AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ಮೋದಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ; ಖಲಿಸ್ತಾನಿ ಗುಂಪಿನಿಂದ ಪ್ರಧಾನಿಗೆ ಬೆದರಿಕೆ

ಜನವರಿ 26ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಡ್ಡಿ ಪಡಿಸುವ ಹಾಗೂ ತ್ರಿವರ್ಣ ಧ್ವಜ ಹಾರಿಸದಂತೆ ತಡೆಯುವವರಿಗೆ ಖಲಿಸ್ತಾನಿ ಗುಂಪು 1 ಮಿಲಿಯನ್ (10 ಲಕ್ಷ ರೂ.) ಬಹುಮಾನವನ್ನು ಘೋಷಿಸಿದೆ.

ಗಣರಾಜ್ಯೋತ್ಸವದಂದು ಮೋದಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ; ಖಲಿಸ್ತಾನಿ ಗುಂಪಿನಿಂದ ಪ್ರಧಾನಿಗೆ ಬೆದರಿಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on:Jan 12, 2022 | 5:02 PM

Share

ನವದೆಹಲಿ: ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಭದ್ರತಾ ಲೋಪ ಎದುರಾಗಿತ್ತು. ಈ ಕುರಿತು ಚರ್ಚೆ ಹಾಗೂ ವಿಚಾರಣೆಗಳು ನಡೆಯುತ್ತಿರುವ ನಡುವೆಯೇ ಖಲಿಸ್ತಾನಿ ಸಂಘಟನೆಯೊಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರ ಬೆದರಿಕೆ ಹಾಕಿದೆ. ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜವನ್ನು ಹಾರಿಸಲು ಬಿಡುವುದಿಲ್ಲ. ಜನವರಿ 26ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಡ್ಡಿ ಪಡಿಸುವ ಹಾಗೂ ತ್ರಿವರ್ಣ ಧ್ವಜ ಹಾರಿಸದಂತೆ ತಡೆಯುವವರಿಗೆ ಖಲಿಸ್ತಾನಿ ಗುಂಪು 1 ಮಿಲಿಯನ್ (10 ಲಕ್ಷ ರೂ.) ಬಹುಮಾನವನ್ನು ಘೋಷಿಸಿದೆ.

ಕೆಲವು ದಿನಗಳ ಹಿಂದಷ್ಟೇ ಪಂಜಾಬ್​ನಲ್ಲಿ ಪ್ರತಿಭಟನಾಕಾರರು ರಸ್ತೆಗೆ ಅಡ್ಡ ಹಾಕಿದ್ದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿದ್ದರು. ಇದರಿಂದ ಮೋದಿಯವರು ಜನವರಿ 5ರಂದು ಪಂಜಾಬ್ ಭೇಟಿಯನ್ನು ಮೊಟಕುಗೊಳಿಸಿ, ವಿಮಾನದ ಮೂಲಕ ದೆಹಲಿಗೆ ವಾಪಾಸ್ ಹೋಗಿದ್ದರು.

ಭದ್ರತಾ ವೈಫಲ್ಯದ ನಂತರ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಹುಸೇನಿವಾಲಾದಲ್ಲಿ ಹುತಾತ್ಮರ ಸ್ಮಾರಕದಲ್ಲಿ ಕಾರ್ಯಕ್ರಮಕ್ಕೆ ಹಾಜರಾಗದೆ ಹಿಂತಿರುಗಿದರು. ಫಿರೋಜ್‌ಪುರದ ರ್ಯಾಲಿಯಲ್ಲಿ ಪ್ರಧಾನಿಗೂ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಇಡೀ ಘಟನೆಯ ತನಿಖೆಗೆ ಈಗಾಗಲೇ ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿದೆ.

ಖಲಿಸ್ತಾನಿ ಭಯೋತ್ಪಾದಕ ಗುಂಪು ‘ಸಿಖ್ಸ್ ಫಾರ್ ಜಸ್ಟೀಸ್’ ಮತ್ತೊಮ್ಮೆ ಭಾರತದಲ್ಲಿ ಗಣರಾಜ್ಯೋತ್ಸವದ ಆಚರಣೆಯನ್ನು ಗುರಿಯಾಗಿಸಿಕೊಂಡಿದೆ. ಅದರ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿಯನ್ನು ನಿರ್ಬಂಧಿಸಬೇಕು ಮತ್ತು ಜನವರಿ 26ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸದಂತೆ ತಡೆಯೊಡ್ಡಬೇಕು ಎಂದು ತೀವ್ರಗಾಮಿ ಖಲಿಸ್ತಾನ್ ಪರ ಸಂಘಟನೆಯು ಜನರಿಗೆ ಆಫರ್ ನೀಡಿದೆ. ಖಲಿಸ್ತಾನಿ ಗುಂಪು ನರೇಂದ್ರ ಮೋದಿಯವರಿಗೆ ತಡೆಯೊಡ್ಡುವವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದೆ.

ಇದನ್ನೂ ಓದಿ: National Youth Day 2022: ಭಾರತದ ಯುವಜನತೆಗೆ ಟೆಕ್ನಾಲಜಿಯೂ ಗೊತ್ತು, ಪ್ರಜಾಪ್ರಭುತ್ವದ ಮೌಲ್ಯದ ಅರಿವೂ ಇದೆ: ಪ್ರಧಾನಿ ಮೋದಿ

Punajb Elections 2022: ಆಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂ; ಪಂಜಾಬ್​ನಲ್ಲಿ ಕೇಜ್ರಿವಾಲ್ ಭರವಸೆ

Published On - 5:01 pm, Wed, 12 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ