆರೋಪಿಸಿದೆ.

ಈ ಮಧ್ಯೆ ಎರಡೂ ರಾಜ್ಯಗಳಿಗೂ ಸಾಮಾನ್ಯವಾಗಿ ಇರುವ ಶ್ರೀಶೈಲ, ನಾಗಾರ್ಜುನ, ಸಾಗರ ಮತ್ತು ಪುಲಿಚಿಂತಲಾ ಜಲಾಶಯಗಳನ್ನು ನಿಯಂತ್ರಣಕ್ಕೆ ಪಡೆಯುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಇವಿಷ್ಟೂ ಜಲಾಶಯಗಳಿಂದ ತೆಲಂಗಾಣ ಅಳತೆ ಮೀರಿ ನೀರು ಸೆಳೆದುಕೊಳ್ಳುತ್ತಿದೆ ಎಂಬುದು ಆಂಧ್ರದ ಆರೋಪ.

ಕೃಷ್ಣಾ ಮತ್ತು ಗೋದಾವರಿ ನದಿಗಳು ಆಂಧ್ರ ಹಾಗೂ ತೆಲಂಗಾಣ ಮೂಲಕ ಹರಿಯುತ್ತವೆ. ಆಂಧ್ರಪ್ರದೇಶ ವಿಭಜನೆ ಆದಾಗಿನಿಂದಲೂ ಈ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಪದೇಪದೆ ಘರ್ಷಣೆ ಆಗುತ್ತಲೇ ಇದೆ. ಈಗ ಎರಡೂ ರಾಜ್ಯಗಳ ಗಡಿಯಲ್ಲಿರುವ ಶ್ರೀಶೈಲ ಅಣೆಕಟ್ಟಿಗೆ ಸಂಬಂಧಪಟ್ಟ ವಿಚಾರದಲ್ಲಿ ವಿವಾದ ಎದ್ದಿದೆ. ಕೃಷ್ಣಾ ನದಿಗೆ ಒಟ್ಟು ಆರು ಅಣೆಕಟ್ಟು ಕಟ್ಟಲಾಗಿದೆ. ಈ ನದಿ ನೀರು ಹಂಚಿಕೆ ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ 34:66 ಪ್ರಮಾಣದಲ್ಲಿ ಇರಬೇಕು ಎಂದು ತಾತ್ಕಾಲಿಕ ಒಪ್ಪಂದ ಹೇಳುತ್ತದೆ. ಅಂದರೆ ತೆಲಂಗಾಣಕ್ಕೆ 299 ಟಿಎಂಸಿ ನೀರು ಹಾಗೂ ಆಂಧ್ರಪ್ರದೇಶಕ್ಕೆ 512 ಟಿಎಂಸಿ ನೀರು ಸೇರಬೇಕು. ಆದರೆ ಈ ಅನುಪಾತವನ್ನು ಮೀರಿ ತೆಲಂಗಾಣ ನೀರು ಪಡೆಯುತ್ತದೆ ಎಂಬುದು ಆಂಧ್ರದ ಆರೋಪ.

ಇದನ್ನೂ ಓದಿ: ಬೆಂಗಳೂರಲ್ಲಿ ಕೆಲಸಕ್ಕಿದ್ದವನು ಮಂಡ್ಯದಲ್ಲಿ ಶವವಾಗಿ ಪತ್ತೆ, ಊರಿಗೆ ಬರ್ತೀನಿ ಅಂದಿದ್ದವನ ಮೃತದೇಹ ಸಿಕ್ತು ನದಿಯಲ್ಲಿ

Won’t Hear Krishna River Case Says Supreme Court CJI NV Ramana

Follow Us
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ