AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಗುಡ್​ಬೈ ಹೇಳಿದ ರಜನಿಕಾಂತ್! ‘ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ..’

ಪ್ರವೇಶಕ್ಕೂ ಮೊದಲೇ ರಾಜಕಾರಣದಿಂದ ಹಿಂದೆ ಸರಿದ ರಜನಿಕಾಂತ್​..

ರಾಜಕೀಯಕ್ಕೆ ಗುಡ್​ಬೈ ಹೇಳಿದ ರಜನಿಕಾಂತ್! ‘ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ..’
ರಜನಿಕಾಂತ್
Follow us
Skanda
| Updated By: Lakshmi Hegde

Updated on:Dec 29, 2020 | 12:54 PM

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸುವ ಮುನ್ಸೂಚನೆ ನೀಡಿದ್ದ ಸೂಪರ್​ಸ್ಟಾರ್​ ರಜನಿಕಾಂತ್​ ಆರಂಭಕ್ಕೂ ಮುನ್ನವೇ ರಾಜಕೀಯಕ್ಕೆ ಬೆನ್ನು ಹಾಕಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ರಜನಿ ಸದ್ಯಕ್ಕೆ ರಾಜಕೀಯ ಪ್ರವೇಶ ಇಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್​ಗೆ ಆರೋಗ್ಯದಲ್ಲಿ ಏರುಪೇರಾಗಿ ಹೈದರಾಬಾದ್​ನ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಬಳಿಕ ಡಿಸ್​ಚಾರ್ಜ್​ ಆಗಿ, ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಇದೀಗ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂಬ ಕಾರಣಕ್ಕೆ ರಾಜಕೀಯದಿಂದ ದೂರವೇ ಉಳಿಯುತ್ತೇನೆ ಎಂದು ಸೂಪರ್​ಸ್ಟಾರ್ ತಿಳಿಸಿದ್ದಾರೆ.

ರಜನಿಕಾಂತ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು ಅದರ​ ಸಾರಾಂಶ ಇಲ್ಲಿದೆ 

ಸದ್ಯ ನನಗೆ ಆರೋಗ್ಯದ ಕಡೆಗೆ ಗಮನಹರಿಸಬೇಕಾಗಿದೆ. ಈಗ ನನ್ನ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಹೊರತಂದರೂ ಮನೆಮನೆಗೆ ಹೋಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಇನ್ನು ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿ ಆದ ಮೇಲೆ ಕೇವಲ ಸಾಮಾಜಿಕ ಮಾಧ್ಯಮ, ಮಾಧ್ಯಮಗಳ ಮೂಲಕ ಪ್ರಚಾರ ಮಾಡಿದರೆ, ರಾಜಕೀಯ ಕ್ರಾಂತಿಯನ್ನು ಸೃಷ್ಟಿಸಲು ಸಾಧ್ಯವಾಗುವುದಿಲ್ಲ.. ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಮಹತ್ವದ ಗೆಲುವು ಸಾಧಿಸಲೂ ಸಾಧ್ಯವಾಗುವುದಿಲ್ಲ. ಈ ವಾಸ್ತವವನ್ನು ರಾಜಕೀಯ ಅನುಭವ ಇರುವವರು ಒಪ್ಪಿಕೊಳ್ಳಲೇಬೇಕು..

ಚುನಾವಣಾ ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ. ನನಗೆ ಸತ್ಯವನ್ನು ಮಾತಾಡಲು ಎಂದಿಗೂ ಭಯವಿಲ್ಲ. ನನ್ನ ಸತ್ಯ ಮತ್ತು ಪಾರದರ್ಶಕತೆಯನ್ನು ಪ್ರೀತಿಸುವ, ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ನನ್ನೆಲ್ಲ ಅಭಿಮಾನಿಗಳಲ್ಲೂ ಈ ನಿರ್ಧಾರವನ್ನು ಸ್ವೀಕರಿಸುವಂತೆ ಮನವಿ ಮಾಡುತ್ತೇನೆ. ಹಾಗೇ ನನ್ನ ರಜಿನಿ ಮಕ್ಕಳ್ ಮಂದ್ರಮ್ ಇಷ್ಟು ದಿನಗಳಂತೆ ಕಾರ್ಯ ನಿರ್ವಹಿಸಲಿದೆ ಎಂದು ರಜಿನಿ ಇಂದಿನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಸದ್ಯದಲ್ಲೇ ಲಭ್ಯ

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​

Published On - 12:15 pm, Tue, 29 December 20

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ