AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಗುಡ್​ಬೈ ಹೇಳಿದ ರಜನಿಕಾಂತ್! ‘ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ..’

ಪ್ರವೇಶಕ್ಕೂ ಮೊದಲೇ ರಾಜಕಾರಣದಿಂದ ಹಿಂದೆ ಸರಿದ ರಜನಿಕಾಂತ್​..

ರಾಜಕೀಯಕ್ಕೆ ಗುಡ್​ಬೈ ಹೇಳಿದ ರಜನಿಕಾಂತ್! ‘ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ..’
ರಜನಿಕಾಂತ್
Skanda
| Edited By: |

Updated on:Dec 29, 2020 | 12:54 PM

Share

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸುವ ಮುನ್ಸೂಚನೆ ನೀಡಿದ್ದ ಸೂಪರ್​ಸ್ಟಾರ್​ ರಜನಿಕಾಂತ್​ ಆರಂಭಕ್ಕೂ ಮುನ್ನವೇ ರಾಜಕೀಯಕ್ಕೆ ಬೆನ್ನು ಹಾಕಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ರಜನಿ ಸದ್ಯಕ್ಕೆ ರಾಜಕೀಯ ಪ್ರವೇಶ ಇಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್​ಗೆ ಆರೋಗ್ಯದಲ್ಲಿ ಏರುಪೇರಾಗಿ ಹೈದರಾಬಾದ್​ನ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಬಳಿಕ ಡಿಸ್​ಚಾರ್ಜ್​ ಆಗಿ, ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಇದೀಗ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂಬ ಕಾರಣಕ್ಕೆ ರಾಜಕೀಯದಿಂದ ದೂರವೇ ಉಳಿಯುತ್ತೇನೆ ಎಂದು ಸೂಪರ್​ಸ್ಟಾರ್ ತಿಳಿಸಿದ್ದಾರೆ.

ರಜನಿಕಾಂತ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು ಅದರ​ ಸಾರಾಂಶ ಇಲ್ಲಿದೆ 

ಸದ್ಯ ನನಗೆ ಆರೋಗ್ಯದ ಕಡೆಗೆ ಗಮನಹರಿಸಬೇಕಾಗಿದೆ. ಈಗ ನನ್ನ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಹೊರತಂದರೂ ಮನೆಮನೆಗೆ ಹೋಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಇನ್ನು ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿ ಆದ ಮೇಲೆ ಕೇವಲ ಸಾಮಾಜಿಕ ಮಾಧ್ಯಮ, ಮಾಧ್ಯಮಗಳ ಮೂಲಕ ಪ್ರಚಾರ ಮಾಡಿದರೆ, ರಾಜಕೀಯ ಕ್ರಾಂತಿಯನ್ನು ಸೃಷ್ಟಿಸಲು ಸಾಧ್ಯವಾಗುವುದಿಲ್ಲ.. ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಮಹತ್ವದ ಗೆಲುವು ಸಾಧಿಸಲೂ ಸಾಧ್ಯವಾಗುವುದಿಲ್ಲ. ಈ ವಾಸ್ತವವನ್ನು ರಾಜಕೀಯ ಅನುಭವ ಇರುವವರು ಒಪ್ಪಿಕೊಳ್ಳಲೇಬೇಕು..

ಚುನಾವಣಾ ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ. ನನಗೆ ಸತ್ಯವನ್ನು ಮಾತಾಡಲು ಎಂದಿಗೂ ಭಯವಿಲ್ಲ. ನನ್ನ ಸತ್ಯ ಮತ್ತು ಪಾರದರ್ಶಕತೆಯನ್ನು ಪ್ರೀತಿಸುವ, ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ನನ್ನೆಲ್ಲ ಅಭಿಮಾನಿಗಳಲ್ಲೂ ಈ ನಿರ್ಧಾರವನ್ನು ಸ್ವೀಕರಿಸುವಂತೆ ಮನವಿ ಮಾಡುತ್ತೇನೆ. ಹಾಗೇ ನನ್ನ ರಜಿನಿ ಮಕ್ಕಳ್ ಮಂದ್ರಮ್ ಇಷ್ಟು ದಿನಗಳಂತೆ ಕಾರ್ಯ ನಿರ್ವಹಿಸಲಿದೆ ಎಂದು ರಜಿನಿ ಇಂದಿನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಸದ್ಯದಲ್ಲೇ ಲಭ್ಯ

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​

Published On - 12:15 pm, Tue, 29 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!