AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಲಸಗಾರರು ಕಾರ್ಯಸ್ಥಳದಲ್ಲಿಯೇ ಇದ್ದು ಕೆಲಸ ಮಾಡುತ್ತಿದ್ದಾರೆ..’ ವಿಸ್ತಾ ಯೋಜನೆಯ ಮುಂದುವರಿಸಿದ್ದನ್ನು ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ಎಲ್ಲ ಕಾರ್ಮಿಕರಿಗೂ ಆರೋಗ್ಯ ವಿಮೆ ವ್ಯವಸ್ಥೆಯಾಗಿದೆ. ಅಲ್ಲದೆ, ಕೆಲಸದ ಸ್ಥಳದಲ್ಲಿ ಆರ್​ಟಿ-ಪಿಸಿಆರ್​ ತಪಾಸಣೆ, ಐಸೋಲೇಶನ್​ ಮತ್ತು ಎಲ್ಲ ರೀತಿಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಕೋರ್ಟ್​ಗೆ ಮಾಹಿತಿ ನೀಡಿದೆ.

‘ಕೆಲಸಗಾರರು ಕಾರ್ಯಸ್ಥಳದಲ್ಲಿಯೇ ಇದ್ದು ಕೆಲಸ ಮಾಡುತ್ತಿದ್ದಾರೆ..' ವಿಸ್ತಾ ಯೋಜನೆಯ ಮುಂದುವರಿಸಿದ್ದನ್ನು ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ
ದೆಹಲಿ ಹೈಕೋರ್ಟ್
Lakshmi Hegde
|

Updated on: May 11, 2021 | 3:41 PM

Share

ದೆಹಲಿಯಲ್ಲಿ ಕರ್ಫ್ಯೂ ಹೇರುವುದಕ್ಕೂ ಮೊದಲೇ ಕೇಂದ್ರ ವಿಸ್ತಾ ಯೋಜನೆಯ ಕೆಲಸಗಳು ಪ್ರಾರಂಭವಾಗಿವೆ. ಇಲ್ಲಿ ಸುಮಾರು 400 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಕೊವಿಡ್​-19 ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಸರ್ಕಾರದ ಮಾರ್ಗಸೂಚಿಯ ಅನ್ವಯ ಕಾರ್ಮಿಕರೆಲ್ಲ ಸ್ಥಳದಲ್ಲಿಯೇ ವಾಸವಾಗಿದ್ದು, ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ.

ಕೊವಿಡ್​ 19 ಉಲ್ಬಣಿಸುತ್ತಿರುವ ಸಮಯದಲ್ಲಿ ವಿಸ್ತಾ ಯೋಜನೆಯಡಿ ನಡೆಯುತ್ತಿರುವ ನೂತನ ಸಂಸತ್​ ಭವನ ಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮಧ್ಯಂತರ ತಡೆ ನೀಡುವಂತೆ ಸಲ್ಲಿಸಲಾಗಿದ ಅರ್ಜಿಯ ವಿಚಾರಣೆ ಇಂದು ನಡೆಸಿದ ಹೈಕೋರ್ಟ್​ ನಾಳೆಗೆ ಮುಂದೂಡಿದೆ. ಇನ್ನು ಇಂದು ವಿಸ್ತಾ ಯೋಜನೆ ಕೆಲಸದ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ಸುಮಾರು 250 ಕೆಲಸಗಾರರು ಅಲ್ಲಿಯೇ ಸ್ಥಳದಲ್ಲಿಯೇ ಇದ್ದು ಕೆಲಸ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅವರಿಗೆ ಸ್ಥಳಾವಕಾಶ ಕಲ್ಪಿಸಿಕೊಡಲಾಗಿದೆ. ಅದರೊಂದಿಗೆ ಕೊವಿಡ್​ 19 ನಿಯಂತ್ರಣಾ ಕ್ರಮಗಳನ್ನೂ ಅಲ್ಲಿ ಅಳವಡಿಸಲಾಗಿದೆ.

ಎಲ್ಲ ಕಾರ್ಮಿಕರಿಗೂ ಆರೋಗ್ಯ ವಿಮೆ ವ್ಯವಸ್ಥೆಯಾಗಿದೆ. ಅಲ್ಲದೆ, ಕೆಲಸದ ಸ್ಥಳದಲ್ಲಿ ಆರ್​ಟಿ-ಪಿಸಿಆರ್​ ತಪಾಸಣೆ, ಐಸೋಲೇಶನ್​ ಮತ್ತು ಎಲ್ಲ ರೀತಿಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಕೋರ್ಟ್​ಗೆ ಮಾಹಿತಿ ನೀಡಿದೆ. ಅಲ್ಲದೆ ಕರ್ಫ್ಯೂ ಸಮಯದಲ್ಲಿ ಕೂಡ ಕಾರ್ಮಿಕರು ಸ್ಥಳದಲ್ಲೇ ವಾಸವಾಗಿದ್ದು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಳ್ಳಬಹುದು ಎಂದು 19-04-2021ರ ಡಿಡಿಎಂಎ( ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ)ಯ ಆದೇಶದ ಎಂಟನೇ ಪ್ರತಿಯಲ್ಲಿ ಉಲ್ಲೇಖವಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ.

ಇನ್ನು ಕೆಲಸಗಾರರನ್ನು ಪ್ರತಿದಿನ ಸಾರೈ ಕಾಳೆ ಕ್ಯಾಂಪ್​ನಿಂದ ಕರೆದುಕೊಂಡು ಬಂದು, ನಂತರ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖವಾಗಿದ್ದ ವಿಚಾರವನ್ನು ಅಲ್ಲಗಳೆದ ಸರ್ಕಾರ, ಈಗ ವಿಸ್ತಾ ಯೋಜನೆಯಡಿ ಎಷ್ಟು ಮಂದಿ ಕೆಲಸ ಮಾಡುತ್ತಿದ್ದಾರೋ, ಅವರೆಲ್ಲರೂ ಸ್ಥಳದಲ್ಲಿಯೇ ವಾಸವಾಗಿದ್ದುಕೊಂಡೇ ಕೆಲಸ ಮುಂದುವರಿಸಿದ್ದಾರೆ. ಕಾಮಗಾರಿ 2021ರ ನವೆಂಬರ್​ರಷ್ಟರಲ್ಲಿ ಮುಗಿಯಲಿದೆ ಎಂದು ಹೇಳಿದೆ. ದೇಶಾದ್ಯಂತ ಉಲ್ಬಣವಾಗುತ್ತಿರುವ ಕೊವಿಡ್​ 19 ಸೋಂಕಿನ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಕಾಮಗಾರಿಳನ್ನೂ ನಿಲ್ಲಿಸಲಾಗಿದೆ. ಈ ಹೊತ್ತಲ್ಲಿ ವಿಸ್ತಾ ಯೋಜನೆಯಡಿ ಮಾಡಲಾಗುತ್ತಿರುವ ಮರು ಅಭಿವೃದ್ಧಿ ಕಾರ್ಯಗಳನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ. ಇಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಸೋಂಕಿನ ಅಪಾಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವರು ದಿನವೂ ಕಾರ್ಯಸ್ಥಳ ಮತ್ತು ಕ್ಯಾಂಪ್​ಗಳಿಗೆ ಓಡಾಡುತ್ತಿರುವುದರಿಂದ ಬೇರೆಯವರಿಗೂ ಇವರಿಂದ ಕೊರೊನಾ ಸೋಂಕು ತಗಲುವ ಅಪಾಯ ಇರುತ್ತದೆ. ಹಾಗಾಗಿ ವಿಸ್ತಾ ಯೋಜನೆ ಕಾಮಗಾರಿಗೆ ಮಧ್ಯಂತರ ತಡೆ ನೀಡಬೇಕು ಎಂದು ಟ್ರಾನ್ಸ್​ಲೇಟರ್​ ಅನ್ಯಾ ಮಲ್ಹೋತ್ರಾ ಮತ್ತು ಇತಿಹಾಸ ತಜ್ಞ ಸೊಹೇಲ್​ ಹಷ್ಮಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್​ ಮಲ್ಹೋತ್ರಾ ವಾದ ಮಂಡನೆ ಮಾಡಿದ್ದರು. ಮುಖ್ಯ ನ್ಯಾಯಾಧೀಶ ಡಿ.ಎನ್​.ಪಟೇಲ್​ ಮತ್ತು ನ್ಯಾ. ಜಸ್ಮೀತ್ ಸಿಂಗ್​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ತಾಯಿಯ ಮುಖ ನೋಡದೆ ಮಕ್ಕಳ ಕಣ್ಣಿರು; ಹಾವೇರಿ ಶವಗಾರ ಸಿಬ್ಬಂದಿಯ ಯಡವಟ್ಟಿನಿಂದ ಮೃತ ದೇಹ ಅದಲು ಬದಲು

ಇನ್ನೂ ನಿಂತಿಲ್ಲ ಆಸ್ಪತ್ರೆಗಳ ಧನದಾಹ.. ಹಣ ಕೊಟ್ರೆ ಮಾತ್ರ ಮೃತ ದೇಹ ಕೊಡೋದು ಅಂತಿವೆ ಕರಾಳ ಆಸ್ಪತ್ರೆಗಳು

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?