AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಬಿಸಾಡಲೆತ್ನಿಸಿದ ವಕೀಲ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲರು ಕೋರ್ಟ್​​ನಲ್ಲಿಯೇ ಶೂ ಬಿಸಾಡಲು ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ತಕ್ಷಣ ಆರೋಪಿ ವಕೀಲರನ್ನು ವಶಕ್ಕೆ ಪಡೆದರು. ಆದರೆ ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತರಾಗಿದ್ದರು ಮತ್ತು ಯಾವುದೇ ಅಡೆತಡೆಯಿಲ್ಲದೆ ವಿಚಾರಣೆಯನ್ನು ಮುಂದುವರೆಸಿದರು. ಸಿಜೆಐ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಸುಪ್ರೀಂ ಕೋರ್ಟ್​ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಬಿಸಾಡಲೆತ್ನಿಸಿದ ವಕೀಲ
Cji Gavai
ಸುಷ್ಮಾ ಚಕ್ರೆ
|

Updated on:Oct 06, 2025 | 1:55 PM

Share

ನವದೆಹಲಿ, ಅಕ್ಟೋಬರ್ 6: ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ (CJI Gavai) ಅವರ ಮೇಲೆ ತಮ್ಮ ಶೂ ಎಸೆಯಲು ಪ್ರಯತ್ನಿಸಿದ ಘಟನೆ ನಡೆಯಿತು. ಸಿಜೆಐ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ದರು.

ಪೊಲೀಸರು ಅವರನ್ನು ಹೊರಗೆ ಕರೆದೊಯ್ಯುವಾಗ ವಕೀಲರು “ಸನಾತನ ಕಾ ಅಪ್ಮಾನ್ ನಹಿ ಸಹೇಂಗೆ (ಸನಾತನ ಸಂಸ್ಥೆಗೆ ಯಾವುದೇ ಅವಮಾನವಾದರೆ ನಾವು ಸಹಿಸುವುದಿಲ್ಲ)” ಎಂದು ಕೂಗಿದ್ದಾರೆ.

ಇದನ್ನೂ ಓದಿ: ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

ಇದಕ್ಕೆಲ್ಲ ಹೆದರುವುದಿಲ್ಲ:

ಆದರೆ, ಈ ಆಕಸ್ಮಿಕ ಘಟನೆಯಿಂದ ವಿಚಲಿತರಾಗದ ಸಿಜೆಐ ಗವಾಯಿ ಅವರು ಕೋರ್ಟ್​ನಲ್ಲಿ ಹಾಜರಿದ್ದ ವಕೀಲರಿಗೆ ದಿನದ ಕಲಾಪಗಳನ್ನು ಮುಂದುವರಿಸುವಂತೆ ಸೂಚಿಸಿದರು. “ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ಇದಕ್ಕೆಲ್ಲ ವಿಚಲಿತರಾಗುವುದಿಲ್ಲ. ಇಂತಹ ಘಟನೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು. ಆ ವಕೀಲರನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಷ್ಣು ವಿಗ್ರಹದ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಗವಾಯಿ ನೀಡಿದ್ದ ಹೇಳಿಕೆಯನ್ನು ಉದ್ದೇಶಿಸಿ ಆ ವಕೀಲ ಈ ರೀತಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Mon, 6 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ