AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾದಲ್ಲಿ ಪದಕ ಬಿಸಾಡಲು ಬರುವ ಕುಸ್ತಿಪಟುಗಳನ್ನು ನಾವು ತಡೆಯುವುದಿಲ್ಲ: ಹರಿದ್ವಾರ ಪೊಲೀಸರು

ಜನರು ಚಿನ್ನ, ಬೆಳ್ಳಿ ಮತ್ತು ಚಿತಾಭಸ್ಮವನ್ನು ಗಂಗಾದಲ್ಲಿ ಬಿಡುತ್ತಾರೆ. ಕುಸ್ತಿಪಟುಗಳು ಅವರು ಬಯಸಿದರೆ ತಮ್ಮ ಪದಕಗಳನ್ನು ಬಿಡಬಹುದು. ಗಂಗಾ ದಸರಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಸುಮಾರು 15 ಲಕ್ಷ ಯಾತ್ರಿಕರು ಹರಿದ್ವಾರಕ್ಕೆ ಭೇಟಿ ನೀಡುತ್ತಾರೆ. ಕುಸ್ತಿಪಟುಗಳಿಗೂ ಸ್ವಾಗತವಿದೆ ಎಂದು ಸಿಂಗ್ ಹೇಳಿದರು.

ಗಂಗಾದಲ್ಲಿ ಪದಕ ಬಿಸಾಡಲು ಬರುವ ಕುಸ್ತಿಪಟುಗಳನ್ನು ನಾವು ತಡೆಯುವುದಿಲ್ಲ: ಹರಿದ್ವಾರ ಪೊಲೀಸರು
ಕುಸ್ತಿಪಟುಗಳ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:May 30, 2023 | 5:15 PM

ಡೆಹ್ರಾಡೂನ್/ಹರಿದ್ವಾರ: ಭಾರತದ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ದೇಶದ ಅಗ್ರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ (Ganga) ಬಿಡುವುದಾಗಿ ಘೋಷಿಸಿದ ಗಂಟೆಗಳ ನಂತರ, ಹರಿದ್ವಾರ (Haridwar) ಪೊಲೀಸರು ನಾವು ಅವರನ್ನು ತಡೆಯುವುದಿಲ್ಲ ಎಂದು ಹೇಳಿದ್ದಾರೆ. ಜಿಲ್ಲೆಗೆ ಪ್ರವೇಶಿಸುವುದನ್ನು ತಡೆಯುವುದಾಗಲೀ,ಗಂಗಾದಲ್ಲಿ ಪದಕ ಬಿಡುವುದಕ್ಕೆ ತಡೆಯೊಡ್ಡುವುದಾಗಲೀ ನಾವು ಮಾಡಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕುಸ್ತಿಪಟುಗಳು ಏನು ಬೇಕಾದರೂ ಮಾಡಲು ಸ್ವತಂತ್ರರು. ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಯಲ್ಲಿ ಬಿಸಾಡಲು ಬಂದರೆ ನಾವು ಅವರನ್ನು ತಡೆಯುವುದಿಲ್ಲ. ನನ್ನ ಹಿರಿಯ ಅಧಿಕಾರಿಗಳಿಂದ ನಾನು ಅಂತಹ ಯಾವುದೇ ಸೂಚನೆಗಳನ್ನು ಸ್ವೀಕರಿಸಿಲ್ಲ ಎಂದು ಹರಿದ್ವಾರದ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ಹೇಳಿದ್ದಾರೆ.

ಜನರು ಚಿನ್ನ, ಬೆಳ್ಳಿ ಮತ್ತು ಚಿತಾಭಸ್ಮವನ್ನು ಗಂಗಾದಲ್ಲಿ ಬಿಡುತ್ತಾರೆ. ಕುಸ್ತಿಪಟುಗಳು ಅವರು ಬಯಸಿದರೆ ತಮ್ಮ ಪದಕಗಳನ್ನು ಬಿಡಬಹುದು. ಗಂಗಾ ದಸರಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಸುಮಾರು 15 ಲಕ್ಷ ಯಾತ್ರಿಕರು ಹರಿದ್ವಾರಕ್ಕೆ ಭೇಟಿ ನೀಡುತ್ತಾರೆ. ಕುಸ್ತಿಪಟುಗಳಿಗೂ ಸ್ವಾಗತವಿದೆ ಎಂದು ಸಿಂಗ್ ಹೇಳಿದರು.

ಅಪ್ರಾಪ್ತ ವಯಸ್ಕ ಸೇರಿದಂತೆ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ, ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ಆರಂಭಿಸಿದಾಗ ಪೊಲೀಸರು ಅವರನ್ನು ಬಂಧಿಸಿದ್ದರು. ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಟೆಂಟ್‌ಗಳನ್ನು ಬಲವಂತವಾಗಿ ಕೆಡವಿದ್ದು, ಗಲಭೆ ಮತ್ತು ಕಾನೂನುಬಾಹಿರ ಸಭೆಯ ಆರೋಪದ ಮೇಲೆ ಕುಸ್ತಿಪಟುಗಳ ಪ್ರತಿಭಟನೆಯ ಸಂಘಟಕರ ಮೇಲೆ ಕೇಸು ದಾಖಲಿಸಿದ್ದಾರೆ.

ಮಂಗಳವಾರ ಟ್ವಿಟರ್‌ನಲ್ಲಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಾವು ಹರಿದ್ವಾರಕ್ಕೆ ಹೋಗಿ ಸಂಜೆ 6 ಗಂಟೆಗೆ ತಮ್ಮ ಪದಕಗಳನ್ನು ಗಂಗಾದಲ್ಲಿ ಬಿಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಪದಕಗಳು ನಮ್ಮ ಜೀವನ, ನಮ್ಮ ಆತ್ಮಗಳು. ಇಂದು ಅವರನ್ನು ಗಂಗೆಯಲ್ಲಿ ಬಿಟ್ಟ ನಂತರ ಬದುಕಲು ಯಾವುದೇ ಕಾರಣವಿಲ್ಲ. ಹಾಗಾಗಿ ಆ ಬಳಿಕ ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಹೇಳಿಕೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Wrestlers protest: ತಾವು ಗೆದ್ದ ಪದಕಗಳನ್ನು ಗಂಗಾನದಿಯಲ್ಲಿ ಬಿಡಲು ತೀರ್ಮಾನಿಸಿದ ಕುಸ್ತಿಪಟುಗಳು

ಇಂದು ಹರಿದ್ವಾರಕ್ಕೆ ಕುಸ್ತಿಪಟುಗಳು ಬರುತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ಗಂಗಾ ಸಭಾದ ಅಧ್ಯಕ್ಷ ನಿತಿನ್ ಗೌತಮ್ ಹೇಳಿದ್ದಾರೆ. ಲಕ್ಷ ಯಾತ್ರಿಕರು ಇಂದು ಹರಿದ್ವಾರದಲ್ಲಿದ್ದಾರೆ. ಗಂಗಾ ಸಪ್ತಮಿ ಆಚರಣೆಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ದೇಶದ ಅಗ್ರ ಕುಸ್ತಿಪಟುಗಳು ತಮ್ಮ ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗೆಯಲ್ಲಿ ಬಲವಂತವಾಗಿ ಬಿಸಾಡಬೇಕಾಗಿ ಬಂದಿರುವುದು ನಮ್ಮ ಪ್ರಜಾಪ್ರಭುತ್ವ ಮತ್ತು ಕ್ರೀಡಾ ಕ್ಷೇತ್ರಕ್ಕೆ ದುರದೃಷ್ಟಕರ ಸಂಗತಿ ಎಂದು ಹರಿದ್ವಾರದ ರಾಧೆ ಕ್ರಿಶನ್ ಆಶ್ರಮದ ಸತ್ಪಾಲ್ ಬ್ರಹ್ಮಚಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Tue, 30 May 23

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ